Andolana originals

ಮಡಿಕೇರಿಯಲ್ಲಿ ಏಡಿ ಮಾರಾಟ ಬಲು ಜೋರು

ಪುನೀತ್ ಮಡಿಕೇರಿ

ಮಳೆಗಾಲದಲ್ಲಿ ಮೈ ಬೆಚ್ಚಗಿಡಲು ಏಡಿ ವಿಶೇಷ ಆಹಾರ 

ಮಡಿಕೇರಿ: ಮಳೆಯ ನಡುವೆ ಮಡಿಕೇರಿ ನಗರದಲ್ಲಿ ಏಡಿ ಮಾರಾಟ ಬಲು ಜೋರಾಗಿದೆ.

ಹೌದು. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಚಳಿಗೆ ದೇಹವನ್ನು ಬೆಚ್ಚಗಿಡಲು ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ವ್ಯಾಪಾರಿಗಳು ಏಡಿ, ಬಿದಿರು ಕಣಿಲೆ, ಮರಕೆಸ ಮಾರಾಟ ಮಾಡುತ್ತಿದ್ದಾರೆ. ಏಡಿ ವ್ಯಾಪಾರ ಬಲು ಜೋರಾಗಿ ಸಾಗಿದರೆ, ಕಣಿಲೆ, ಮರಕೆಸ ಒಂದು ದಿನ ವ್ಯಾಪಾರವಾದರೆ, ಮತ್ತೊಂದು ದಿನ ಬೇಡಿಕೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಜಿಲ್ಲೆಯ ಜನರು ಮಳೆಗಾಲದಲ್ಲಿ ವಿವಿಧ ಬಗೆಯ ಖಾದ್ಯಗಳ ಮೊರೆ ಹೋಗುವುದು ಸಾಮಾನ್ಯ. ಅದರಲ್ಲೂ ಮೈಕೊರೆಯುವ ಚಳಿಯಿಂದ ಬೆಚ್ಚಗಿರಿಸುವಂತಹ ಆಹಾರ ಪದಾರ್ಥಗಳನ್ನು ಜನ ಹೆಚ್ಚಾಗಿ ಇಷ್ಟ ಪಡುತ್ತಾರೆ.

ರಸ್ತೆ ಬದಿಯಲ್ಲಿ ವ್ಯಾಪಾರಿಗಳು ಹಾರಂಗಿ ಬ್ಯಾಕ್ ವಾಟರ್, ಎಚ್.ಡಿ.ಕೋಟೆ ಸೇರಿದಂತೆ ನದಿ, ತೋಡುಗಳಿಂದ ನಾಟಿ ಏಡಿಗಳನ್ನು ಹಿಡಿದು ತಂದು ಮಾರಾಟ ಮಾಡುತ್ತಿದ್ದಾರೆ. ಪ್ರತಿ ದಿನ ಮಡಿಕೇರಿಗೆ ಸುಮಾರು ೬೦-೭೦ ಕೆ.ಜಿ.ಜೀವಂತ ಏಡಿಗಳೊಂದಿಗೆ ಆಗಮಿಸುವ ಮಡಿಕೇರಿ ಕುಮಾರ್ ೧೨ ಏಡಿಗಳನ್ನು ದಾರದಲ್ಲಿ ಪೋಣಿಸಿಡುತ್ತಾರೆ. ಏಡಿ ಮಾಲೆಗೆ ೩೫೦ ರೂ.ನಂತೆ ಮಾರಾಟ ಮಾಡಲಾಗುತ್ತದೆ. ಕೆ.ಜಿ.ಗೆ ೩೦೦ ರೂ.ನಂತೆ ಮಾರಾಟ ಮಾಡುತ್ತಿದ್ದಾರೆ.

ಏಡಿಯ ಉಷ್ಣಾಂಶ ಸರಿದೂಗಿಸುವ ಆಹಾರ: ನಮ್ಮ ದೇಹದ ಉಷ್ಣತೆಯನ್ನು ಕಾಪಾಡುವುದೇ ಏಡಿಯ ವಿಶೇಷ. ಬೇಸಿಗೆ ಕಳೆದು ಮಳೆಗಾಲ ಬಂದಾಗ ದೇಹದಲ್ಲಿನ ಉಷ್ಣಾಂಶ ಕಡಿಮೆಯಾಗುತ್ತದೆ. ಅದನ್ನು ಸರಿದೂಗಿಸುವುದಕ್ಕಾಗಿ ಇಂಥ ಆಹಾರಗಳನ್ನೇ ಮಳೆಗಾಲದಲ್ಲಿ ಹೆಚ್ಚು ಸೇವಿಸಲಾಗುತ್ತದೆ. ಈ ಹಿಂದೆ ಭತ್ತದ ಗದ್ದೆಗಳಲ್ಲಿ, ಹಳ್ಳಕೊಳ್ಳಗಳಲ್ಲಿ ಹೇರಳವಾಗಿ ಸಿಗುತ್ತಿದ್ದ ಏಡಿ ಮಳೆಗಾಲದ ಜಂಕ್ ಫುಡ್ ಇದ್ದಹಾಗೆ. ಇವುಗಳನ್ನು ಸುಟ್ಟು ತಿನ್ನುವುದು, – ಮಾಡಿ ತಿನ್ನುವುದು ಗ್ರಾಮೀಣ ಜನರ ಹವ್ಯಾಸ. ಆದರೆ, ಇಂದು ಗದ್ದೆಗೆ ರಾಸಾಯನಿಕ ಗೊಬ್ಬರ ಹಾಕುವುದರಿಂದ ಮತ್ತು ಗದ್ದೆಯಲ್ಲಿ ಶುಂಠಿ ಬೆಳೆ ಬೆಳೆಯಲು ಆರಂಭಿಸಿದ ಮೇಲೆ ಏಡಿಗಳ ಸಂತತಿ ಕ್ಷೀಣಗೊಳ್ಳುತ್ತಿದೆ.

ಉಷ್ಣಾಂಶ ಹೊಂದಿರುವ ಖಾದ್ಯಗಳಿವು: ಏಡಿಯಂತೆಯೇ ಮರಕೆಸ ಹಾಗೂ ಕಣಿಲೆ ಕೂಡ ಉಷ್ಣಾಂಶ ಹೊಂದಿರುವ ಒಂದು ಖಾದ್ಯ. ವ್ಯಾಪಾರಿಗಳು ಇಂದು ಸುಮಾರು ಅರ್ಧ ಕಿಲೋ ತೂಕ ಹೊಂದಿರುವ ಕಣಿಲೆಯ ಒಂದು ಪ್ಯಾಕೆಟ್ ಅನ್ನು ೬೦ ರೂ.ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಅದೇ ರೀತಿ ಕರ್ಕಾಟಕ ಮಾಸದಲ್ಲಿ ಮರದ ಮೇಲೆ ಬಿಡುವ ಮರಕೆಸ ಎಂಬ ಸೊಪ್ಪು ಕೂಡ ಔಷಧ ರೂಪದೊಂದಿಗೆ ಉಷ್ಣಾಂಶ ಹೊಂದಿರುವ ಖಾದ್ಯವಾಗಿದೆ. ಕೊಡಗು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮರಕೆಸವನ್ನು ಬಳಸುತ್ತಾರೆ. ಆಟಿ ಮಾಸದಲ್ಲಿ ಒಂದು ದಿನವಾದರೂ ಈ ಸೊಪ್ಪನ್ನು ಉಪಯೋಗಿಸಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹಿರಿಯರು ಹೇಳುತ್ತಾರೆ. ಮರಕೆಸದಿಂದ ಪತ್ರೊಡೆ ಸೇರಿದಂತೆ ಇನ್ನಿತರ ಖಾದ್ಯಮಾಡಿ ಸವಿಯಲಾಗುತ್ತದೆ. ಅರಣ್ಯ ಪ್ರದೇಶದಲ್ಲಿ ಬೆಳೆಯುವ ಬಿದಿರಿನ ಕಣಿಲೆ ಮತ್ತು ಮರಕೆಸಕ್ಕೆ ಕೆಲವೊಮ್ಮೆ ಬೇಡಿಕೆ ಕೂಡ ಇದೆ.

” ಏಡಿ ಕೊಂಡುಕೊಳ್ಳಲು ಜನ  ಬರುತ್ತಿದ್ದಾರೆ. ಮಾರಾಟಕ್ಕೆ ತಂದ ಏಡಿಗಳು ಸಂಜೆ ಹೊತ್ತಿಗೆ ಖಾಲಿಯಾಗುತ್ತದೆ. ಹಾರಂಗಿ ಬ್ಯಾಕ್ ವಾಟರ್‌ನಿಂದ ಏಡಿ ತಂದು ಇಲ್ಲಿ ಮಾರಾಟ ಮಾಡುತ್ತಿದ್ದೇನೆ. ಕೊಡಗಿನಲ್ಲಿ ಹಲವು ಕಾರಣಗಳಿಂದ ಸ್ಥಳಿಯವಾಗಿ ಹೆಚ್ಚಿನ ಏಡಿ ದೊರೆಯುತ್ತಿಲ್ಲ. ಆದ್ದರಿಂದ ನಾವು ತಂದ ಏಡಿಯನ್ನು ಗ್ರಾಹಕರು ಕೊಂಡುಕೊಳ್ಳುತ್ತಾರೆ. ದಿನಕ್ಕೆ ೧೨ ಏಡಿಗಳುಳ್ಳ ೬೦-೭೦ ಸರಗಳು ಮಾರಾಟವಾಗುತ್ತದೆ.”

-ಕುಮಾರ್, ಏಡಿ ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

17 mins ago

ಮೈಸೂರು| ಕಣ್ಣಿಗೆ ಕಾರದಪುಡಿ ಎರಚಿ ಹಲ್ಲೆ ಬಳಿಕ ಅಪಹರಣ

ಮೈಸೂರು: ಕಣ್ಣಿಗೆ ಕಾರದಪುಡಿ ಎರಚಿ ವ್ಯಕ್ತಿಯೊಬ್ಬನಿಗೆ ಹಲ್ಲೆ ನಡೆಸಿ ಅಪಹರಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ವಿಜಯನಗರ ಮೂರನೇ ಹಂತದಲ್ಲಿ ಈ…

29 mins ago

ಗೋವಾದಲ್ಲಿ ಘೋರ ದುರಂತ: ಬಾಗಾ ಬೀಚ್‌ ಬಳಿ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ಅವಘಡ: 25 ಮಂದಿ ಸಜೀವ ದಹನ

ಗೋವಾ: ಇಲ್ಲಿನ ನೈಟ್‌ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, 25 ಜನ ಸಾವನ್ನಪ್ಪಿದ್ದಾರೆ. ಉತ್ತರ ಗೋವಾದ ಅರ್ಪೋರಾದಲ್ಲಿರುವ ನೈಟ್‌…

30 mins ago

ಓದುಗರ ಪತ್ರ: ಅಮೃತ ಬೇಕರಿ ನಿಲ್ದಾಣದಲ್ಲಿ ಬಸ್ ತಂಗುದಾಣ ನಿರ್ಮಿಸಿ

ಮೈಸೂರಿನ ಶ್ರೀರಾಂಪುರದ ಮಾರ್ಗದಲ್ಲಿ ಬರುವ ಅಮೃತ್ ಬೇಕರಿ ಬಸ್ ನಿಲ್ದಾಣದಲ್ಲಿ ನಿರ್ಮಿಸಲಾಗಿದ್ದ ತಂಗುದಾಣ ಹಾಳಾಗಿದ್ದು, ಬಸ್‌ಗಾಗಿ ಕಾಯುವವರು ರಸ್ತೆಯಲ್ಲಿ ನಿಲ್ಲಬೇಕಾದ…

57 mins ago

ಓದುಗರ ಪತ್ರ:  ತಂಬಾಕು ಉತ್ಪನ್ನ  ಸೆಸ್: ಕಠಿಣ ಕ್ರಮ ಅಗತ್ಯ

ನಿಕೋಟಿನ್, ಪಾನ್ ಮಸಾಲಾ ಮತ್ತು ಇತರೆ ಹೊಗೆ ರಹಿತ ತಂಬಾಕು ಪದಾರ್ಥಗಳ ಮೇಲೆ ಕೇಂದ್ರ ಸರ್ಕಾರ ಪ್ರಸ್ತಾವಿಸಿದ ಆರೋಗ್ಯ ಮತ್ತು…

1 hour ago

ಓದುಗರ ಪತ್ರ:  ಚಾ.ನಗರ-ಮೈಸೂರು ನಡುವೆ ಹೆಚ್ಚಿನ ರೈಲು ಸೌಲಭ್ಯ ಕಲ್ಪಿಸಿ

ಮೈಸೂರಿನಿಂದ ಚಾಮರಾಜನಗರಕ್ಕೆ ಪ್ರತಿನಿತ್ಯ ೬ ರೈಲುಗಳು ಸಂಚರಿಸುತ್ತಿವೆ. ಈಗ ಸಂಚರಿಸುವ ರೈಲುಗಳ ಜೊತೆ ಚಾಮರಾಜನಗರದಿಂದ ಮೈಸೂರಿಗೆ ಬೆಳಿಗ್ಗೆ ೪.೪೦ಕ್ಕೆ ,…

1 hour ago