Andolana originals

ಮಡಿಕೇರಿಯಲ್ಲಿ ಏಡಿ ಮಾರಾಟ ಬಲು ಜೋರು

ಪುನೀತ್ ಮಡಿಕೇರಿ

ಮಳೆಗಾಲದಲ್ಲಿ ಮೈ ಬೆಚ್ಚಗಿಡಲು ಏಡಿ ವಿಶೇಷ ಆಹಾರ 

ಮಡಿಕೇರಿ: ಮಳೆಯ ನಡುವೆ ಮಡಿಕೇರಿ ನಗರದಲ್ಲಿ ಏಡಿ ಮಾರಾಟ ಬಲು ಜೋರಾಗಿದೆ.

ಹೌದು. ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆ ಚಳಿಗೆ ದೇಹವನ್ನು ಬೆಚ್ಚಗಿಡಲು ನಗರದ ಪ್ರಮುಖ ರಸ್ತೆ ಬದಿಗಳಲ್ಲಿ ವ್ಯಾಪಾರಿಗಳು ಏಡಿ, ಬಿದಿರು ಕಣಿಲೆ, ಮರಕೆಸ ಮಾರಾಟ ಮಾಡುತ್ತಿದ್ದಾರೆ. ಏಡಿ ವ್ಯಾಪಾರ ಬಲು ಜೋರಾಗಿ ಸಾಗಿದರೆ, ಕಣಿಲೆ, ಮರಕೆಸ ಒಂದು ದಿನ ವ್ಯಾಪಾರವಾದರೆ, ಮತ್ತೊಂದು ದಿನ ಬೇಡಿಕೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ವ್ಯಾಪಾರಸ್ಥರು ಹೇಳುತ್ತಾರೆ.

ಜಿಲ್ಲೆಯ ಜನರು ಮಳೆಗಾಲದಲ್ಲಿ ವಿವಿಧ ಬಗೆಯ ಖಾದ್ಯಗಳ ಮೊರೆ ಹೋಗುವುದು ಸಾಮಾನ್ಯ. ಅದರಲ್ಲೂ ಮೈಕೊರೆಯುವ ಚಳಿಯಿಂದ ಬೆಚ್ಚಗಿರಿಸುವಂತಹ ಆಹಾರ ಪದಾರ್ಥಗಳನ್ನು ಜನ ಹೆಚ್ಚಾಗಿ ಇಷ್ಟ ಪಡುತ್ತಾರೆ.

ರಸ್ತೆ ಬದಿಯಲ್ಲಿ ವ್ಯಾಪಾರಿಗಳು ಹಾರಂಗಿ ಬ್ಯಾಕ್ ವಾಟರ್, ಎಚ್.ಡಿ.ಕೋಟೆ ಸೇರಿದಂತೆ ನದಿ, ತೋಡುಗಳಿಂದ ನಾಟಿ ಏಡಿಗಳನ್ನು ಹಿಡಿದು ತಂದು ಮಾರಾಟ ಮಾಡುತ್ತಿದ್ದಾರೆ. ಪ್ರತಿ ದಿನ ಮಡಿಕೇರಿಗೆ ಸುಮಾರು ೬೦-೭೦ ಕೆ.ಜಿ.ಜೀವಂತ ಏಡಿಗಳೊಂದಿಗೆ ಆಗಮಿಸುವ ಮಡಿಕೇರಿ ಕುಮಾರ್ ೧೨ ಏಡಿಗಳನ್ನು ದಾರದಲ್ಲಿ ಪೋಣಿಸಿಡುತ್ತಾರೆ. ಏಡಿ ಮಾಲೆಗೆ ೩೫೦ ರೂ.ನಂತೆ ಮಾರಾಟ ಮಾಡಲಾಗುತ್ತದೆ. ಕೆ.ಜಿ.ಗೆ ೩೦೦ ರೂ.ನಂತೆ ಮಾರಾಟ ಮಾಡುತ್ತಿದ್ದಾರೆ.

ಏಡಿಯ ಉಷ್ಣಾಂಶ ಸರಿದೂಗಿಸುವ ಆಹಾರ: ನಮ್ಮ ದೇಹದ ಉಷ್ಣತೆಯನ್ನು ಕಾಪಾಡುವುದೇ ಏಡಿಯ ವಿಶೇಷ. ಬೇಸಿಗೆ ಕಳೆದು ಮಳೆಗಾಲ ಬಂದಾಗ ದೇಹದಲ್ಲಿನ ಉಷ್ಣಾಂಶ ಕಡಿಮೆಯಾಗುತ್ತದೆ. ಅದನ್ನು ಸರಿದೂಗಿಸುವುದಕ್ಕಾಗಿ ಇಂಥ ಆಹಾರಗಳನ್ನೇ ಮಳೆಗಾಲದಲ್ಲಿ ಹೆಚ್ಚು ಸೇವಿಸಲಾಗುತ್ತದೆ. ಈ ಹಿಂದೆ ಭತ್ತದ ಗದ್ದೆಗಳಲ್ಲಿ, ಹಳ್ಳಕೊಳ್ಳಗಳಲ್ಲಿ ಹೇರಳವಾಗಿ ಸಿಗುತ್ತಿದ್ದ ಏಡಿ ಮಳೆಗಾಲದ ಜಂಕ್ ಫುಡ್ ಇದ್ದಹಾಗೆ. ಇವುಗಳನ್ನು ಸುಟ್ಟು ತಿನ್ನುವುದು, – ಮಾಡಿ ತಿನ್ನುವುದು ಗ್ರಾಮೀಣ ಜನರ ಹವ್ಯಾಸ. ಆದರೆ, ಇಂದು ಗದ್ದೆಗೆ ರಾಸಾಯನಿಕ ಗೊಬ್ಬರ ಹಾಕುವುದರಿಂದ ಮತ್ತು ಗದ್ದೆಯಲ್ಲಿ ಶುಂಠಿ ಬೆಳೆ ಬೆಳೆಯಲು ಆರಂಭಿಸಿದ ಮೇಲೆ ಏಡಿಗಳ ಸಂತತಿ ಕ್ಷೀಣಗೊಳ್ಳುತ್ತಿದೆ.

ಉಷ್ಣಾಂಶ ಹೊಂದಿರುವ ಖಾದ್ಯಗಳಿವು: ಏಡಿಯಂತೆಯೇ ಮರಕೆಸ ಹಾಗೂ ಕಣಿಲೆ ಕೂಡ ಉಷ್ಣಾಂಶ ಹೊಂದಿರುವ ಒಂದು ಖಾದ್ಯ. ವ್ಯಾಪಾರಿಗಳು ಇಂದು ಸುಮಾರು ಅರ್ಧ ಕಿಲೋ ತೂಕ ಹೊಂದಿರುವ ಕಣಿಲೆಯ ಒಂದು ಪ್ಯಾಕೆಟ್ ಅನ್ನು ೬೦ ರೂ.ಗಳಿಗೆ ಮಾರಾಟ ಮಾಡುತ್ತಿದ್ದಾರೆ. ಅದೇ ರೀತಿ ಕರ್ಕಾಟಕ ಮಾಸದಲ್ಲಿ ಮರದ ಮೇಲೆ ಬಿಡುವ ಮರಕೆಸ ಎಂಬ ಸೊಪ್ಪು ಕೂಡ ಔಷಧ ರೂಪದೊಂದಿಗೆ ಉಷ್ಣಾಂಶ ಹೊಂದಿರುವ ಖಾದ್ಯವಾಗಿದೆ. ಕೊಡಗು ಮಾತ್ರವಲ್ಲದೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮರಕೆಸವನ್ನು ಬಳಸುತ್ತಾರೆ. ಆಟಿ ಮಾಸದಲ್ಲಿ ಒಂದು ದಿನವಾದರೂ ಈ ಸೊಪ್ಪನ್ನು ಉಪಯೋಗಿಸಿದರೆ ಆರೋಗ್ಯಕ್ಕೆ ಒಳ್ಳೆಯದು ಎಂದು ಹಿರಿಯರು ಹೇಳುತ್ತಾರೆ. ಮರಕೆಸದಿಂದ ಪತ್ರೊಡೆ ಸೇರಿದಂತೆ ಇನ್ನಿತರ ಖಾದ್ಯಮಾಡಿ ಸವಿಯಲಾಗುತ್ತದೆ. ಅರಣ್ಯ ಪ್ರದೇಶದಲ್ಲಿ ಬೆಳೆಯುವ ಬಿದಿರಿನ ಕಣಿಲೆ ಮತ್ತು ಮರಕೆಸಕ್ಕೆ ಕೆಲವೊಮ್ಮೆ ಬೇಡಿಕೆ ಕೂಡ ಇದೆ.

” ಏಡಿ ಕೊಂಡುಕೊಳ್ಳಲು ಜನ  ಬರುತ್ತಿದ್ದಾರೆ. ಮಾರಾಟಕ್ಕೆ ತಂದ ಏಡಿಗಳು ಸಂಜೆ ಹೊತ್ತಿಗೆ ಖಾಲಿಯಾಗುತ್ತದೆ. ಹಾರಂಗಿ ಬ್ಯಾಕ್ ವಾಟರ್‌ನಿಂದ ಏಡಿ ತಂದು ಇಲ್ಲಿ ಮಾರಾಟ ಮಾಡುತ್ತಿದ್ದೇನೆ. ಕೊಡಗಿನಲ್ಲಿ ಹಲವು ಕಾರಣಗಳಿಂದ ಸ್ಥಳಿಯವಾಗಿ ಹೆಚ್ಚಿನ ಏಡಿ ದೊರೆಯುತ್ತಿಲ್ಲ. ಆದ್ದರಿಂದ ನಾವು ತಂದ ಏಡಿಯನ್ನು ಗ್ರಾಹಕರು ಕೊಂಡುಕೊಳ್ಳುತ್ತಾರೆ. ದಿನಕ್ಕೆ ೧೨ ಏಡಿಗಳುಳ್ಳ ೬೦-೭೦ ಸರಗಳು ಮಾರಾಟವಾಗುತ್ತದೆ.”

-ಕುಮಾರ್, ಏಡಿ ವ್ಯಾಪಾರಿ

ಆಂದೋಲನ ಡೆಸ್ಕ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

10 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

11 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

13 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

14 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

15 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

15 hours ago