Andolana originals

ದ್ವಿಗುಣದ ಆಸೆ ತೋರಿಸಿ ಕೋಟಿಗಟ್ಟಲೆ ಹಣ ಗುಳುಂ

ಮಂಡ್ಯ: ನಯವಂಚಕನೊಬ್ಬ ದೇವರ ವಿಗ್ರಹ ಮತ್ತು ಹಳೆಯ ಮಸಿ ಹಿಡಿದಿರುವ ತಂಬಿಗೆಯನ್ನುಮಹಿಳೆಯರಿಗೆ ತೋರಿಸಿ, ಇದರಿಂದ ಹಣ ದ್ವಿಗುಣಗೊಳಿಸುತ್ತೇನೆ ಎಂದು ನಂಬಿಸಿ ಕೋಟಿಗಟ್ಟಲೆ ಹಣವನ್ನು ಪಡೆದು ವಂಚಿಸಿರುವ ಘಟನೆ ತಾಲ್ಲೂಕಿನ ದ್ಯಾಪ ಸಂದ್ರ ಗ್ರಾಮದಲ್ಲಿ ನಡೆದಿದೆ.

ಹುಣಸೂರು ಮೂಲದ ನಾಗರಾಜು ಮಹಿಳೆಯರನ್ನು ನಂಬಿಸಿ ಕೋಟ್ಯಂತರ ರೂಪಾಯಿ ಲಪಟಾಯಿಸಿದವನಾಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.

ಹಳೆಯ ಪಾತ್ರೆ, ಪುರಾತನ ವಿಗ್ರಹಗಳಿಂದ ಹಣ ದ್ವಿಗುಣ ಮಾಡುವುದಾಗಿ ನಾಗರಾಜು ಮಹಿಳೆಯರಿಗೆ ಆಸೆ ಹುಟ್ಟಿಸಿದ್ದಾನೆ. ಈತನ ಮಾತನ್ನು ನಂಬಿದ ಮಹಿಳೆಯರು ತಮ್ಮಗಂಡಂದಿರಿಗೆ ತಿಳಿಯದಂತೆ ಹಣವನ್ನು ನೀಡಿದ್ದಾರೆ. ಮಸಿ ಹಿಡಿದಿರುವ ಹಿತ್ತಾಳೆಯ ತಂಬಿಗೆ, ದೇವರ ವಿಗ್ರಹವನ್ನು ತೋರಿಸಿದ ನಾಗರಾಜು, ಇವುಗಳನ್ನು ದೇವಸ್ಥಾನದಲ್ಲಿ ಇಟ್ಟು ಪೂಜೆ ಮಾಡಬೇಕು.

ನಂತರ ಪಾತ್ರೆಯಲ್ಲಿ ಏನೇ ಹಾಕಿದರೂ ದ್ವಿಗುಣಗೊಳ್ಳುತ್ತದೆ ಎಂದು ಹೇಳಿದ್ದಲ್ಲದೆ, ದೊಡ್ಡ ದೊಡ್ಡಹೋಟೆಲ್‌ಗಳಲ್ಲಿ ದೊಡ್ಡ ದೊಡ್ಡ ಜನರ ಜತೆ ಸಭೆಗಳನ್ನು ನಡೆಸಿ, ದ್ಯಾಪಸಂದ್ರ ಗ್ರಾಮದ ಮಹಿಳೆಯರಲ್ಲಿ ನಂಬಿಕೆ ಹುಟ್ಟಿಸಿದ್ದಾನೆ. ಇದೆಲ್ಲವನ್ನೂ ನೋಡಿದ ಮಹಿಳೆಯರು ತಮ್ಮ ಗಂಡಂದಿರಿಗೆ ಕಾಣದ ಹಾಗೆ ನಾಗರಾಜುಗೆ ಹಣವನ್ನು ತಂದು ಕೊಟ್ಟಿದ್ದಾರೆ. ನಂತರದ ದಿನಗಳಲ್ಲಿ ಈತ ಮಾಡುತ್ತಿರುವುದು ಮೋಸ ಎಂದು ತಿಳಿದು ಪ್ರಶ್ನಿಸ ತೊಡಗಿದ್ದಾರೆ. ತನ್ನ ಕೃತ್ಯ  ಬಯಲಾಗುತ್ತಿರುವುದನ್ನು ಅರಿತ ನಾಗರಾಜು ದ್ಯಾಪಸಂದ್ರ ಗ್ರಾಮದಿಂದ ಕಾಲ್ಕಿತ್ತಿದ್ದಾನೆ.  ಇದರಿಂದ ಗಾಬರಿಗೊಂಡ ಮಹಿಳೆಯರು ತಮ್ಮ ಗಂಡಂದಿರಿಗೆ ವಿಷಯ ತಿಳಿಸಿ ಕೆರಗೋಡು ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ಭೇದಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಡಿವೈಎಸ್ಪಿ ಲಕ್ಷ್ಮಿನಾರಾಯಣ ಪ್ರಸಾದ್, ಸಿಪಿಐ ಮಹೇಶ್, ಕೆರಗೋಡು ಠಾಣೆ ಪಿಎಸ್‌ಐ ದೀಕ್ಷಿತ್ ಅವರನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಿದರು. ಆರೋಪಿ ನಾಗರಾಜುವಿನ ಚಲನವಲನವನ್ನು ಪತ್ತೆ ಹಚ್ಚಿದ ತನಿಖಾ ತಂಡದ ಪೊಲೀಸ್ ಅಧಿಕಾರಿಗಳು ಉಡುಪಿಯಲ್ಲಿ ಆತನನ್ನು ಪತ್ತೆಹಚ್ಚಿ ಬಂಽಸಿ, ಮಂಡ್ಯಕ್ಕೆ ಕರೆತಂದು ವಿಚಾರಣೆ ನಡೆಸಲಾಗಿ ಕೋಟಿಗಟ್ಟಲೆ ವಂಚಿಸಿರುವುದು ಬೆಳಕಿಗೆ ಬಂದಿದೆ.

ಆರೋಪಿ ನಾಗರಾಜು ಹಿನ್ನೆಲೆ: ಹುಣಸೂರಿನಲ್ಲಿ ಐಸ್ ಕ್ಯಾಂಡಿ ಮಾರುತ್ತಿದ್ದ ಆರೋಪಿ ನಾಗರಾಜು, ನಂತರದಲ್ಲಿ ಚಾಲಕನಾಗಿ ಟ್ರಾಕ್ಟರ್ ಇತರೆ ವಾಹನಗಳನ್ನು ಚಾಲನೆ ಮಾಡಿಕೊಂಡಿದ್ದನು. ತದನಂತರ ರೈಸ್ ಪುಲ್ಲಿಂಗ್ ಮಾಡುತ್ತಿದ್ದವರ ಸಂಪರ್ಕ ಪಡೆದು ಡ್ರೈವಿಂಗ್ ಕೆಲಸ ಬಿಟ್ಟು ರೈಸ್ ಪುಲ್ಲಿಂಗ್ ಮಾಡಲು ಕೋದಂಡರಾಮ ಎಂಬವರ ಜತೆ ಸೇರಿಕೊಂಡನು.

ಬಳಿಕ ದ್ಯಾಪಸಂದ್ರ ಗ್ರಾಮದ ರೈಸ್‌ಮಿಲ್‌ವೊಂದರಲ್ಲಿ ಕೆಲಸಕ್ಕೆ ಸೇರಿದ ನಾಗರಾಜು, ಜನರ ಸಂಪರ್ಕ ಗಿಟ್ಟಿಸಿ, ಹಳೇ ಪಾತ್ರೆ ಹಾಗೂ ದೇವರ ವಿಗ್ರಹ ತೋರಿಸಿ ಹಣ ದ್ವಿಗುಣಗೊಳಿಸುವುದಾಗಿ ಮಹಿಳೆಯರನ್ನು ಬಣ್ಣ ಬಣ್ಣದ ಮಾತುಗಳಿಂದ ಯಾಮಾರಿಸಿ ವಂಚನೆ ಮಾಡಿದ್ದಾನೆ.

“ನಾಗರಾಜು ಹಿಂದೆ ಕೋದಂಡರಾಮ ಎಂಬವರಜತೆ ಸೇರಿ ರೈಸ್ ಪುಲ್ಲಿಂಗ್ ಮಾಡಿ ಹಣ ಮಾಡುತ್ತಿದ್ದನು. ಬಳಿಕ ಹೆಚ್ಚಿನ ಹಣ ಮಾಡುವ ಉದ್ದೇಶದಿಂದ ಮೈಸೂರಿನಿಂದ ದೇವರ ವಿಗ್ರಹ ಹಾಗೂ ಹಿತ್ತಾಳೆಯ ಒಂದುತಂಬಿಗೆಯನ್ನು ತಂದು ಮಹಿಳೆಯರಿಗೆ ತೋರಿಸಿ,  ತಂಬಿಗೆಗೆ ಸಿಡಿಲು ಬಡಿದಿದೆ, ಇದಕ್ಕೆ ಹಣವನ್ನು ಹಾಕಿದರೆ ದ್ವಿಗುಣ ಆಗುತ್ತದೆ. ದೇವರ ವಿಗ್ರಹ ಮತ್ತು ಹಳೆಯ ಪಾತ್ರೆಯನ್ನು ದೇವಸ್ಥಾನಗಳಲ್ಲಿ ಇಟ್ಟು ಪೂಜೆ ಮಾಡಿದರೆ ಒಳ್ಳೆಯದಾಗುತ್ತದೆ ಎಂದು ಜನರನ್ನು ನಂಬಿಸಿದ್ದಾನೆ. ಹಣ ದ್ವಿಗುಣವಾಗುತ್ತದೆ ಎಂದು ನಂಬಿದ ಮಹಿಳೆಯರು ತಮ್ಮ ಗಂಡಂದಿರಿಗೆ ಗೊತ್ತಾಗದಂತೆ ಆರೋಪಿ ನಾಗರಾಜುಗೆ ಹಣ ನೀಡಿದ್ದಾರೆ. ಮಹಿಳೆಯರಿಂದ ಹಣ ಪಡೆದ ನಾಗರಾಜು ಅಲ್ಲಿಂದ ಕಾಲ್ಕಿತ್ತಿದ್ದ. ಉಡುಪಿಯಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ನಮ್ಮ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದಾರೆ.” – ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪೊಲೀಸ್ ಅಧೀಕ್ಷಕ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

5 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago