ಓದುಗರ ಪತ್ರ
ಅಸ್ಸಾಂನ ಶಾಲೆಯೊಂದರಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಹಿಂದಿ ಐಟಂ ಹಾಡಿಗೆ ನೃತ್ಯ ಮಾಡಿಸಿರುವುದಾಗಿ ವರದಿಯಾಗಿದ್ದು, ವಿದ್ಯೆ, ವಿನಯ್, ಸಂಸ್ಕೃತಿ ಬೋಧಿಸಬೇಕಿದ್ದ ಶಿಕ್ಷಕರು ಇಂತಹ ಹಾಡುಗಳಿಗೆ ನೃತ್ಯ ಕಲಿಸುವುದು ಎಷ್ಟು ಸರಿ?
ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಈ ನೆಲದ ಸಂಸ್ಕೃತಿಯನ್ನೂ ಬೋಧಿಸುವುದು ಶಿಕ್ಷಕರ ಕರ್ತವ್ಯ. ಆದರೆ ಈ ಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಿಕ್ಷಕರು ಮಕ್ಕಳಿಂದ ಐಟಂ ಹಾಡಿಗೆ ನೃತ್ಯ ಮಾಡಿಸಿರುವುದು ಮಕ್ಕಳು ಹಾದಿ ತಪ್ಪಲು ಬುನಾದಿ ಹಾಕಿದಂತಾಗಿದೆ.
ಮಕ್ಕಳಿಗೆ ಅವರು ಶಾಲೆಯಲ್ಲಿ ಕಲಿಯುವಾಗಲೇ ಯಾವುದೇ ಸರಿ, ಯಾವುದು ತಪ್ಪು, ಸಮಾಜದಲ್ಲಿ ಸನ್ನಡತೆಯಿಂದ ಉತ್ತಮ ನಾಗರಿಕರಾಗಿ ಬದುಕುವುದು ಹೇಗೆ ಎಂಬುದನ್ನು ಕಲಿಸುವುದು ಪೋಷಕರ ಜತೆಗೆ ಶಿಕ್ಷಕರ ಜವಾಬ್ದಾರಿಯೂ ಹೌದು. ಆದ್ದರಿಂದ ಶಿಕ್ಷಕರು ಶಾಲಾ ಹಂತದಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಈ ನೆಲದ ಸಂಸ್ಕೃತಿಯನ್ನೂ ಕಲಿಸುವ ಬಗ್ಗೆ ಗಮನಹರಿಸಲಿ.
-ಪುಂಡಲಿಕ ಲಮಾಣಿ, ಮೈಸೂರು.
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…
ಮಂಡ್ಯ: ಸುಮಾರು 15 ತಿಂಗಳಿನಿಂದ ವೇತನ ಸಿಗದೇ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದ ಮಂಡ್ಯದ ಮೈಶುಗರ್ ಶಾಲೆಯ ಶಿಕ್ಷಕರ ಬಾಕಿ ವೇತನಕ್ಕಾಗಿ…
ಹಾಸನ: ಗ್ಯಾರಂಟಿಗೆ ಕೋಟಿಗಟ್ಟಲೇ ಹಣ ಖರ್ಚು ಮಾಡ್ತಿರೋದು ಸಮಾನತೆ ತರಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಹಾಸನದಲ್ಲಿ…