ಓದುಗರ ಪತ್ರ
ಅಸ್ಸಾಂನ ಶಾಲೆಯೊಂದರಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಹಿಂದಿ ಐಟಂ ಹಾಡಿಗೆ ನೃತ್ಯ ಮಾಡಿಸಿರುವುದಾಗಿ ವರದಿಯಾಗಿದ್ದು, ವಿದ್ಯೆ, ವಿನಯ್, ಸಂಸ್ಕೃತಿ ಬೋಧಿಸಬೇಕಿದ್ದ ಶಿಕ್ಷಕರು ಇಂತಹ ಹಾಡುಗಳಿಗೆ ನೃತ್ಯ ಕಲಿಸುವುದು ಎಷ್ಟು ಸರಿ?
ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಈ ನೆಲದ ಸಂಸ್ಕೃತಿಯನ್ನೂ ಬೋಧಿಸುವುದು ಶಿಕ್ಷಕರ ಕರ್ತವ್ಯ. ಆದರೆ ಈ ಶಾಲೆಯಲ್ಲಿ ಸೆಪ್ಟೆಂಬರ್ 5ರಂದು ಆಯೋಜಿಸಿದ್ದ ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಶಿಕ್ಷಕರು ಮಕ್ಕಳಿಂದ ಐಟಂ ಹಾಡಿಗೆ ನೃತ್ಯ ಮಾಡಿಸಿರುವುದು ಮಕ್ಕಳು ಹಾದಿ ತಪ್ಪಲು ಬುನಾದಿ ಹಾಕಿದಂತಾಗಿದೆ.
ಮಕ್ಕಳಿಗೆ ಅವರು ಶಾಲೆಯಲ್ಲಿ ಕಲಿಯುವಾಗಲೇ ಯಾವುದೇ ಸರಿ, ಯಾವುದು ತಪ್ಪು, ಸಮಾಜದಲ್ಲಿ ಸನ್ನಡತೆಯಿಂದ ಉತ್ತಮ ನಾಗರಿಕರಾಗಿ ಬದುಕುವುದು ಹೇಗೆ ಎಂಬುದನ್ನು ಕಲಿಸುವುದು ಪೋಷಕರ ಜತೆಗೆ ಶಿಕ್ಷಕರ ಜವಾಬ್ದಾರಿಯೂ ಹೌದು. ಆದ್ದರಿಂದ ಶಿಕ್ಷಕರು ಶಾಲಾ ಹಂತದಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಈ ನೆಲದ ಸಂಸ್ಕೃತಿಯನ್ನೂ ಕಲಿಸುವ ಬಗ್ಗೆ ಗಮನಹರಿಸಲಿ.
-ಪುಂಡಲಿಕ ಲಮಾಣಿ, ಮೈಸೂರು.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…