Andolana originals

ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ : ಎಸ್‌ಪಿ

ಆಂದೋಲನ ಫೋನ್-ಇನ್‌ನಲ್ಲಿ ವಿಷ್ಣುವರ್ಧನ್‌ ಭರವಸೆ

ಮೈಸೂರು: ಗ್ರಾಮೀಣ ಪ್ರದೇಶಗಳ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟದ ದಂಧೆ, ಜೂಜಾಟ, ಕಳ್ಳತನ, ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳು ಮುಂತಾದ ವಿಷಯಗಳೇ ಫೋನ್ ಇನ್ ಕಾರ್ಯಕ್ರಮದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಧ್ವನಿಸಿದವು.ಮೈಸೂರು: ಗ್ರಾಮೀಣ ಪ್ರದೇಶಗಳ ಕಿರಾಣಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟದ ದಂಧೆ, ಜೂಜಾಟ, ಕಳ್ಳತನ, ಹೆಚ್ಚುತ್ತಿರುವ ದೌರ್ಜನ್ಯ ಪ್ರಕರಣಗಳು ಮುಂತಾದ ವಿಷಯಗಳೇ ಫೋನ್ ಇನ್ ಕಾರ್ಯಕ್ರಮದಲ್ಲಿ ದೊಡ್ಡ ಮಟ್ಟದಲ್ಲಿ ಪ್ರತಿಧ್ವನಿಸಿದವು.

ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್ ಅವರೊಂದಿಗೆ ‘ಆಂದೋಲನ’ ಗುರುವಾರ ಆಯೋಜಿಸಿದ್ದ ಫೋನ್-ಇನ್ ಕಾರ್ಯಕ್ರಮದಲ್ಲಿ ಗ್ರಾಮೀಣ ಭಾಗದಿಂದ ಬಂದ ಬಹುತೇಕ ಕರೆಗಳು ಅಕ್ರಮ ಮದ್ಯ ಮಾರಾಟದ ದೂರುಗಳನ್ನೇ ಕುರಿತದ್ದಾಗಿದ್ದವು.

ತಾಳ್ಮೆ, ಸಂಯಮದಿಂದ ನಾಗರಿಕರ ಅಹವಾಲುಗಳನ್ನು ಆಲಿಸಿದ ಎನ್. ವಿಷ್ಣುವರ್ಧನ್, ಅವುಗಳಿಗೆ ಪ್ರತಿಕ್ರಿಯಿಸಿ ಶೀಘ್ರದಲ್ಲೇ ಹಳ್ಳಿಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ಮಾರಾಟಕ್ಕೆ ಕಡಿವಾಣ ಹಾಕುವುದಾಗಿ ಭರವಸೆ ನೀಡಿದರಲ್ಲದೆ, ಪೊಲೀಸರು, ಅಬಕಾರಿ ಇಲಾಖೆ ಅಬಕಾರಿಗಳ ಕಣ್ತಪ್ಪಿಸಿ ಮದ್ಯ ಮಾರಾಟ ಮಾಡುವವರನ್ನು ಪತ್ತೆಹಚ್ಚಲು ವಿಶೇಷ ತಂಡ ರಚನೆ ಮಾಡಲು ನಿರ್ಧರಿಸಿರುವುದಾಗಿ ತಿಳಿಸಿದರು.

ಫೋನ್-ಇನ್‌ನಲ್ಲಿ ವಿಷ್ಣುವರ್ಧನ್ ಅವರು ಒಂದು ಗಂಟೆಗೂ ಹೆಚ್ಚು ಕಾಲ ಜಿಲ್ಲೆಯ ನಾನಾ ಭಾಗಗಳಿಂದ ಬಂದ ಜನಸಾಮಾನ್ಯರ ಕರೆಗಳನ್ನು ಸ್ವೀಕರಿಸಿ ಪ್ರತಿಕ್ರಿಯಿಸಿದರು. ನಾಗರಿಕರು ಕೇಳಿದ ಪ್ರಶ್ನೆಗಳಿಗೆ ಸಮಾಧಾನದ ಉತ್ತರ ನೀಡುವ ಜತೆಗೆ ಮುಂದಿನ ದಿನಗಳಲ್ಲಿ ಇಲಾಖೆಯಿಂದ ಕೈಗೊಳ್ಳುವ ಕ್ರಮಗಳ ಕುರಿತು ಭರವಸೆಯ ಮಾತುಗಳನ್ನಾಡಿದರು.

ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವ ದರೋಡೆ, ಕಳ್ಳತನ, ದೌರ್ಜನ್ಯಗಳ ಜೊತೆಗೆ ಬಡ, ಮಧ್ಯಮ ವರ್ಗಗಳ ಸಂಸಾರವನ್ನು ಹಾಳು ಮಾಡುವಂತಹ ಮದ್ಯ ಮಾರಾಟ ದಂಧೆಯಿಂದ ಬೇಸತ್ತು ಹೋಗಿದ್ದ ಹಳ್ಳಿಯ ಜನರು, . ತಮ್ಮೂರಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರನ್ನು ಪ್ರಶ್ನಿಸಲಾಗದ ಸಂಕಷ್ಟದಿಂದ ‘ ಆಂದೋಲನ’ ನೇರ ಫೋನ್-ಇನ್ ಕಾರ್ಯಕ್ರಮವನ್ನು ಸಮರ್ಥವಾಗಿ ಬಳಸಿಕೊಂಡರು.

ಬೆಳಿಗ್ಗೆ ೯ ಗಂಟೆಯಿಂದಲೇ ದೂರವಾಣಿ ಕರೆಗಳು ಬರಲಾರಂಭಿಸಿದ್ದವು. ಆದರೆ, ನಿಗದಿಯಂತೆ ಬೆಳಿಗ್ಗೆ ೧೧ಕ್ಕೆ ಕಾರ್ಯಕ್ರಮ ಶುರುವಾಗುತ್ತಿದ್ದಂತೆ ಬಿಡುವು ಇಲ್ಲದಂತೆ ನಿರಂತರವಾಗಿ ಕರೆಗಳು ಬಂದವು . ಕರೆ ಮಾಡಿದ ಬಹುತೇಕ ಮಂದಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ನಾವು ಅರ್ಜಿ ಕೊಟ್ಟು ಬಂದ ಮೇಲೆ ನಮ್ಮ ಮೇಲೆ ಧಮಕಿ ಹಾಕುತ್ತಾರೆ. ಹಲವೆಡೆ ಪೊಲೀಸರು, ಅಬಕಾರಿ ಇಲಾಖೆ ಅಬಕಾರಿಗಳಿಗೆ ವಿಷಯ ಗೊತ್ತಿದ್ದರೂ ಸುಮ್ಮನಾಗಿದ್ದಾರೆ ಎಂದು ದೂರಿದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಎಸ್‌ಪಿ, ಈಗಾಗಲೇ ಸಾಕಷ್ಟು ದೂರುಗಳು ಬಂದಿವೆ. ಹಳ್ಳಿಗಳಲ್ಲಿ ಮದ್ಯ ಮಾರಾಟ ಮಾಡುವವರು ನಗರ ಪ್ರದೇಶದಿಂದಲೇ ಖರೀದಿಸಿ ಹೋಗುತ್ತಾರೆ. ಹಾಗಾಗಿ ಮುಂದೆ ಪ್ರತಿಯೊಂದು ಚೆಕ್‌ಪೋಸ್ಟ್, ಗ್ರಾಮ ಠಾಣೆಯ ಬಳಿ ಗಸ್ತು ಮಾಡಿ ಪರಿಶೀಲಿಸಲಾಗುವುದು ಎಂದು ಭರವಸೆ ನೀಡಿದರು.

ನಂತರ, ಕೆಲವರು ಸೈಬರ್ ಕ್ರ್ತ್ಯೈಂ ಬಗ್ಗೆ ದೂರಿತ್ತರು. ಅನಾಮಧೇಯ ಕರೆಗಳನ್ನು ಸ್ವೀಕರಿಸಿದ ತಕ್ಷಣ ನಮ್ಮ ಖಾತೆಯಿಂದ ಹಣ ಕಡಿತವಾಗುತ್ತದೆ. ನಮಗೆ ದೂರು ಕೊಡುವುದು ಗೊತ್ತಿಲ್ಲ, ಇದಕ್ಕೆ ಪರಿಹಾರ ಇಲ್ಲವೇ ಎಂದು ಪ್ರಶ್ನಿಸಿದಾಗ, ಅಪರಿಚಿತ ಕರೆಗಳನ್ನು ಸ್ವೀಕರಿಸಬಾರದು. ಒಂದು ವೇಳೆ ಸ್ವೀಕರಿಸಿದರೂ ಯಾವ ಮಾಹಿತಿ ಹಂಚಿಕೊಳ್ಳಬಾರದೆಂದು ಸಲಹೆ ನೀಡಿದರು.

ಸಮಸ್ಯೆ ಎದುರಾದರೆ ೧೧೨ ಸಂಪರ್ಕಿಸಿ
ಯಾವುದೇ ರೀತಿಯ ಸಮಸ್ಯೆ ಕಂಡು ಬಂದರೆ ತಕ್ಷಣವೇ ೧೧೨ ಸಂಖ್ಯೆಗೆ ಕರೆ ಮಾಡಿ. ಪೊಲೀಸರು ತಕ್ಷಣ ಸ್ಥಳಕ್ಕೆ ಬರುವರು. ದೂರು ನೀಡಿದ ವರ ಹೆಸರನ್ನು ಗೌಪ್ಯವಾಗಿಡಲಾಗುವುದು. ಉಚಿತ ಸಹಾಯವಾಣಿ ೧೧೨ಅನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು. -ಎನ್. ವಿಷ್ಣುವರ್ಧನ್

ರಸ್ತೆಯಲ್ಲಿ ಒಕ್ಕಣೆ ಮಾಡಿದರೆ ಕ್ರಮ
ವೆಂಕಟೇಶ್, ವಿಜಯನಗರ: ರಸ್ತೆಯಲ್ಲಿ ಧಾನ್ಯ ಒಕ್ಕಣೆಯನ್ನು ಪೊಲೀಸರು ತಡೆಯಬೇಕು.
ಎಸ್‌ಪಿ: ರಸ್ತೆಯಲ್ಲಿ ಒಕ್ಕಣೆ ಮಾಡದಂತೆ ರೈತರಿಗೆ ತಿಳಿ ಹೇಳಲಾಗುತ್ತಿದೆ. ಮಾತು ಕೇಳದವರ ವಿರುದ್ಧ ಕ್ರಮ ಜರುಗಿಸುತ್ತೇವೆ.

ಆಂದೋಲನ ಡೆಸ್ಕ್

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 days ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 days ago