ಓದುಗರ ಪತ್ರ: ಫ್ಲೆಕ್ಸ್ಗಳ ಹಾವಳಿಗೆ ಕಡಿವಾಣ ಹಾಕಿ
ಕಳೆದ ಕೆಲ ದಿನಗಳಿಂದ ಮೈಸೂರು ನಗರದ ಹೃದಯ ಭಾಗದಲ್ಲಿಯೇ ಪ್ಲೆಕ್ಸ್ಗಳ ಹಾವಳಿ ಹೆಚ್ಚಾಗಿದ್ದು, ಮಹಾನಗರ ಪಾಲಿಕೆ ಅಧಿಕಾರಿಗಳು ಇದನ್ನು ಕಂಡೂ ಕಾಣದಂತೆ ಇದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯವರು ಸಾರ್ವಜನಿಕರು ಪ್ಲಾಸ್ಟಿಕ್ ಬಳಸಿದರೆ, ಸಣ್ಣಪುಟ್ಟ ಅಂಗಡಿಯವರು ಪ್ಲಾಸ್ಟಿಕ್ ಮಾರಾಟ ಮಾಡಿದರೆ ಹಾಗೂ ಬ್ಯಾನರ್ಗಳನ್ನು ಅಳವಡಿಸಿದರೆ ಅವರನ್ನು ಹಿಡಿದು ದಂಡ ವಿಧಿಸುತ್ತಾರೆ. ಆದರೆ ಚುನಾಯಿತ ಜನಪ್ರತಿನಿಧಿಗಳೇ ರಸ್ತೆ ರಸ್ತೆಗಳಲ್ಲಿ ಬ್ಯಾನರ್ಗಳನ್ನು ಅಳವಡಿಸಿದರೆ ಅವರ ವಿರುದ್ಧ ಏಕೆ ಕ್ರಮಕೈಗೊಳ್ಳುವುದಿಲ್ಲ?
ನಗರದಲ್ಲಿ ಪ್ಲೆಕ್ಸ್, ಬ್ಯಾನರ್ಗಳನ್ನು ಬಳಸುವಂತಿಲ್ಲ ಎಂದು ಮಹಾನಗರ ಪಾಲಿಕೆಯೇ ಆದೇಶಿಸಿದೆ. ಇಷ್ಟಿದ್ದರೂ ನಗರದ ಮಧ್ಯ ಭಾಗದಲ್ಲಿಯೇ ಹಲವು ದಿನಗಳ ಕಾಲ ಬ್ಯಾನರ್ಗಳು ರಾರಾಜಿಸುತ್ತವೆ ಎಂದರೆ ಅದು ಅಧಿಕಾರಿಗಳ ಬೇಜವಾಬ್ದಾರಿತನವನ್ನು ತೋರುತ್ತದೆ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಈ ಪ್ಲೆಕ್ಸ್ ಮತ್ತು ಬ್ಯಾನರ್ಗಳ ತೆರವಿಗೆ ಕ್ರಮಕೈಗೊಳ್ಳಬೇಕು.
-ರಕ್ಷಿತಾ: ಬೋಗಾದಿ, ಮೈಸೂರು.
ಬೆಂಗಳೂರು: ನಂದಿನಿ ಬ್ರಾಂಡ್ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್ ಆಗುತ್ತಿವೆ.…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…
ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…
ಸರಗೂರು: ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ನಂಜೀಪುರ ಗ್ರಾಮದಲ್ಲಿ ಮಲೆ ಮಹದೇಶ್ವರಸ್ವಾಮಿ ರಥೋತ್ಸವ ಮತ್ತು ಕೊಂಡೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ…