Andolana originals

ತುಂತುರು ಮಳೆಯಲ್ಲೂ ಪಟಾಕಿ ಖರೀದಿಸಿದ ಗ್ರಾಹಕರು

ಎಂ.ನಾರಾಯಣ

ತಿ.ನರಸೀಪುರ: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಎಲ್ಲೆಲ್ಲೂ ಸಂಭ್ರಮ- ಸಡಗರ. ಹಿರಿಯರು- ಕಿರಿಯರೆನ್ನದೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಎಲ್ಲೆಡೆ ಪಟಾಕಿ ಖರೀದಿ ಜೋರಾಗಿದೆ. ತಾಲ್ಲೂಕಿನಲ್ಲಿ ತುಂತುರು ಮಳೆ ಸುರಿಯುತ್ತಿದ್ದರೂ ಜನರು ಪಟಾಕಿ ಖರೀದಿಯಲ್ಲಿ ಉತ್ಸಾಹ ದಿಂದ ತೊಡಗಿರುವುದು ಕಂಡುಬಂತು.

ಕೊಳ್ಳೇಗಾಲ- ತಲಕಾಡು ಮುಖ್ಯ ರಸ್ತೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಮುಂಭಾಗವಿರುವ ಖಾಲಿ ನಿವೇಶನದ ಜಾಗದಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಳಿಗೆಗಳನ್ನು ನಿರ್ಮಿಸಿದ್ದು, ಈ ಅಂಗಡಿಗಳಲ್ಲಿ ಖರೀದಿ ಜೋರಾಗಿದೆ.

ಈ ಬಾರಿ ಪಟಾಕಿಗಳ ಬೆಲೆ ಕಳೆದ ವರ್ಷಕ್ಕಿಂತ ಸ್ವಲ್ಪ ಜಾಸ್ತಿಯಾಗಿರುವುದು ಕಂಡುಬಂದಿದೆ. ಪ್ರತಿ ವರ್ಷ ಕಾವೇರಿ ಲಾಡ್ಜ್ ಮೈದಾನದಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲಾಗುತ್ತಿತ್ತು. ಆದರೆ, ಈ ಬಾರಿ ಪುರಸಭೆಯು ಸೂಚಿಸಿರುವ ಪ್ರದೇಶದಲ್ಲಿ ಮಾತ್ರ ಪಟಾಕಿ ಮಾರಲು ಅವಕಾಶವಿದೆ. ಜನರು ಕೂಡ ಇಲ್ಲಿಂದ ಮಾತ್ರ ಖರೀದಿಸಬೇಕು ಎಂದು ಪುರಸಭಾ ಅಧಿಕಾರಿಗಳು ತಿಳಿಸಿದ್ದಾರೆ.

” ಬುಧವಾರ ಪಟಾಕಿಗಳ ಮಾರಾಟ ಹೆಚ್ಚಾಗುವ ನಿರೀಕ್ಷೆ ಇದೆ. ಗ್ರಾಮೀಣ ಭಾಗದಿಂದ ಜನರು ಪಟಾಕಿ ಖರೀದಿಗೆ ಬರುತ್ತಿದ್ದಾರೆ.”

-ಮಹದೇವಸ್ವಾಮಿ, ಪಟಾಕಿ ಮಾರಾಟಗಾರರು

ಆಂದೋಲನ ಡೆಸ್ಕ್

Recent Posts

ಪ್ರಧಾನ್‌ ರಾಜೀನಾಮೆ : ವಾಂಗ್ಚುಕ್‌ ಫಸ್ಟ್‌ ರಿಯಾಕ್ಷನ್‌

ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್‌ ವಾಂಗ್ಚುಕ್‌ ಮೊದಲ ಪ್ರತಿಕ್ರಿಯೆ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 25 ಶನಿವಾರ  

15 hours ago

ನೋಟ-ಪ್ರತಿನೋಟ | ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ಸರಿಯೇ? ತಪ್ಪೇ?

ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಗೆ ಅಜ್ಜಿ ಒಡವೆ ನೀಡಿದ ಪ್ರಸಂಗ…

ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧಿಯ ಉಡುಪು ಯಾಕೆ ಬದಲಾಯಿತು?

  ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…

15 hours ago

ಗಾಂಧಿ ಅಭಿಯಾನ ಅರಿವಿನ ಯಾನ ; ಸಜ್ಜನನಾದ ಆಂಗ್ಲನಾಗುವ ಪ್ರಯತ್ನ

ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್‌ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…

16 hours ago