ಎಂ.ನಾರಾಯಣ
ತಿ.ನರಸೀಪುರ: ಬೆಳಕಿನ ಹಬ್ಬ ದೀಪಾವಳಿ ಬಂತೆಂದರೆ ಎಲ್ಲೆಲ್ಲೂ ಸಂಭ್ರಮ- ಸಡಗರ. ಹಿರಿಯರು- ಕಿರಿಯರೆನ್ನದೆ ಪಟಾಕಿ ಸಿಡಿಸಿ ಸಂಭ್ರಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಎಲ್ಲೆಡೆ ಪಟಾಕಿ ಖರೀದಿ ಜೋರಾಗಿದೆ. ತಾಲ್ಲೂಕಿನಲ್ಲಿ ತುಂತುರು ಮಳೆ ಸುರಿಯುತ್ತಿದ್ದರೂ ಜನರು ಪಟಾಕಿ ಖರೀದಿಯಲ್ಲಿ ಉತ್ಸಾಹ ದಿಂದ ತೊಡಗಿರುವುದು ಕಂಡುಬಂತು.
ಕೊಳ್ಳೇಗಾಲ- ತಲಕಾಡು ಮುಖ್ಯ ರಸ್ತೆಯಲ್ಲಿ ಪಟ್ಟಣದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಮುಂಭಾಗವಿರುವ ಖಾಲಿ ನಿವೇಶನದ ಜಾಗದಲ್ಲಿ ತಾತ್ಕಾಲಿಕವಾಗಿ ಪಟಾಕಿ ಮಳಿಗೆಗಳನ್ನು ನಿರ್ಮಿಸಿದ್ದು, ಈ ಅಂಗಡಿಗಳಲ್ಲಿ ಖರೀದಿ ಜೋರಾಗಿದೆ.
ಈ ಬಾರಿ ಪಟಾಕಿಗಳ ಬೆಲೆ ಕಳೆದ ವರ್ಷಕ್ಕಿಂತ ಸ್ವಲ್ಪ ಜಾಸ್ತಿಯಾಗಿರುವುದು ಕಂಡುಬಂದಿದೆ. ಪ್ರತಿ ವರ್ಷ ಕಾವೇರಿ ಲಾಡ್ಜ್ ಮೈದಾನದಲ್ಲಿ ಪಟಾಕಿ ಅಂಗಡಿಗಳನ್ನು ತೆರೆಯಲಾಗುತ್ತಿತ್ತು. ಆದರೆ, ಈ ಬಾರಿ ಪುರಸಭೆಯು ಸೂಚಿಸಿರುವ ಪ್ರದೇಶದಲ್ಲಿ ಮಾತ್ರ ಪಟಾಕಿ ಮಾರಲು ಅವಕಾಶವಿದೆ. ಜನರು ಕೂಡ ಇಲ್ಲಿಂದ ಮಾತ್ರ ಖರೀದಿಸಬೇಕು ಎಂದು ಪುರಸಭಾ ಅಧಿಕಾರಿಗಳು ತಿಳಿಸಿದ್ದಾರೆ.
” ಬುಧವಾರ ಪಟಾಕಿಗಳ ಮಾರಾಟ ಹೆಚ್ಚಾಗುವ ನಿರೀಕ್ಷೆ ಇದೆ. ಗ್ರಾಮೀಣ ಭಾಗದಿಂದ ಜನರು ಪಟಾಕಿ ಖರೀದಿಗೆ ಬರುತ್ತಿದ್ದಾರೆ.”
-ಮಹದೇವಸ್ವಾಮಿ, ಪಟಾಕಿ ಮಾರಾಟಗಾರರು
ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…
ಆನೇಕಲ್ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…