Andolana originals

ಸೈಕ್ಲೋನ್‌ ಪರಿಣಾಮ ಜನವರಿಯಲ್ಲೂ ಜಲ ಸಮೃದ್ಧಿ

ಮಂಡ್ಯ ಜಿಲ್ಲೆಯ 968 ಕೆರೆಗಳ ಪೈಕಿ 550 ಕೆರೆಗಳು ಈಗಲೂ ಭರ್ತಿ

ಹೇಮಂತ್‌ಕುಮಾರ್
ಮಂಡ್ಯ: ಜಿಲ್ಲೆಯಲ್ಲಿ ಕಳೆದ ಮೂರ‍್ನಾಲ್ಕು ತಿಂಗಳಿಂದ ಸೈಕ್ಲೋನ್ ಪರಿಣಾಮ ಸುರಿದ ಮಳೆಯಿಂದಾಗಿ ಅಂತರ್ಜಲ ಸಮೃದ್ಧವಾಗಿದ್ದು, ಜಲಾಶಯಗಳ ನೀರಿನ ಮಟ್ಟವೂ ಯಥಾಸ್ಥಿತಿಯಲ್ಲಿರುವಂತೆ, ಬಹುತೇಕ ಕೆರೆ-ಕಟ್ಟೆಗಳೂ ಪೂರ್ಣಮಟ್ಟ ಕಾಯ್ದುಕೊಂಡಿರುವುದು ಈ ವರ್ಷದ ವಿಶೇಷ.

ರೈತರ ಮೊದಲ ಸುಗ್ಗಿ ಹಬ್ಬವಾದ ಸಂಕ್ರಾಂತಿಗೆ ದನಕರುಗಳ ಮೈ ತೊಳೆಯಲು ನಾಲೆಗಳಿಗೆ ನೀರು ಬಿಡಿ ಎಂಬ ಒತ್ತಾಯ ಮಾಡುತ್ತಿದ್ದ ಸನ್ನಿವೇಶ ಈಗಿಲ್ಲ. ಕೆಆರ್ ಎಸ್ ಅಣೆಕಟ್ಟೆಯಲ್ಲಿ ಈಗಲೂ ಸಮೃದ್ಧವಾದ ಜಲರಾಶಿ ಇದ್ದು, ನೀರಾವರಿ ಸಲಹಾ ಸಮಿತಿ ನಿರ್ಧಾರ ಕೈಗೊಂಡಂತೆ ನಾಲೆಗಳಿಗೆ ೧೮ ದಿನಗಳು ನೀರು ಹರಿಸಿ ೧೨ ದಿನಗಳು ಸ್ಥಗಿತಗೊಳಿಸುವ ಮೂಲಕ ಕಟ್ಟು ನೀರು ಬಿಡಲಾಗುತ್ತದೆ.

ಜನವರಿ ತಿಂಗಳ ವೇಳೆಗೆ ಕೆರೆ-ಕಟ್ಟೆಗಳು ಅರ್ಧಮಟ್ಟಕ್ಕಿಂತ ಕೆಳಗಿರುತ್ತಿದ್ದ ಸನ್ನಿವೇಶದಲ್ಲಿ ೨೦೨೪ರಲ್ಲಿ ಜೂನ್‌ನಿಂದ ಇದುವರೆಗೆ ಸರಾಸರಿಗಿಂತ ಹೆಚ್ಚಿನ ಮಳೆಯಾಗಿದ್ದು, ಈ ಜಲಸಂವೃದ್ಧಿಗೆ ಕಾರಣ. ಸರಾಸರಿ ೬೯೨ ಮಿ. ಮೀ. ವಾಡಿಕೆ ಮಳೆಯಿದ್ದು ೮೬೪ ಮಿ. ಮೀ. ನಷ್ಟು ಮಳೆ ಸುರಿದಿದೆ ಎಂದರೆ ಶೇ. ೨೫ರಷ್ಟು ಹೆಚ್ಚುವರಿಯಾಗಿದೆ. ಇದರ ಪರಿಣಾಮ ಸಾಕಷ್ಟು ಭತ್ತದ ಬೆಳೆ ಗದ್ದೆಯಲ್ಲೇ ಹಾಳಾಗಿ ರೈತನಿಗೆ ನಷ್ಟವುಂಟಾಗಿದೆ. ಇತ್ತ ಕಟಾವು ಮಾಡಿ ಭತ್ತವನ್ನು ಮೂಟೆಗೆ ತುಂಬಿದವರಿಗೆ ಸರಿಯಾದ ದರ ಸಿಗುತ್ತಿಲ್ಲ. ಹೀಗಿರುವಾಗ ಭತ್ತ ಖರೀದಿ ಕೇಂದ್ರವನ್ನು ಇನ್ನೂ ತೆರೆದಿಲ್ಲ. ಮಧ್ಯವರ್ತಿ ಗಳು ಕಡಿಮೆ ದರಕ್ಕೆ ಭತ್ತ ಕೇಳುತ್ತಾರೆ. ಅದಕ್ಕೂ ಬೇಡಿಕೆ ಇಲ್ಲ. ಹೀಗೆ ರೈತರಿಗೆ ಎರಡೂ ಕಡೆಯಿಂದ ನಷ್ಟವೇ ಆಗಿದೆ.

ಕಾವೇರಿ ನೀರಾವರಿ ನಿಗಮದ ವ್ಯಾಪ್ತಿಗೆ ಬರುವ ಕೆರೆಗಳು ತುಂಬಿರುವ ಬಗ್ಗೆ ನಿಖರ ಮಾಹಿತಿ ನೀಡಬೇಕು ಹಾಗೂ ನೀರು ತುಂಬಿಸಲು ಸಾಧ್ಯವಾಗದ ಕೆರೆಗಳಿಗೆ ಸಂಬಂಽಸಿದಂತೆ ಸರಿ ಯಾದ ಕಾರಣ ಒದಗಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸದ್ಯ ಜಿಲ್ಲೆಯಲ್ಲಿ ಕಾವೇರಿ ನೀರಾವರಿ ನಿಗಮದ ೧೭೪ ಕೆರೆಗಳು, ಸಣ್ಣನೀರಾವರಿ ಇಲಾಖೆಯ ೪೮, ಪಿಆರ್‌ಇಡಿಯ ೪೧೭, ಪಾಂಡವಪುರ ಎಚ್‌ಲ್‌ಬಿಸಿಯ ೧೧೦, ನಾಗಮಂಗಲ ಎಚ್‌ಎಲ್‌ಬಿಸಿಯ ೬೪, ಕೆಆರ್. ಪೇಟೆ ಎಚ್‌ಎಲ್‌ಬಿಸಿಯ ೯೪ ಕೆರೆಗಳು ಸೇರಿದಂತೆ ಒಟ್ಟು ೯೬೮ ಕೆರೆಗಳಿದ್ದು, ಅವುಗಳಲ್ಲಿ ೫೪೮ ಕೆರೆಗಳು ಭರ್ತಿಯಾಗಿದ್ದರೆ, ೭೪ ಕರೆಗಳು ಶೇ. ೨೫ರಷ್ಟು ಮಾತ್ರ ನೀರು ಹೊಂದಿದೆ. ಮುಖ್ಯವಾಗಿ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ಈ ವರ್ಷ ೧೨೪. ೮೦ ಪೂರ್ಣಮಟ್ಟವನ್ನು ಕಾಯ್ದುಕೊಂಡಿರುವುದು ವಿಶೇಷ. ೪೯. ೪೫೨ ಟಿಎಂಸಿ ಗರಿಷ್ಟ ಮಟ್ಟವನ್ನು ಉಳಿಸಿಕೊಳ್ಳಲಾಗಿದೆ. ಹಾಗಾಗಿ ಈಗಿರುವ ನೀರು ಜೂನ್‌ವರೆಗೂ ಲಭ್ಯವಾಗುತ್ತದೆ ಎನ್ನಲಾಗಿದೆ.

ಕಳೆದ ವರ್ಷ ಮಂಡ್ಯ ಜಿಲ್ಲೆಯಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗಲಿಲ್ಲ. ಮೇ ತಿಂಗಳಲ್ಲಿ ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಹೆಚ್ಚು ಬಿದ್ದಿರುವುದನ್ನು ಹೊರತುಪಡಿಸಿದರೆ ಜೂನ್- ಜುಲೈ ತಿಂಗಳಲ್ಲಿ ಮುಂಗಾರು ಮಳೆ ಸಾಕಷ್ಟು ಕೊರತೆಯಾಗಿದೆ. ಮೇ ತಿಂಗಳಲ್ಲಿ ಮುಂಗಾರು ಪೂರ್ವ ಮಳೆ ಆಶಾದಾಯಕವಾಗಿತ್ತು. ನಂತರ ಮುಂಗಾರು ಮಳೆ ಜಿಲ್ಲೆಯೊಳಗೆ ಕಣ್ಣಾಮುಚ್ಚಾಲೆ ಆಟವಾಡುತ್ತಾ ರೈತರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದ ಸನ್ನಿವೇಶ ಆತಂಕವುಂಟುಮಾಡಿತ್ತು.

ಸದ್ಯ ಅಂತರ್ಜಲ ವೃದ್ಧಿಗೆ ಜಿಲ್ಲಾ ಪಂಚಾಯಿತಿ ವತಿಯಿಂದ ಮುಚ್ಚಿಹೋಗಿದ್ದ ಹಲವಾರು ಕಲ್ಯಾಣಿಗಳು, ಕಟ್ಟೆಗಳನ್ನೆಲ್ಲಾ ಅಮೃತ ಸರೋವರ ಯೋಜನೆಯಡಿ ಪುನಶ್ಚೇತನಗೊಳಿಸಿರುವುದು ರೈತರಲ್ಲಿ ಮಂದಹಾಸ ಮೂಡಿಸಿದೆ. ಆದರೂ ಜಿಲ್ಲಾ ಉಸ್ತುವರಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ವಿ ನಾಲೆ ಆರಂಭದಿಂದ ಕೊನೆ ಭಾಗದ ರೈತರು ಏಕಕಾಲದಲ್ಲಿ ನಾಟಿಗೆ ಮುಂದಾಗಬೇಕು. ಮುಂದೆ ಯಾವ ಪರಿಸ್ಥಿತಿ ಎದುರಾಗುತ್ತದೋ ಗೊತ್ತಿಲ್ಲ. ಅಲ್ಪಾವಽ ಬೆಳೆ ಬೆಳೆಯಲು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

1 min ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

6 mins ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

11 mins ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

18 mins ago

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

12 hours ago