ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಂಕಷ್ಟ
ವಾಸು ವಿ. ಹೊಂಗನೂರು
ಮೈಸೂರು: ನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ರಸ್ತೆ ವಿಭಜಕದ ಮಧ್ಯ ಭಾಗದಲ್ಲಿ ಅಳವಡಿಸಿರುವ ಎರಡು ವಿದ್ಯುತ್ ಕಂಬಗಳು ಬೀಳುವ ಸ್ಥಿತಿಯಲ್ಲಿದ್ದರೂ ವಿದ್ಯುತ್ ಇಲಾಖೆಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಧಿಕಾರಿಗಳು ಅದನ್ನು ಸರಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.
ಮೈಸೂರು-ಕೊಡಗು ಪ್ರಮುಖ ಹೆದ್ದಾರಿಯಾದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರ ಮೇಲೇನಾದರೂ ವಿದ್ಯುತ್ ಕಂಬಗಳು ಬಿದ್ದರೆ ಅನಾಹುತ ಸಂಭವಿಸುವ ಅಪಾಯವಿದೆ.
ದಸರಾ ಹಬ್ಬಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುವ ಅಧಿಕಾರಿಗಳು ವಿದ್ಯುತ್ ಕಂಬವನ್ನು ಸರಿಪಡಿಸದೇ ಜನರ ಪ್ರಾಣದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ವಿದ್ಯುತ್ ದೀಪಗಳಿಲ್ಲ: ಈ ರಸ್ತೆಯಲ್ಲಿರುವ ಎಲ್ಲಾ ವಿದ್ಯುತ್ ಕಂಬಗಳಲ್ಲಿಯೂ ಬಲ್ಬ್ಗಳು ಕಾಣೆಯಾಗಿವೆ. ರಾತ್ರಿ ವೇಳೆ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಅಪಘಾತವಾದರೆ ಯಾರು ಹೊಣೆ ಎಂಬಂತಾಗಿದೆ.
ಅದ್ದೂರಿ ದಸರಾ ಆಚರಣೆಗಾಗಿ ಸರ್ಕಾರ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ನಗರದಾದ್ಯಂತ ಬೀದಿ ದೀಪ, ರಸ್ತೆ ಮೊದಲಾದ ಮೂಲ ಸೌಕರ್ಯಗಳ ಬಗ್ಗೆಯೂ ಗಮನ ಹರಿಸಿದರೆ
ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಶಿವರಾಜ್, ಮೈಸೂರು
ನಗರದ ವಿಜಯನಗರ ಮೊದಲ ಹಂತ, ಕೆಆರ್ ಸಾಗರ ರಸ್ತೆ ಮುಂತಾದ ಕಡೆಗಳಲ್ಲಿ ವಿದ್ಯುತ್ ಕಂಬಗಳು ವಾಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧಿಕಾರಿಗಳು ಕೂಡಲೇ ವಿದ್ಯುತ್ ಕಂಬಗಳನ್ನು ಬದಲಿಸಲು ಕ್ರಮ ಕೈಗೊಳ್ಳಬೇಕಾಗಿದೆ.
• ದಿನೇಶ್ ಗೌಡ, ಸ್ಥಳೀಯರು
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್…
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್…
ನವದೆಹಲಿ: ಕೋಲಾರ ಜಿಲ್ಲೆಯ ವೇಮಗಲ್ನಲ್ಲಿ ಟಾಟಾ ಏರ್ಬಸ್ ಲಘು ಹೆಲಿಕಾಪ್ಟರ್ ಅಂತಿಮ ಜೋಡಣೆ ಘಟಕವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ…
ಮೈಸೂರು: ಬ್ರೇಕ್ ಫೇಲ್ ಆಗಿದ್ರು ರಸ್ತೆಗಿಳಿದ ಕೆಎಸ್ಆರ್ಟಿಸಿ ಬಸ್ಸೊಂದು ಏಕಾಏಕಿ ಮುಂದೆ ಚಲಿಸುತ್ತಿದ್ದ ಮತ್ತೊಂದು ಕೆಎಸ್ಆರ್ಟಿಸಿ ಬಸ್ಗೆ ಡಿಕ್ಕಿ ಹೊಡೆದಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ದ ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ…
ನಂಜನಗೂಡು: ಇಂದು ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರ ಸನ್ನಿಧಿಗೆ ಭಕ್ತಸಾಗರವೇ ಹರಿದುಬಂದಿದೆ. ಇಂದು ಬೆಳಿಗ್ಗೆಯಿಂದಲೂ ಸಾವಿರಾರು…