Andolana originals

ಅಪಾಯಕಾರಿಯಾಗಿರುವ ವಿದ್ಯುತ್ ಕಂಬಗಳು

ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಂಕಷ್ಟ

ವಾಸು ವಿ. ಹೊಂಗನೂರು

ಮೈಸೂರು: ನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ರಸ್ತೆ ವಿಭಜಕದ ಮಧ್ಯ ಭಾಗದಲ್ಲಿ ಅಳವಡಿಸಿರುವ ಎರಡು ವಿದ್ಯುತ್ ಕಂಬಗಳು ಬೀಳುವ ಸ್ಥಿತಿಯಲ್ಲಿದ್ದರೂ ವಿದ್ಯುತ್ ಇಲಾಖೆಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಧಿಕಾರಿಗಳು ಅದನ್ನು ಸರಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.

ಮೈಸೂರು-ಕೊಡಗು ಪ್ರಮುಖ ಹೆದ್ದಾರಿಯಾದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರ ಮೇಲೇನಾದರೂ ವಿದ್ಯುತ್‌ ಕಂಬಗಳು ಬಿದ್ದರೆ ಅನಾಹುತ ಸಂಭವಿಸುವ ಅಪಾಯವಿದೆ.

ದಸರಾ ಹಬ್ಬಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುವ ಅಧಿಕಾರಿಗಳು ವಿದ್ಯುತ್‌ ಕಂಬವನ್ನು ಸರಿಪಡಿಸದೇ ಜನರ ಪ್ರಾಣದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ವಿದ್ಯುತ್ ದೀಪಗಳಿಲ್ಲ: ಈ ರಸ್ತೆಯಲ್ಲಿರುವ ಎಲ್ಲಾ ವಿದ್ಯುತ್ ಕಂಬಗಳಲ್ಲಿಯೂ ಬಲ್ಬ್‌ಗಳು ಕಾಣೆಯಾಗಿವೆ. ರಾತ್ರಿ ವೇಳೆ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಅಪಘಾತವಾದರೆ ಯಾರು ಹೊಣೆ ಎಂಬಂತಾಗಿದೆ.

ಅದ್ದೂರಿ ದಸರಾ ಆಚರಣೆಗಾಗಿ ಸರ್ಕಾರ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ನಗರದಾದ್ಯಂತ ಬೀದಿ ದೀಪ, ರಸ್ತೆ ಮೊದಲಾದ ಮೂಲ ಸೌಕರ್ಯಗಳ ಬಗ್ಗೆಯೂ ಗಮನ ಹರಿಸಿದರೆ
ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಶಿವರಾಜ್, ಮೈಸೂರು

ನಗರದ ವಿಜಯನಗರ ಮೊದಲ ಹಂತ, ಕೆಆರ್ ಸಾಗರ ರಸ್ತೆ ಮುಂತಾದ ಕಡೆಗಳಲ್ಲಿ ವಿದ್ಯುತ್‌ ಕಂಬಗಳು ವಾಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧಿಕಾರಿಗಳು ಕೂಡಲೇ ವಿದ್ಯುತ್‌ ಕಂಬಗಳನ್ನು ಬದಲಿಸಲು ಕ್ರಮ ಕೈಗೊಳ್ಳಬೇಕಾಗಿದೆ.
• ದಿನೇಶ್ ಗೌಡ, ಸ್ಥಳೀಯರು

 

ಆಂದೋಲನ ಡೆಸ್ಕ್

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

2 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

3 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

4 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

4 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

5 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

6 hours ago