Andolana originals

ಅಪಾಯಕಾರಿಯಾಗಿರುವ ವಿದ್ಯುತ್ ಕಂಬಗಳು

ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಂಕಷ್ಟ

ವಾಸು ವಿ. ಹೊಂಗನೂರು

ಮೈಸೂರು: ನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ರಸ್ತೆ ವಿಭಜಕದ ಮಧ್ಯ ಭಾಗದಲ್ಲಿ ಅಳವಡಿಸಿರುವ ಎರಡು ವಿದ್ಯುತ್ ಕಂಬಗಳು ಬೀಳುವ ಸ್ಥಿತಿಯಲ್ಲಿದ್ದರೂ ವಿದ್ಯುತ್ ಇಲಾಖೆಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಧಿಕಾರಿಗಳು ಅದನ್ನು ಸರಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.

ಮೈಸೂರು-ಕೊಡಗು ಪ್ರಮುಖ ಹೆದ್ದಾರಿಯಾದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರ ಮೇಲೇನಾದರೂ ವಿದ್ಯುತ್‌ ಕಂಬಗಳು ಬಿದ್ದರೆ ಅನಾಹುತ ಸಂಭವಿಸುವ ಅಪಾಯವಿದೆ.

ದಸರಾ ಹಬ್ಬಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುವ ಅಧಿಕಾರಿಗಳು ವಿದ್ಯುತ್‌ ಕಂಬವನ್ನು ಸರಿಪಡಿಸದೇ ಜನರ ಪ್ರಾಣದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ವಿದ್ಯುತ್ ದೀಪಗಳಿಲ್ಲ: ಈ ರಸ್ತೆಯಲ್ಲಿರುವ ಎಲ್ಲಾ ವಿದ್ಯುತ್ ಕಂಬಗಳಲ್ಲಿಯೂ ಬಲ್ಬ್‌ಗಳು ಕಾಣೆಯಾಗಿವೆ. ರಾತ್ರಿ ವೇಳೆ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಅಪಘಾತವಾದರೆ ಯಾರು ಹೊಣೆ ಎಂಬಂತಾಗಿದೆ.

ಅದ್ದೂರಿ ದಸರಾ ಆಚರಣೆಗಾಗಿ ಸರ್ಕಾರ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ನಗರದಾದ್ಯಂತ ಬೀದಿ ದೀಪ, ರಸ್ತೆ ಮೊದಲಾದ ಮೂಲ ಸೌಕರ್ಯಗಳ ಬಗ್ಗೆಯೂ ಗಮನ ಹರಿಸಿದರೆ
ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಶಿವರಾಜ್, ಮೈಸೂರು

ನಗರದ ವಿಜಯನಗರ ಮೊದಲ ಹಂತ, ಕೆಆರ್ ಸಾಗರ ರಸ್ತೆ ಮುಂತಾದ ಕಡೆಗಳಲ್ಲಿ ವಿದ್ಯುತ್‌ ಕಂಬಗಳು ವಾಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧಿಕಾರಿಗಳು ಕೂಡಲೇ ವಿದ್ಯುತ್‌ ಕಂಬಗಳನ್ನು ಬದಲಿಸಲು ಕ್ರಮ ಕೈಗೊಳ್ಳಬೇಕಾಗಿದೆ.
• ದಿನೇಶ್ ಗೌಡ, ಸ್ಥಳೀಯರು

 

ಆಂದೋಲನ ಡೆಸ್ಕ್

Recent Posts

ಸೆಲ್ಫಿ ವಿಡಿಯೋ ಮಾಡಿ ಆಟೋ ಚಾಲಕ ಆತ್ನಹತ್ಯೆಗೆ ಯತ್ನ

ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…

7 hours ago

ಮಂಡ್ಯದಲ್ಲಿ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಸಾವು

ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…

9 hours ago

ರಾಜ್ಯದಲ್ಲಿ ಮೂರು ದಿನ ದಟ್ಟ ಮಂಜು ಕವಿದ ವಾತಾವರಣ: ತೀವ್ರ ಚಳಿ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…

9 hours ago

ಯೂರಿಯಾ ಗೊಬ್ಬರ ತಿಂದು 11 ಮೇಕೆಗಳು ಸಾವು

ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…

9 hours ago

ಚಾಮರಾಜನಗರ| ಹುಚ್ಚುನಾಯಿ ದಾಳಿಯಿಂದ 7 ಮಂದಿಗೆ ಗಾಯ

ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…

10 hours ago

ದುಬಾರಿ ಗಿಫ್ಟ್‌ ತೆಗೆದುಕೊಳ್ಳುವುದು ತಪ್ಪಾಗುತ್ತದೆ: ಸಂಸದ ಯದುವೀರ್‌ ಒಡೆಯರ್‌

ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…

10 hours ago