Andolana originals

ಅಪಾಯಕಾರಿಯಾಗಿರುವ ವಿದ್ಯುತ್ ಕಂಬಗಳು

ಸೆಸ್ಕ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಾರ್ವಜನಿಕರಿಗೆ ಸಂಕಷ್ಟ

ವಾಸು ವಿ. ಹೊಂಗನೂರು

ಮೈಸೂರು: ನಗರದ ಐಶ್ವರ್ಯ ಪೆಟ್ರೋಲ್ ಬಂಕ್ ಬಳಿ ರಸ್ತೆ ವಿಭಜಕದ ಮಧ್ಯ ಭಾಗದಲ್ಲಿ ಅಳವಡಿಸಿರುವ ಎರಡು ವಿದ್ಯುತ್ ಕಂಬಗಳು ಬೀಳುವ ಸ್ಥಿತಿಯಲ್ಲಿದ್ದರೂ ವಿದ್ಯುತ್ ಇಲಾಖೆಯವರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಅಧಿಕಾರಿಗಳು ಅದನ್ನು ಸರಿಪಡಿಸಲು ಯಾವುದೇ ಕ್ರಮ ಕೈಗೊಂಡಿಲ್ಲ.

ಮೈಸೂರು-ಕೊಡಗು ಪ್ರಮುಖ ಹೆದ್ದಾರಿಯಾದ ಈ ರಸ್ತೆಯಲ್ಲಿ ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ವಾಹನ ಸವಾರರ ಮೇಲೇನಾದರೂ ವಿದ್ಯುತ್‌ ಕಂಬಗಳು ಬಿದ್ದರೆ ಅನಾಹುತ ಸಂಭವಿಸುವ ಅಪಾಯವಿದೆ.

ದಸರಾ ಹಬ್ಬಕ್ಕಾಗಿ ಕೋಟ್ಯಂತರ ರೂ. ಖರ್ಚು ಮಾಡುವ ಅಧಿಕಾರಿಗಳು ವಿದ್ಯುತ್‌ ಕಂಬವನ್ನು ಸರಿಪಡಿಸದೇ ಜನರ ಪ್ರಾಣದ ಜತೆ ಚೆಲ್ಲಾಟ ವಾಡುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ವಿದ್ಯುತ್ ದೀಪಗಳಿಲ್ಲ: ಈ ರಸ್ತೆಯಲ್ಲಿರುವ ಎಲ್ಲಾ ವಿದ್ಯುತ್ ಕಂಬಗಳಲ್ಲಿಯೂ ಬಲ್ಬ್‌ಗಳು ಕಾಣೆಯಾಗಿವೆ. ರಾತ್ರಿ ವೇಳೆ ವಾಹನಗಳು ಸಂಚರಿಸುವ ಸಂದರ್ಭದಲ್ಲಿ ಅಪಘಾತವಾದರೆ ಯಾರು ಹೊಣೆ ಎಂಬಂತಾಗಿದೆ.

ಅದ್ದೂರಿ ದಸರಾ ಆಚರಣೆಗಾಗಿ ಸರ್ಕಾರ ಕೋಟ್ಯಂತರ ರೂ. ವೆಚ್ಚ ಮಾಡುತ್ತಿದೆ. ನಗರದಾದ್ಯಂತ ಬೀದಿ ದೀಪ, ರಸ್ತೆ ಮೊದಲಾದ ಮೂಲ ಸೌಕರ್ಯಗಳ ಬಗ್ಗೆಯೂ ಗಮನ ಹರಿಸಿದರೆ
ಸಾರ್ವಜನಿಕರಿಗೆ ಅನುಕೂಲವಾಗುತ್ತದೆ.
-ಶಿವರಾಜ್, ಮೈಸೂರು

ನಗರದ ವಿಜಯನಗರ ಮೊದಲ ಹಂತ, ಕೆಆರ್ ಸಾಗರ ರಸ್ತೆ ಮುಂತಾದ ಕಡೆಗಳಲ್ಲಿ ವಿದ್ಯುತ್‌ ಕಂಬಗಳು ವಾಲಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿವೆ. ಚಾಮುಂಡೇಶ್ವರಿ ವಿದ್ಯುತ್ ನಿಗಮದ ಅಧಿಕಾರಿಗಳು ಕೂಡಲೇ ವಿದ್ಯುತ್‌ ಕಂಬಗಳನ್ನು ಬದಲಿಸಲು ಕ್ರಮ ಕೈಗೊಳ್ಳಬೇಕಾಗಿದೆ.
• ದಿನೇಶ್ ಗೌಡ, ಸ್ಥಳೀಯರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

3 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

3 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

3 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

3 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

3 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

3 hours ago