Darbar of Grievances on 4th Main Vidyaranyapuram!
ಅನುಚೇತನ್ ಕೆ.ಎಂ.
ಮೈಸೂರು: ಜಿಲ್ಲಾಡಳಿತ, ನಗರಪಾಲಿಕೆ ಅಧಿಕಾರಿಗಳು ದಸರಾ ಮಹೋತ್ಸವಕ್ಕೆ ಸಿದ್ಧತೆ ನಡೆಸುತ್ತಿದ್ದರೆ, ನಗರದ ಹೃದಯ ಭಾಗದಲ್ಲೇ ಇರುವ ವಿದ್ಯಾರಣ್ಯಪುರಂನ ನಾಲ್ಕನೇ ಮುಖ್ಯರಸ್ತೆಯ ೩೨ನೇ ಅಡ್ಡ ರಸ್ತೆಯಲ್ಲಿ ಸಮಸ್ಯೆಗಳದ್ದೇ ದರ್ಬಾರ್ ನಡೆಯುತ್ತಿದೆ.
ಪಾಲಿಕೆಯ ೬೨ನೇ ವಾರ್ಡ್ ವ್ಯಾಪ್ತಿಗೆ ಬರುವ ಈ ಪ್ರದೇಶದಲ್ಲಿ ಮೂಲ ಸೌಕರ್ಯಗಳಿಲ್ಲದೆ ಜನರು ಹೈರಾಣಾಗಿದ್ದಾರೆ. ಗುಂಡಿಗಳು ಬಿದ್ದ ರಸ್ತೆಯಲ್ಲೇ ಜನರು ಬಿದ್ದು ಎದ್ದು ಸಂಚರಿಸುತ್ತಿದ್ದಾರೆ. ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದಾಗಿ ಕೊಳಚೆ ನೀರು ಮನೆ ಮುಂದೆ ನಿಂತು ಗಬ್ಬೆದ್ದು ನಾರುತ್ತಿದೆ.
ರಸ್ತೆಯ ತಿರುವಿನಲ್ಲಿರುವ ಮ್ಯಾನ್ಹೋಲ್ ನಲ್ಲಿ ಹೂಳು ತುಂಬಿಕೊಂಡು ಸ್ವಲ್ಪ ಮಳೆಯಾದರೂ ಕೊಳಚೆ ನೀರು ರಸ್ತೆ ಮೇಲೆ ಹರಿಯುತ್ತದೆ. ಮುಖ್ಯ ರಸ್ತೆಯಲ್ಲಿ ಸ್ವಲ್ಪ ದೂರವೇ ಹೊಸದಾಗಿ ಚರಂಡಿ ನಿರ್ಮಿಸಲಾಗಿದ್ದು, ಅಲ್ಲಿಯೂ ಹೂಳು ತುಂಬಿಕೊಂಡು ಮಳೆ ನೀರು ಸರಾಗವಾಗಿ ಹರಿಯುತ್ತಿಲ್ಲ. ಈ ಬಗ್ಗೆ ಪಾಲಿಕೆಯ ಅಧಿಕಾರಿಗಳಿಗೆ ದೂರು ನೀಡಿದರೂ ಸಮಸ್ಯೆ ನಿವಾರಣೆಗೆ ಗಮನಹಿಸುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪಾಲಿಕೆಯ ಬೇಜವಾಬ್ದಾರಿ
ಸಮಸ್ಯೆ ಎದುರಾದಾಗ ಬಂದು ತಾತ್ಕಾಲಿಕವಾಗಿ ಕೊಳಚೆ ನೀರು ಹರಿಯುವಂತೆ ಮಾಡಿ ಹೋಗುತ್ತಾರೆ. ಮತ್ತೆ ಅದೇ ಸಮಸ್ಯೆ ಎದುರಾಗುತ್ತದೆ. ಇದುವರೆಗೂ ಯಾವುದೇ ಒಳಚರಂಡಿ ನಿರ್ಮಿಸುವ ಕೆಲಸವಾಗಿಲ್ಲ. ಈ ಬಗ್ಗೆ ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದರೂ ಉಡಾಫೆ ಉತ್ತರ ನೀಡುತ್ತಾರೆ. ಸ್ಥಳೀಯ ಶಾಸಕರಿಗೂ ಪತ್ರ ಬರೆದು ಮನವಿ ಮಾಡಿದ್ದರೂ ಯಾವುದೇ ಪ್ರಯೋಜನ ವಾಗಿಲ್ಲ ಎಂದು ಆರೋಪಿಸಿದರು.
ನಗರಪಾಲಿಕೆ ಅಧಿಕಾರಿಗಳು ಕೂಡಲೇ ಇಲ್ಲಿನ ಸಮಸ್ಯೆಗಳಿಗೆ ಸ್ಪಂದಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ಸಮರ್ಪಕ ಮೂಲ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ.
ಬಡಾವಣೆಯ ಸಮಸ್ಯೆ ಕುರಿತು ಪಾಲಿಕೆಗೆ ಹಲವು ಬಾರಿ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಪಾಲಿಕೆಯವರು ಕಂದಾಯ ವಸೂಲು ಮಾಡಿದರೂ ನಾವೇ ಚರಂಡಿ ಸ್ವಚ್ಛಗೊಳಿಸುವಂತಹ ಪರಿಸ್ಥಿತಿ ಎದುರಾಗಿದೆ. –ಗುರುಪ್ರಸಾದ್, ಸ್ಥಳೀಯರು
ಪಾಲಿಕೆ ವತಿಯಿಂದ ನಗರದ ವಿವಿಧೆಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಮಾಡಲಾಗುತ್ತಿದೆ. ಕೂಡಲೇ ಈ ಸಮಸ್ಯೆ ಗಳನ್ನು ಪರಿಗಣಿಸಿ ಸಂಬಂಧಪಟ್ಟ ಇಂಜಿನಿಯರ್ಗೆ ಪರಿಶೀಲಿಸುವಂತೆ ಸೂಚಿಸಲಾಗುವುದು. ಎಲ್ಲೆಲ್ಲಿ ಕಾಮಗಾರಿ ಆಗಬೇಕಾಗಿದೆ ಅಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ನಿರ್ಧಾರ ಕೈಗೊಳ್ಳುತ್ತೇವೆ.
-ಶೇಖ್ ತನ್ವೀರ್ ಆಸಿಫ್, ಆಯುಕ್ತರು, ನಗರಪಾಲಿಕೆ
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…