Andolana originals

ದಸರಾ ಆಹಾರ ಮೇಳ: ಹಳಬರಿಗೆ ಅವಕಾಶಕ್ಕೆ ಮನವಿ

ಮೈಸೂರು: ದಸರಾ ಆಹಾರ ಮೇಳದಲ್ಲಿ ಈ ಬಾರಿ ಲಾಟರಿ ಎತ್ತುವ ಮೂಲಕ ಮಳಿಗೆಗಳನ್ನು ಆಯ್ಕೆ ಮಾಡುವ ವಿಧಾನವನ್ನು ರದ್ದುಗೊಳಿಸಬೇಕು. ಹತ್ತಾರು ವರ್ಷಗಳಿಂದಲೂ ಮೇಳದಲ್ಲಿ ಭಾಗವಹಿಸುತ್ತಿರುವ ತಿಂಡಿ ತಿನಿಸುಗಳ ಮಾರಾಟಗಾರರ ಸಂಘದ ಸದಸ್ಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸಂಘದ ಅಧ್ಯಕ್ಷ ಎಸ್. ನಾಗರಾಜು ಸಿದ್ದರಾಮನಹುಂಡಿ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಲಾಟರಿ ಪದ್ಧತಿಯನ್ನು ರದ್ದು ಮಾಡದಿದ್ದರೆ ನಮ್ಮ ಸಂಘದ ಸುಮಾರು ೭೦ ಜನ ಮಾರಾಟಗಾರರಿಗೆ ತೊಂದರೆ ಉಂಟಾಗುತ್ತದೆ. ಕಳೆದ ಬಾರಿ ದಸರಾ ಆಹಾರ ಮೇಳದಲ್ಲಿ ಆನ್‌ಲೈನ್ ಪದ್ಧತಿಯನ್ನು ಸರ್ಕಾರ ರದ್ದುಗೊಳಿಸಲಾಗಿತ್ತು. ೨೦೨೩-೨೪ನೇ ಸಾಲಿನಲ್ಲಿ ಪ್ರಾಯೋಜಕತ್ವ ಹಣವನ್ನು ಸ್ಟಾಲ್‌ಗಳಿಗೆ ಬಳಸಿರಲಿಲ್ಲ. ಆದ್ದರಿಂದ ಡಿಡಿ ಹಣವೂ ಹೆಚ್ಚಾಗಿತ್ತು.

ಈ ವರ್ಷದ ದಸರಾದಲ್ಲಿ ಡಿಡಿ ಹಣವನ್ನು ಕಡಿಮೆ ಮಾಡಲು ಪ್ರಾಯೋಜಕತ್ವ ಹಣವನ್ನು ಬಳಸಬೇಕು ಎಂದು ಅವರು ಒತ್ತಾಯಿಸಿದರು. ಈ ವರ್ಷದ ದಸರಾದಲ್ಲಿ ಆಹಾರ ಮೇಳವನ್ನು ೮ ದಿನಗಳವರೆಗೆ ಸೀಮಿತ ಗೊಳಿಸಿದ್ದಾರೆ. ೨೪ ದಿನಗಳ ವರೆಗೆ ದೀಪಾಲಂಕಾರ ಇರುವುದರಿಂದ ಕನಿಷ್ಠ ೧೫ ದಿನಗಳವರೆಗೆ ಆಹಾರ ಮೇಳವನ್ನು ಮುಂದುವರಿಸಬೇಕು. ಅಲ್ಲದೆ, ಆಹಾರ ಮೇಳಕ್ಕೆ ೧ ಕೋಟಿ ರೂ. ಅನುದಾನ ನೀಡಬೇಕು. ಮಾಂಸಾಹಾರ ವ್ಯಾಪಾರ ಮಳಿಗೆಗಳಿಗೆ ೩೦,೦೦೦ ರೂ. ಮತ್ತು ಸಸ್ಯಾಹಾರ ಸ್ಟಾಲ್‌ಗಳಿಗೆ ೨೫,೦೦೦ ರೂ. ಬಾಡಿಗೆ ನಿಗದಿಪಡಿಸಬೇಕು ಎಂದು ನಾಗರಾಜು ಆಗ್ರಹಿಸಿದರು. ಸಂಘದ ಉಪಾಧ್ಯಕ್ಷರಾದ ಶಾಂತಮ್ಮ, ಕಾರ್ಯದರ್ಶಿ ಕಂಸಾಳೆ ರವಿ, ಸಂಘದ ಸದಸ್ಯರಾದ ಬೀರೇಶ್, ಮನೋಜ್, ಶಿವಸಿದ್ದು, ಮಹೇಂದ್ರ, ರಮೇಶ್, ಚಂದ್ರು, ಹರೀಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು

 

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

3 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

6 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago