Andolana originals

ದಸರಾ ಆಹಾರ ಮೇಳ: ಹಳಬರಿಗೆ ಅವಕಾಶಕ್ಕೆ ಮನವಿ

ಮೈಸೂರು: ದಸರಾ ಆಹಾರ ಮೇಳದಲ್ಲಿ ಈ ಬಾರಿ ಲಾಟರಿ ಎತ್ತುವ ಮೂಲಕ ಮಳಿಗೆಗಳನ್ನು ಆಯ್ಕೆ ಮಾಡುವ ವಿಧಾನವನ್ನು ರದ್ದುಗೊಳಿಸಬೇಕು. ಹತ್ತಾರು ವರ್ಷಗಳಿಂದಲೂ ಮೇಳದಲ್ಲಿ ಭಾಗವಹಿಸುತ್ತಿರುವ ತಿಂಡಿ ತಿನಿಸುಗಳ ಮಾರಾಟಗಾರರ ಸಂಘದ ಸದಸ್ಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸಂಘದ ಅಧ್ಯಕ್ಷ ಎಸ್. ನಾಗರಾಜು ಸಿದ್ದರಾಮನಹುಂಡಿ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಲಾಟರಿ ಪದ್ಧತಿಯನ್ನು ರದ್ದು ಮಾಡದಿದ್ದರೆ ನಮ್ಮ ಸಂಘದ ಸುಮಾರು ೭೦ ಜನ ಮಾರಾಟಗಾರರಿಗೆ ತೊಂದರೆ ಉಂಟಾಗುತ್ತದೆ. ಕಳೆದ ಬಾರಿ ದಸರಾ ಆಹಾರ ಮೇಳದಲ್ಲಿ ಆನ್‌ಲೈನ್ ಪದ್ಧತಿಯನ್ನು ಸರ್ಕಾರ ರದ್ದುಗೊಳಿಸಲಾಗಿತ್ತು. ೨೦೨೩-೨೪ನೇ ಸಾಲಿನಲ್ಲಿ ಪ್ರಾಯೋಜಕತ್ವ ಹಣವನ್ನು ಸ್ಟಾಲ್‌ಗಳಿಗೆ ಬಳಸಿರಲಿಲ್ಲ. ಆದ್ದರಿಂದ ಡಿಡಿ ಹಣವೂ ಹೆಚ್ಚಾಗಿತ್ತು.

ಈ ವರ್ಷದ ದಸರಾದಲ್ಲಿ ಡಿಡಿ ಹಣವನ್ನು ಕಡಿಮೆ ಮಾಡಲು ಪ್ರಾಯೋಜಕತ್ವ ಹಣವನ್ನು ಬಳಸಬೇಕು ಎಂದು ಅವರು ಒತ್ತಾಯಿಸಿದರು. ಈ ವರ್ಷದ ದಸರಾದಲ್ಲಿ ಆಹಾರ ಮೇಳವನ್ನು ೮ ದಿನಗಳವರೆಗೆ ಸೀಮಿತ ಗೊಳಿಸಿದ್ದಾರೆ. ೨೪ ದಿನಗಳ ವರೆಗೆ ದೀಪಾಲಂಕಾರ ಇರುವುದರಿಂದ ಕನಿಷ್ಠ ೧೫ ದಿನಗಳವರೆಗೆ ಆಹಾರ ಮೇಳವನ್ನು ಮುಂದುವರಿಸಬೇಕು. ಅಲ್ಲದೆ, ಆಹಾರ ಮೇಳಕ್ಕೆ ೧ ಕೋಟಿ ರೂ. ಅನುದಾನ ನೀಡಬೇಕು. ಮಾಂಸಾಹಾರ ವ್ಯಾಪಾರ ಮಳಿಗೆಗಳಿಗೆ ೩೦,೦೦೦ ರೂ. ಮತ್ತು ಸಸ್ಯಾಹಾರ ಸ್ಟಾಲ್‌ಗಳಿಗೆ ೨೫,೦೦೦ ರೂ. ಬಾಡಿಗೆ ನಿಗದಿಪಡಿಸಬೇಕು ಎಂದು ನಾಗರಾಜು ಆಗ್ರಹಿಸಿದರು. ಸಂಘದ ಉಪಾಧ್ಯಕ್ಷರಾದ ಶಾಂತಮ್ಮ, ಕಾರ್ಯದರ್ಶಿ ಕಂಸಾಳೆ ರವಿ, ಸಂಘದ ಸದಸ್ಯರಾದ ಬೀರೇಶ್, ಮನೋಜ್, ಶಿವಸಿದ್ದು, ಮಹೇಂದ್ರ, ರಮೇಶ್, ಚಂದ್ರು, ಹರೀಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು

 

andolana

Recent Posts

ಹನೂರು| ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬೈಕ್‌ ನಡುವೆ ಅಪಘಾತ: ಇಬ್ಬರು ಸಾವು

ಮಹಾದೇಶ್‌ ಎಂ ಗೌಡ  ಹನೂರು: ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ದ್ವಿಚಕ್ರ ವಾಹನ ಸವಾರರಿಬ್ಬರೂ…

3 hours ago

ಹನೂರು: ಟ್ರ್ಯಾಕ್ಟರ್‌ಗೆ ದ್ವಿಚಕ್ರ ವಾಹನ ಡಿಕ್ಕಿ: ಸವಾರ ಸಾವು

ಮಹಾದೇಶ್‌ ಎಂ ಗೌಡ  ಹನೂರು: ದ್ವಿಚಕ್ರ ವಾಹನ ಸವಾರ ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿರುವ ಘಟನೆ…

3 hours ago

ಮೈಸೂರು ಏರ್‌ಪೋರ್ಟ್‌ನಲ್ಲಿ ಸಿಎಂ, ಡಿಸಿಎಂ ಜೊತೆ ರಾಹುಲ್‌ ಗಾಂಧಿ ಮಾತುಕತೆ

ಮೈಸೂರು: ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌…

6 hours ago

ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜನ‌ ಎಂಟ್ರಿ: ವಾಹನ ಸವಾರರಿಗೆ ಢವಢವ

ಮಹಾದೇಶ್‌ ಎಂ ಗೌಡ ಹನೂರು: ಅಂತರ ರಾಜ್ಯ ನೆರೆಯ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಮಾಪುರ ರಸ್ತೆಯಲ್ಲಿ ನಿತ್ಯ ಗಜರಾಜ ಎಂಟ್ರಿ…

6 hours ago

ಎಂ.ಲಕ್ಷ್ಮಣ್‌ ವಿರುದ್ಧ ಪೊಲೀಸ್‌ ಮಹಾನಿರ್ದೇಶಕರಿಗೆ ದೂರು ನೀಡಿದ ಶಾಸಕ ಶ್ರೀವತ್ಸ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಚಿತಾವಣೆಯಿಂದ ಬಳ್ಳಾರಿಯಲ್ಲಿ ಕಾಂಗ್ರೆಸ್‌ ಕಾರ್ಯಕರ್ತನ ಹೆಣ ಬಿದ್ದಿದೆ ಎಂದು ಹೇಳಿಕೆ…

6 hours ago

ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ನೀಡಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆಗೆ ಹೈಕಮಾಂಡ್‌ ಸ್ಪಷ್ಟನೆ ಕೊಡಬೇಕು ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಒತ್ತಾಯಿಸಿದ್ದಾರೆ. ಜನವರಿ.16ಕ್ಕೆ ಸಿಹಿಸುದ್ದಿ ಬರಲಿದೆ…

6 hours ago