Andolana originals

ದಸರಾ ಆಹಾರ ಮೇಳ: ಹಳಬರಿಗೆ ಅವಕಾಶಕ್ಕೆ ಮನವಿ

ಮೈಸೂರು: ದಸರಾ ಆಹಾರ ಮೇಳದಲ್ಲಿ ಈ ಬಾರಿ ಲಾಟರಿ ಎತ್ತುವ ಮೂಲಕ ಮಳಿಗೆಗಳನ್ನು ಆಯ್ಕೆ ಮಾಡುವ ವಿಧಾನವನ್ನು ರದ್ದುಗೊಳಿಸಬೇಕು. ಹತ್ತಾರು ವರ್ಷಗಳಿಂದಲೂ ಮೇಳದಲ್ಲಿ ಭಾಗವಹಿಸುತ್ತಿರುವ ತಿಂಡಿ ತಿನಿಸುಗಳ ಮಾರಾಟಗಾರರ ಸಂಘದ ಸದಸ್ಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸಂಘದ ಅಧ್ಯಕ್ಷ ಎಸ್. ನಾಗರಾಜು ಸಿದ್ದರಾಮನಹುಂಡಿ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಲಾಟರಿ ಪದ್ಧತಿಯನ್ನು ರದ್ದು ಮಾಡದಿದ್ದರೆ ನಮ್ಮ ಸಂಘದ ಸುಮಾರು ೭೦ ಜನ ಮಾರಾಟಗಾರರಿಗೆ ತೊಂದರೆ ಉಂಟಾಗುತ್ತದೆ. ಕಳೆದ ಬಾರಿ ದಸರಾ ಆಹಾರ ಮೇಳದಲ್ಲಿ ಆನ್‌ಲೈನ್ ಪದ್ಧತಿಯನ್ನು ಸರ್ಕಾರ ರದ್ದುಗೊಳಿಸಲಾಗಿತ್ತು. ೨೦೨೩-೨೪ನೇ ಸಾಲಿನಲ್ಲಿ ಪ್ರಾಯೋಜಕತ್ವ ಹಣವನ್ನು ಸ್ಟಾಲ್‌ಗಳಿಗೆ ಬಳಸಿರಲಿಲ್ಲ. ಆದ್ದರಿಂದ ಡಿಡಿ ಹಣವೂ ಹೆಚ್ಚಾಗಿತ್ತು.

ಈ ವರ್ಷದ ದಸರಾದಲ್ಲಿ ಡಿಡಿ ಹಣವನ್ನು ಕಡಿಮೆ ಮಾಡಲು ಪ್ರಾಯೋಜಕತ್ವ ಹಣವನ್ನು ಬಳಸಬೇಕು ಎಂದು ಅವರು ಒತ್ತಾಯಿಸಿದರು. ಈ ವರ್ಷದ ದಸರಾದಲ್ಲಿ ಆಹಾರ ಮೇಳವನ್ನು ೮ ದಿನಗಳವರೆಗೆ ಸೀಮಿತ ಗೊಳಿಸಿದ್ದಾರೆ. ೨೪ ದಿನಗಳ ವರೆಗೆ ದೀಪಾಲಂಕಾರ ಇರುವುದರಿಂದ ಕನಿಷ್ಠ ೧೫ ದಿನಗಳವರೆಗೆ ಆಹಾರ ಮೇಳವನ್ನು ಮುಂದುವರಿಸಬೇಕು. ಅಲ್ಲದೆ, ಆಹಾರ ಮೇಳಕ್ಕೆ ೧ ಕೋಟಿ ರೂ. ಅನುದಾನ ನೀಡಬೇಕು. ಮಾಂಸಾಹಾರ ವ್ಯಾಪಾರ ಮಳಿಗೆಗಳಿಗೆ ೩೦,೦೦೦ ರೂ. ಮತ್ತು ಸಸ್ಯಾಹಾರ ಸ್ಟಾಲ್‌ಗಳಿಗೆ ೨೫,೦೦೦ ರೂ. ಬಾಡಿಗೆ ನಿಗದಿಪಡಿಸಬೇಕು ಎಂದು ನಾಗರಾಜು ಆಗ್ರಹಿಸಿದರು. ಸಂಘದ ಉಪಾಧ್ಯಕ್ಷರಾದ ಶಾಂತಮ್ಮ, ಕಾರ್ಯದರ್ಶಿ ಕಂಸಾಳೆ ರವಿ, ಸಂಘದ ಸದಸ್ಯರಾದ ಬೀರೇಶ್, ಮನೋಜ್, ಶಿವಸಿದ್ದು, ಮಹೇಂದ್ರ, ರಮೇಶ್, ಚಂದ್ರು, ಹರೀಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು

 

andolana

Recent Posts

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

19 mins ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

6 hours ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

6 hours ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

6 hours ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

6 hours ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

6 hours ago