Andolana originals

ದಸರಾ ಆಹಾರ ಮೇಳ: ಹಳಬರಿಗೆ ಅವಕಾಶಕ್ಕೆ ಮನವಿ

ಮೈಸೂರು: ದಸರಾ ಆಹಾರ ಮೇಳದಲ್ಲಿ ಈ ಬಾರಿ ಲಾಟರಿ ಎತ್ತುವ ಮೂಲಕ ಮಳಿಗೆಗಳನ್ನು ಆಯ್ಕೆ ಮಾಡುವ ವಿಧಾನವನ್ನು ರದ್ದುಗೊಳಿಸಬೇಕು. ಹತ್ತಾರು ವರ್ಷಗಳಿಂದಲೂ ಮೇಳದಲ್ಲಿ ಭಾಗವಹಿಸುತ್ತಿರುವ ತಿಂಡಿ ತಿನಿಸುಗಳ ಮಾರಾಟಗಾರರ ಸಂಘದ ಸದಸ್ಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸಂಘದ ಅಧ್ಯಕ್ಷ ಎಸ್. ನಾಗರಾಜು ಸಿದ್ದರಾಮನಹುಂಡಿ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಲಾಟರಿ ಪದ್ಧತಿಯನ್ನು ರದ್ದು ಮಾಡದಿದ್ದರೆ ನಮ್ಮ ಸಂಘದ ಸುಮಾರು ೭೦ ಜನ ಮಾರಾಟಗಾರರಿಗೆ ತೊಂದರೆ ಉಂಟಾಗುತ್ತದೆ. ಕಳೆದ ಬಾರಿ ದಸರಾ ಆಹಾರ ಮೇಳದಲ್ಲಿ ಆನ್‌ಲೈನ್ ಪದ್ಧತಿಯನ್ನು ಸರ್ಕಾರ ರದ್ದುಗೊಳಿಸಲಾಗಿತ್ತು. ೨೦೨೩-೨೪ನೇ ಸಾಲಿನಲ್ಲಿ ಪ್ರಾಯೋಜಕತ್ವ ಹಣವನ್ನು ಸ್ಟಾಲ್‌ಗಳಿಗೆ ಬಳಸಿರಲಿಲ್ಲ. ಆದ್ದರಿಂದ ಡಿಡಿ ಹಣವೂ ಹೆಚ್ಚಾಗಿತ್ತು.

ಈ ವರ್ಷದ ದಸರಾದಲ್ಲಿ ಡಿಡಿ ಹಣವನ್ನು ಕಡಿಮೆ ಮಾಡಲು ಪ್ರಾಯೋಜಕತ್ವ ಹಣವನ್ನು ಬಳಸಬೇಕು ಎಂದು ಅವರು ಒತ್ತಾಯಿಸಿದರು. ಈ ವರ್ಷದ ದಸರಾದಲ್ಲಿ ಆಹಾರ ಮೇಳವನ್ನು ೮ ದಿನಗಳವರೆಗೆ ಸೀಮಿತ ಗೊಳಿಸಿದ್ದಾರೆ. ೨೪ ದಿನಗಳ ವರೆಗೆ ದೀಪಾಲಂಕಾರ ಇರುವುದರಿಂದ ಕನಿಷ್ಠ ೧೫ ದಿನಗಳವರೆಗೆ ಆಹಾರ ಮೇಳವನ್ನು ಮುಂದುವರಿಸಬೇಕು. ಅಲ್ಲದೆ, ಆಹಾರ ಮೇಳಕ್ಕೆ ೧ ಕೋಟಿ ರೂ. ಅನುದಾನ ನೀಡಬೇಕು. ಮಾಂಸಾಹಾರ ವ್ಯಾಪಾರ ಮಳಿಗೆಗಳಿಗೆ ೩೦,೦೦೦ ರೂ. ಮತ್ತು ಸಸ್ಯಾಹಾರ ಸ್ಟಾಲ್‌ಗಳಿಗೆ ೨೫,೦೦೦ ರೂ. ಬಾಡಿಗೆ ನಿಗದಿಪಡಿಸಬೇಕು ಎಂದು ನಾಗರಾಜು ಆಗ್ರಹಿಸಿದರು. ಸಂಘದ ಉಪಾಧ್ಯಕ್ಷರಾದ ಶಾಂತಮ್ಮ, ಕಾರ್ಯದರ್ಶಿ ಕಂಸಾಳೆ ರವಿ, ಸಂಘದ ಸದಸ್ಯರಾದ ಬೀರೇಶ್, ಮನೋಜ್, ಶಿವಸಿದ್ದು, ಮಹೇಂದ್ರ, ರಮೇಶ್, ಚಂದ್ರು, ಹರೀಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು

 

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

2 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

3 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

6 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

6 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

6 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

6 hours ago