Andolana originals

ದಸರಾ ಆಹಾರ ಮೇಳ: ಹಳಬರಿಗೆ ಅವಕಾಶಕ್ಕೆ ಮನವಿ

ಮೈಸೂರು: ದಸರಾ ಆಹಾರ ಮೇಳದಲ್ಲಿ ಈ ಬಾರಿ ಲಾಟರಿ ಎತ್ತುವ ಮೂಲಕ ಮಳಿಗೆಗಳನ್ನು ಆಯ್ಕೆ ಮಾಡುವ ವಿಧಾನವನ್ನು ರದ್ದುಗೊಳಿಸಬೇಕು. ಹತ್ತಾರು ವರ್ಷಗಳಿಂದಲೂ ಮೇಳದಲ್ಲಿ ಭಾಗವಹಿಸುತ್ತಿರುವ ತಿಂಡಿ ತಿನಿಸುಗಳ ಮಾರಾಟಗಾರರ ಸಂಘದ ಸದಸ್ಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸಂಘದ ಅಧ್ಯಕ್ಷ ಎಸ್. ನಾಗರಾಜು ಸಿದ್ದರಾಮನಹುಂಡಿ ಮನವಿ ಮಾಡಿದರು.

ನಗರದ ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ವೇಳೆ ಲಾಟರಿ ಪದ್ಧತಿಯನ್ನು ರದ್ದು ಮಾಡದಿದ್ದರೆ ನಮ್ಮ ಸಂಘದ ಸುಮಾರು ೭೦ ಜನ ಮಾರಾಟಗಾರರಿಗೆ ತೊಂದರೆ ಉಂಟಾಗುತ್ತದೆ. ಕಳೆದ ಬಾರಿ ದಸರಾ ಆಹಾರ ಮೇಳದಲ್ಲಿ ಆನ್‌ಲೈನ್ ಪದ್ಧತಿಯನ್ನು ಸರ್ಕಾರ ರದ್ದುಗೊಳಿಸಲಾಗಿತ್ತು. ೨೦೨೩-೨೪ನೇ ಸಾಲಿನಲ್ಲಿ ಪ್ರಾಯೋಜಕತ್ವ ಹಣವನ್ನು ಸ್ಟಾಲ್‌ಗಳಿಗೆ ಬಳಸಿರಲಿಲ್ಲ. ಆದ್ದರಿಂದ ಡಿಡಿ ಹಣವೂ ಹೆಚ್ಚಾಗಿತ್ತು.

ಈ ವರ್ಷದ ದಸರಾದಲ್ಲಿ ಡಿಡಿ ಹಣವನ್ನು ಕಡಿಮೆ ಮಾಡಲು ಪ್ರಾಯೋಜಕತ್ವ ಹಣವನ್ನು ಬಳಸಬೇಕು ಎಂದು ಅವರು ಒತ್ತಾಯಿಸಿದರು. ಈ ವರ್ಷದ ದಸರಾದಲ್ಲಿ ಆಹಾರ ಮೇಳವನ್ನು ೮ ದಿನಗಳವರೆಗೆ ಸೀಮಿತ ಗೊಳಿಸಿದ್ದಾರೆ. ೨೪ ದಿನಗಳ ವರೆಗೆ ದೀಪಾಲಂಕಾರ ಇರುವುದರಿಂದ ಕನಿಷ್ಠ ೧೫ ದಿನಗಳವರೆಗೆ ಆಹಾರ ಮೇಳವನ್ನು ಮುಂದುವರಿಸಬೇಕು. ಅಲ್ಲದೆ, ಆಹಾರ ಮೇಳಕ್ಕೆ ೧ ಕೋಟಿ ರೂ. ಅನುದಾನ ನೀಡಬೇಕು. ಮಾಂಸಾಹಾರ ವ್ಯಾಪಾರ ಮಳಿಗೆಗಳಿಗೆ ೩೦,೦೦೦ ರೂ. ಮತ್ತು ಸಸ್ಯಾಹಾರ ಸ್ಟಾಲ್‌ಗಳಿಗೆ ೨೫,೦೦೦ ರೂ. ಬಾಡಿಗೆ ನಿಗದಿಪಡಿಸಬೇಕು ಎಂದು ನಾಗರಾಜು ಆಗ್ರಹಿಸಿದರು. ಸಂಘದ ಉಪಾಧ್ಯಕ್ಷರಾದ ಶಾಂತಮ್ಮ, ಕಾರ್ಯದರ್ಶಿ ಕಂಸಾಳೆ ರವಿ, ಸಂಘದ ಸದಸ್ಯರಾದ ಬೀರೇಶ್, ಮನೋಜ್, ಶಿವಸಿದ್ದು, ಮಹೇಂದ್ರ, ರಮೇಶ್, ಚಂದ್ರು, ಹರೀಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು

 

andolana

Recent Posts

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

57 mins ago

ಕಾಕ್ರೋಚ್‌ ಪಾರ್ಟಿಯ ಎಕ್ಸ್‌, ಇನ್‌ಸ್ಟಾ, ವೆಬ್‌ಸೈಟ್‌ಗೆ ತಡೆ ; ಅಭಿಜಿತ್‌ ದಿಪ್ಕೆ

ನವದೆಹಲಿ :  ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು  ಕಾಕ್ರೋಚ್​ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ.  ಈ…

2 hours ago

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 hours ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

4 hours ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

5 hours ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

6 hours ago