Andolana originals

ದಸರಾ: ಪ್ರವಾಸಿಗರಿಗೆ ಆರೋಗ್ಯ ಜಾಗೃತಿ, ತಪಾಸಣೆ

ಎಸ್.ಪ್ರಶಾಂತ್

ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ

ಮೈಸೂರು: ದಸರಾ ಮಹೋತ್ಸವ ವೀಕ್ಷಿಸಲು ವಿವಿಧೆಡೆಗಳಿಂದ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅರಿವು ಮೂಡಿಸುತ್ತಿದೆ.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ, ಮೃಗಾಲಯ, ಅಂಬಾವಿಲಾಸ ಅರಮನೆ, ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಜನರು ಸೇರುವುದು ಸಹಜ. ಇಂತಹ ಸ್ಥಳಗಳಲ್ಲಿ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದಲ್ಲದೆ, ಸುತ್ತಾಟದ ವೇಳೆ ಯಾರಾದರೂ ಅಸ್ವಸ್ಥಗೊಂಡರೆ ಅಥವಾ ಅನಾರೋಗ್ಯಕ್ಕೆ ಒಳಗಾದರೆ ಅಂತಹವರಿಗೆ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ.

ಅಧಿಕ ರಕ್ತದೊತ್ತಡ, ಮಧುಮೇಹ, ಮೂತ್ರಪಿಂಡ ವೈಫಲ್ಯದಂತಹಕಾಯಿಲೆಗಳಿಗೆ ಮನುಷ್ಯನ ಜೀವನಶೈಲಿಯಲ್ಲಿ ಆಗಿರುವ ಬದಲಾವಣೆ ಕಾರಣ ಎಂಬುದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಅಂಗಾಂಗ ದಾನದ ಮಾಹಿತಿ: ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಳಿಗೆಯಲ್ಲಿ ಅಂಗಾಂಗ ದಾನ ಮಾಡುವ ಬಗ್ಗೆ ಅರಿವು ಮೂಡಿಸುವುದು, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪುನೀತ್ ರಾಜ್‌ಕುಮಾರ್ ಹೃದಯ ಸಂಜೀವಿನಿ ಯೋಜನೆಗಳ ಕುರಿತು ಹಾಗೂ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬೆಟ್ಟದ ಪರಿಸರದಲ್ಲಿ ವಾಸ ಮಾಡುವ ಜನರಿಗೆ ತಕ್ಷಣ ಆರೋಗ್ಯ ಸೇವೆ ಲಭ್ಯವಾಗಬೇಕು ಎಂಬ ದೃಷ್ಟಿಯಿಂದ ಹತ್ತಿರದ ಆಸ್ಪತ್ರೆಗಳಲ್ಲಿ ಟಿವಿ ಮೆಡಿಸನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ಉಚಿತ ತಪಾಸಣೆ: ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ, ಮೃಗಾಲಯ, ಚಾಮುಂಡಿ ಬೆಟ್ಟ, ಜೆ.ಕೆ.ಮೈದಾನ, ರೈಲು ನಿಲ್ದಾಣ, ನಗರ ಬಸ್ ನಿಲ್ದಾಣ ಹಾಗೂ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಅಂಗಾಂಗ ದಾನ, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪುನೀತ್ ರಾಜ್ ಕುಮಾರ್ ಹೃದಯ ಸಂಜೀವಿನಿ ಯೋಜನೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ.

” ದಸರಾ ನೋಡಲು ಸಹಸ್ರಾರು ಪ್ರವಾಸಿಗರು ಮೈಸೂರು ನಗರಕ್ಕೆ ಬರುವುದರಿಂದ ಸೂಕ್ತ ಸ್ಥಳಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಇನ್ನಿತರೆ ಕಾಯಿಲೆಗಳ ಗುಣಲಕ್ಷಣಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.”

ಡಾ.ಪಿ.ಸಿ.ಕುಮಾರಸ್ವಾಮಿ, ಡಿಎಚ್‌ಒ

” ದಸರಾ ಸಂದರ್ಭದಲ್ಲಿ ಬೇರೆ ಬೇರೆ ರಾಜ್ಯ ಹಾಗೂ ದೇಶ, ವಿದೇಶಗಳಿಂದ ಮೈಸೂರಿಗೆ ಬರುವವರಿಗೆ ಹಾಗೂ ಸ್ಥಳೀಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಅಗತ್ಯವಿದ್ದಲ್ಲಿ ಪ್ರಥಮ ಚಿಕಿತ್ಸೆ ಒದಗಿಸುವ ಆರೋಗ್ಯ ಇಲಾಖೆಯ ಪ್ರಯೋಗ ವಿಶೇಷವಾಗಿದ್ದು, ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು.”

-ಶಾರದಾ ಮಂಜು, ಸ್ಥಳೀಯರು

ಆಂದೋಲನ ಡೆಸ್ಕ್

Recent Posts

ಚಿರತೆ ಸೆರೆ | ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…

4 hours ago

ಮೈಸೂರಲ್ಲಿ ಡ್ರಗ್ಸ್‌ ಉತ್ಪಾದನೆ ಶಂಕೆ : ಓರ್ವನ ಬಂಧನ

ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…

4 hours ago

ತೇಗದ ಮರ ಅಕ್ರಮ ಕಟಾವು : ಓರ್ವ ಬಂಧನ

ಹನೂರು : ತಾಲ್ಲೂಕಿನ ಬಿ.ಆರ್.ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ತೇಗದ ಮರಗಳನ್ನು ಕಟಾವು…

4 hours ago

ಮೈಸೂರು ವಿ.ವಿ | ಯುಜಿಸಿ ಉದ್ದೇಶಿತ ಹೊಸ ನಿಯಾಮವಳಿ ಜಾರಿಗೆ ಒತ್ತಾಯ

ಮೈಸೂರು : ವಿಶ್ವವಿದ್ಯಾನಿಲಯಗಳ ಕ್ಯಾಂಪಸ್‌ನಲ್ಲಿ ಜಾತಿ, ಧರ್ಮ,ಲಿಂಗ ಆಧಾರಿತ ಶೋಷಣೆಯನ್ನು ತಡೆಗಟ್ಟಲು ಯುಜಿಸಿಯ ಉದ್ದೇಶಿತ ಹೊಸ ನಿಯಮಾವಳಿಗಳ ಜಾರಿಗೆ ಒತ್ತಾಯಿಸಿ…

5 hours ago

ಸರ್ಕಾರಿ ನೌಕರರಿಗೆ ತಿಂಗಳಿಗೊಮ್ಮೆ ಖಾದಿ ಧಿರಿಸು ಕಡ್ಡಾಯ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ…

6 hours ago

ಕ್ಯಾಂಪಸ್‌ಗಳಲ್ಲಿ ಜಾತಿ ತಾರತಮ್ಯ : ಯುಜಿಸಿ ನಿಯಮಾವಳಿಗೆ ʻಸುಪ್ರೀಂʼ ತಡೆ

ಹೊಸದಿಲ್ಲಿ : ಮಹತ್ವದ ಬೆಳವಣಿಗೆಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಹೊಸ ನಿಯಮಗಳಿಗೆ ಸರ್ವೋಚ್ಚ ನ್ಯಾಯಾಲಯ ತಡೆ ನೀಡಿದೆ. ವಿಶ್ವವಿದ್ಯಾಲಯ…

6 hours ago