Andolana originals

ದಸರಾ: ಪ್ರವಾಸಿಗರಿಗೆ ಆರೋಗ್ಯ ಜಾಗೃತಿ, ತಪಾಸಣೆ

ಎಸ್.ಪ್ರಶಾಂತ್

ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ

ಮೈಸೂರು: ದಸರಾ ಮಹೋತ್ಸವ ವೀಕ್ಷಿಸಲು ವಿವಿಧೆಡೆಗಳಿಂದ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅರಿವು ಮೂಡಿಸುತ್ತಿದೆ.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ, ಮೃಗಾಲಯ, ಅಂಬಾವಿಲಾಸ ಅರಮನೆ, ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಜನರು ಸೇರುವುದು ಸಹಜ. ಇಂತಹ ಸ್ಥಳಗಳಲ್ಲಿ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದಲ್ಲದೆ, ಸುತ್ತಾಟದ ವೇಳೆ ಯಾರಾದರೂ ಅಸ್ವಸ್ಥಗೊಂಡರೆ ಅಥವಾ ಅನಾರೋಗ್ಯಕ್ಕೆ ಒಳಗಾದರೆ ಅಂತಹವರಿಗೆ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ.

ಅಧಿಕ ರಕ್ತದೊತ್ತಡ, ಮಧುಮೇಹ, ಮೂತ್ರಪಿಂಡ ವೈಫಲ್ಯದಂತಹಕಾಯಿಲೆಗಳಿಗೆ ಮನುಷ್ಯನ ಜೀವನಶೈಲಿಯಲ್ಲಿ ಆಗಿರುವ ಬದಲಾವಣೆ ಕಾರಣ ಎಂಬುದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಅಂಗಾಂಗ ದಾನದ ಮಾಹಿತಿ: ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಳಿಗೆಯಲ್ಲಿ ಅಂಗಾಂಗ ದಾನ ಮಾಡುವ ಬಗ್ಗೆ ಅರಿವು ಮೂಡಿಸುವುದು, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪುನೀತ್ ರಾಜ್‌ಕುಮಾರ್ ಹೃದಯ ಸಂಜೀವಿನಿ ಯೋಜನೆಗಳ ಕುರಿತು ಹಾಗೂ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬೆಟ್ಟದ ಪರಿಸರದಲ್ಲಿ ವಾಸ ಮಾಡುವ ಜನರಿಗೆ ತಕ್ಷಣ ಆರೋಗ್ಯ ಸೇವೆ ಲಭ್ಯವಾಗಬೇಕು ಎಂಬ ದೃಷ್ಟಿಯಿಂದ ಹತ್ತಿರದ ಆಸ್ಪತ್ರೆಗಳಲ್ಲಿ ಟಿವಿ ಮೆಡಿಸನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ಉಚಿತ ತಪಾಸಣೆ: ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ, ಮೃಗಾಲಯ, ಚಾಮುಂಡಿ ಬೆಟ್ಟ, ಜೆ.ಕೆ.ಮೈದಾನ, ರೈಲು ನಿಲ್ದಾಣ, ನಗರ ಬಸ್ ನಿಲ್ದಾಣ ಹಾಗೂ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಅಂಗಾಂಗ ದಾನ, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪುನೀತ್ ರಾಜ್ ಕುಮಾರ್ ಹೃದಯ ಸಂಜೀವಿನಿ ಯೋಜನೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ.

” ದಸರಾ ನೋಡಲು ಸಹಸ್ರಾರು ಪ್ರವಾಸಿಗರು ಮೈಸೂರು ನಗರಕ್ಕೆ ಬರುವುದರಿಂದ ಸೂಕ್ತ ಸ್ಥಳಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಇನ್ನಿತರೆ ಕಾಯಿಲೆಗಳ ಗುಣಲಕ್ಷಣಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.”

ಡಾ.ಪಿ.ಸಿ.ಕುಮಾರಸ್ವಾಮಿ, ಡಿಎಚ್‌ಒ

” ದಸರಾ ಸಂದರ್ಭದಲ್ಲಿ ಬೇರೆ ಬೇರೆ ರಾಜ್ಯ ಹಾಗೂ ದೇಶ, ವಿದೇಶಗಳಿಂದ ಮೈಸೂರಿಗೆ ಬರುವವರಿಗೆ ಹಾಗೂ ಸ್ಥಳೀಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಅಗತ್ಯವಿದ್ದಲ್ಲಿ ಪ್ರಥಮ ಚಿಕಿತ್ಸೆ ಒದಗಿಸುವ ಆರೋಗ್ಯ ಇಲಾಖೆಯ ಪ್ರಯೋಗ ವಿಶೇಷವಾಗಿದ್ದು, ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು.”

-ಶಾರದಾ ಮಂಜು, ಸ್ಥಳೀಯರು

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

1 hour ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

2 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

2 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

3 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

8 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

8 hours ago