Andolana originals

ದಸರಾ: ಪ್ರವಾಸಿಗರಿಗೆ ಆರೋಗ್ಯ ಜಾಗೃತಿ, ತಪಾಸಣೆ

ಎಸ್.ಪ್ರಶಾಂತ್

ತುರ್ತು ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆ ವ್ಯವಸ್ಥೆ; ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ

ಮೈಸೂರು: ದಸರಾ ಮಹೋತ್ಸವ ವೀಕ್ಷಿಸಲು ವಿವಿಧೆಡೆಗಳಿಂದ ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅರಿವು ಮೂಡಿಸುತ್ತಿದೆ.

ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ, ಮೃಗಾಲಯ, ಅಂಬಾವಿಲಾಸ ಅರಮನೆ, ಚಾಮುಂಡಿಬೆಟ್ಟ ಸೇರಿದಂತೆ ಹಲವೆಡೆ ಜನರು ಸೇರುವುದು ಸಹಜ. ಇಂತಹ ಸ್ಥಳಗಳಲ್ಲಿ ಪ್ರವಾಸಿಗರಿಗೆ ಆರೋಗ್ಯದ ಬಗ್ಗೆ ಅರಿವು ಮೂಡಿಸುವುದಲ್ಲದೆ, ಸುತ್ತಾಟದ ವೇಳೆ ಯಾರಾದರೂ ಅಸ್ವಸ್ಥಗೊಂಡರೆ ಅಥವಾ ಅನಾರೋಗ್ಯಕ್ಕೆ ಒಳಗಾದರೆ ಅಂತಹವರಿಗೆ ಪ್ರಥಮ ಚಿಕಿತ್ಸೆ ನೀಡಲಾಗುತ್ತದೆ.

ಅಧಿಕ ರಕ್ತದೊತ್ತಡ, ಮಧುಮೇಹ, ಮೂತ್ರಪಿಂಡ ವೈಫಲ್ಯದಂತಹಕಾಯಿಲೆಗಳಿಗೆ ಮನುಷ್ಯನ ಜೀವನಶೈಲಿಯಲ್ಲಿ ಆಗಿರುವ ಬದಲಾವಣೆ ಕಾರಣ ಎಂಬುದರ ಬಗ್ಗೆ ಅರಿವು ಮೂಡಿಸಲಾಗುತ್ತಿದೆ.

ಅಂಗಾಂಗ ದಾನದ ಮಾಹಿತಿ: ದಸರಾ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಳಿಗೆಯಲ್ಲಿ ಅಂಗಾಂಗ ದಾನ ಮಾಡುವ ಬಗ್ಗೆ ಅರಿವು ಮೂಡಿಸುವುದು, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪುನೀತ್ ರಾಜ್‌ಕುಮಾರ್ ಹೃದಯ ಸಂಜೀವಿನಿ ಯೋಜನೆಗಳ ಕುರಿತು ಹಾಗೂ ಕ್ಷಯ ರೋಗ ನಿರ್ಮೂಲನಾ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬೆಟ್ಟದ ಪರಿಸರದಲ್ಲಿ ವಾಸ ಮಾಡುವ ಜನರಿಗೆ ತಕ್ಷಣ ಆರೋಗ್ಯ ಸೇವೆ ಲಭ್ಯವಾಗಬೇಕು ಎಂಬ ದೃಷ್ಟಿಯಿಂದ ಹತ್ತಿರದ ಆಸ್ಪತ್ರೆಗಳಲ್ಲಿ ಟಿವಿ ಮೆಡಿಸನ್ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿದೆ.

ಉಚಿತ ತಪಾಸಣೆ: ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣ, ಮೃಗಾಲಯ, ಚಾಮುಂಡಿ ಬೆಟ್ಟ, ಜೆ.ಕೆ.ಮೈದಾನ, ರೈಲು ನಿಲ್ದಾಣ, ನಗರ ಬಸ್ ನಿಲ್ದಾಣ ಹಾಗೂ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಅಂಗಾಂಗ ದಾನ, ಆಯುಷ್ಮಾನ್ ಭಾರತ್, ಆರೋಗ್ಯ ಕರ್ನಾಟಕ, ಪುನೀತ್ ರಾಜ್ ಕುಮಾರ್ ಹೃದಯ ಸಂಜೀವಿನಿ ಯೋಜನೆಗಳ ಕುರಿತು ಮಾಹಿತಿ ನೀಡಲಾಗುತ್ತಿದೆ.

” ದಸರಾ ನೋಡಲು ಸಹಸ್ರಾರು ಪ್ರವಾಸಿಗರು ಮೈಸೂರು ನಗರಕ್ಕೆ ಬರುವುದರಿಂದ ಸೂಕ್ತ ಸ್ಥಳಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಹಾಗೂ ಇನ್ನಿತರೆ ಕಾಯಿಲೆಗಳ ಗುಣಲಕ್ಷಣಗಳ ಕುರಿತು ಮಾಹಿತಿ ನೀಡಲಾಗುತ್ತಿದೆ. ತುರ್ತು ಸಂದರ್ಭಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.”

ಡಾ.ಪಿ.ಸಿ.ಕುಮಾರಸ್ವಾಮಿ, ಡಿಎಚ್‌ಒ

” ದಸರಾ ಸಂದರ್ಭದಲ್ಲಿ ಬೇರೆ ಬೇರೆ ರಾಜ್ಯ ಹಾಗೂ ದೇಶ, ವಿದೇಶಗಳಿಂದ ಮೈಸೂರಿಗೆ ಬರುವವರಿಗೆ ಹಾಗೂ ಸ್ಥಳೀಯರಿಗೆ ಉಚಿತ ಆರೋಗ್ಯ ತಪಾಸಣೆ ಹಾಗೂ ಅಗತ್ಯವಿದ್ದಲ್ಲಿ ಪ್ರಥಮ ಚಿಕಿತ್ಸೆ ಒದಗಿಸುವ ಆರೋಗ್ಯ ಇಲಾಖೆಯ ಪ್ರಯೋಗ ವಿಶೇಷವಾಗಿದ್ದು, ಜನರು ಇದನ್ನು ಸದುಪಯೋಗಪಡಿಸಿಕೊಳ್ಳಬೇಕು.”

-ಶಾರದಾ ಮಂಜು, ಸ್ಥಳೀಯರು

ಆಂದೋಲನ ಡೆಸ್ಕ್

Recent Posts

ತುಮಕೂರಿನಲ್ಲಿ ಸರ್ಕಾರದ ಸಾಧನಾ ಸಮಾವೇಶ

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ…

1 hour ago

ಅಗತ್ಯವಿದ್ದರೆ ಹುಚ್ಚು ಬೀದಿ ನಾಯಿಗಳನ್ನು ಕೊಲ್ಲಿ: ಸುಪ್ರೀಂಕೋರ್ಟ್‌ ಅನುಮತಿ

ನವದೆಹಲಿ: ಬೀದಿ ನಾಯಿಗಳ ನಿಯಂತ್ರಣಕ್ಕೆ ಅವುಗಳನ್ನು ಆಶ್ರಯ ತಾಣಗಳಿಗೆ ಸ್ಥಳಾಂತರಿಸಲು ಆದೇಶಿಸಿದ್ದ ಸುಪ್ರೀಂಕೋರ್ಟ್‌ ತನ್ನ ಆದೇಶವನ್ನು ಹಿಂಪಡೆಯುವುದಿಲ್ಲ ಎಂದು ಹೇಳಿದೆ.…

2 hours ago

ಉಸಿರು ಚೆಲ್ಲಿದ ದುಬಾರೆಯ ಮಾರ್ತಾಂಡ ಆನೆ

ಕೊಡಗು: ಜಿಲ್ಲೆಯ ಕುಶಾಲನಗರದ ದುಬಾರೆ ಆನೆ ಶಿಬಿರದಲ್ಲಿ ಸ್ನಾನ ಮಾಡುವ ವೇಳೆ ಕಂಜನ್‌ ಆನೆ ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ…

3 hours ago

ಸಾರಿಗೆ ಮುಷ್ಕರಕ್ಕೆ ಹೈಕೋರ್ಟ್‌ ಬ್ರೇಕ್

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ.…

4 hours ago

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

4 hours ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

6 hours ago