Andolana originals

ದಸರಾ: ಸಿಂಗಾರಗೊಳ್ಳುತ್ತಿರುವ ಸಾಂಸ್ಕೃತಿಕ ನಗರಿ

ಪ್ರಮುಖ ವೃತ್ತಗಳಿಗೆ ಸುಣ್ಣ-ಬಣ್ಣ, ದೀಪಾಲಂಕಾರ; ರಸ್ತೆ,ಫುಟ್‌ಪಾತ್‌ಗಳ ದುರಸ್ತಿ ಕಾರ್ಯ ಚುರುಕು

ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ಅರಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರಮನೆ ನಗರಿಯನ್ನು ಸುಂದರಗೊಳಿಸುವ ಕಾಮಗಾರಿಯನ್ನು ಮೈಸೂರು ನಗರಪಾಲಿಕೆ ಶುರು ಮಾಡಿದೆ. ಅರಮನೆ ಆವರಣದ ಜಯಮಾರ್ತಾಂಡ ದ್ವಾರ, ಬಲರಾಮ ದ್ವಾರ, ಅರಮನೆ ಮಂಡಳಿ ಕಚೇರಿ ಎದುರು, ಆನೆಗೆ ಅಂಬಾರಿ ಕಟ್ಟುವ ಜಾಗದಲ್ಲಿ ಅಳವಡಿಸಿರುವ ಗ್ರಿಲ್‌ಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ. ಹಾಗೆಯೇ ಉದ್ಯಾನವನದಲ್ಲಿ ಹೊಸ ಹೂವಿನ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ.

ದಸರಾ ಉದ್ಘಾಟನೆ ಹೊತ್ತಿಗೆ ಅರಮನೆಯ ಎದುರಿನ ಅಂಗಳ, ಉದ್ಯಾನವನ್ನು ಹೂವುಗಳ ರಾಶಿಯಿಂದ ಕಂಗೊಳಿಸುವಂತೆ ಮಾಡುವ ಕೆಲಸ ನಡೆಯುತ್ತಿದೆ. ಅದೇ ರೀತಿ ಜಯ ಮಾರ್ತಾಂಡ ದ್ವಾರ ಮೊದಲಾದ ಕಡೆಗಳಲ್ಲಿ ಕೆಟ್ಟು ಹೋಗಿರುವ ವಿದ್ಯುತ್ ಬಲ್ಬ್‌ಗಳನ್ನು ಬದಲಿಸಿ ಹೊಸದಾಗಿ ಅಳವಡಿಸುವುದು, ಗೋಪುರಗಳಿಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

೯ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ: ನಗರದ ಸೌಂದರ್ಯಕ್ಕೆ ಪ್ರಮುಖ ಪಾತ್ರ ವಹಿಸಿರುವ ನಗರ ಪಾಲಿಕೆಯು ೯ ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಆರಂಭಿಸಿದೆ. ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಬನ್ನಿಮಂಟಪ ರಸ್ತೆ, ಕೋಟೆ ಮಾರಮ್ಮ ದೇವಸ್ಥಾನದ ರಸ್ತೆ, ಹಾರ್ಡಿಂಜ್ ವೃತ್ತ, ಮೈಸೂರು ವಿವಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಕಲಾಮಂದಿರದ ರಸ್ತೆ, ಚಾಮುಂಡಿವಿಹಾರ ಕ್ರೀಡಾಂಗಣದ ರಸ್ತೆ ಬದಿಗಳಲ್ಲಿ ಇರುವ ಫುಟ್‌ಪಾತ್‌ಗಳ ದುರಸ್ತಿ, ಬಣ್ಣ ಬಳಿಯುವ ಕೆಲಸ ಮಾಡಲಾಗುತ್ತಿದೆ.

ನಗರದ ಪ್ರಮುಖ ವೃತ್ತಗಳಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಚಾಮರಾಜೇಂದ್ರ ಒಡೆಯರ್ವೃತ್ತ, ಜಯಚಾಮರಾಜ ಒಡೆಯರ್ ವೃತ್ತಗಳಿಗೆ ಬಣ್ಣ ಬಣ್ಣದ ದೀಪಾಲಂಕಾರ ಮಾಡಲು ಕಾರ್ಮಿಕರು ಕಾಮಗಾರಿ ಆರಂಭಿಸಿ ಪಕ್ಷಿಗಳು ಕಟ್ಟಿದ್ದ ಗೂಡುಗಳನ್ನು ತೆಗೆದು ಶುಚಿಗೊಳಿಸಿ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ

” ನಗರದಲ್ಲಿ ಅಂದ ಚೆಂದದಿಂದ ಕಣ್ಮನ ಸೆಳೆಯುವ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ೨೦೦ಕ್ಕೂ ಹೆಚ್ಚು ಕಾರ್ಮಿಕರು ತೊಡಗಿದ್ದಾರೆ. ಚಾಮರಾಜ ಜೋಡಿ ರಸ್ತೆ, ಹಾರ್ಡಿಂಜ್ ವೃತ್ತ, ರಾಮಸ್ವಾಮಿ ವೃತ್ತ, ಲಲಿತಮಹಲ್ ರಸ್ತೆ,ಸಯ್ಯಾಜಿರಾವ್ ರಸ್ತೆಯಲ್ಲಿರುವ ಮರಗಳಿಗೆ ದೀಪಾಲಂಕಾರ ಮಾಡಲಾಗುತ್ತಿದೆ. ಬಹುಬೇಗನೆ ಕೆಲಸ ಮುಗಿಸಲು ಸಣ್ಣ ಸಣ್ಣ ಮೊತ್ತದಿಂದ ದೊಡ್ಡ ಮೊತ್ತದವರೆಗೂ ಪ್ರತ್ಯೇಕ ಟೆಂಡರ್ ನೀಡಲಾಗಿದೆ. ಇದರಿಂದಾಗಿ ತಮಗೆ ಸಿಕ್ಕ ಪ್ರದೇಶಗಳಲ್ಲಿ ಗುತ್ತಿಗೆದಾರರು ಲೈಟಿಂಗ್ಸ್ ಅಳವಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.”

ಆಂದೋಲನ ಡೆಸ್ಕ್

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

35 mins ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

1 hour ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

1 hour ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

2 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

2 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

2 hours ago