Andolana originals

ದಸರಾ: ಸಿಂಗಾರಗೊಳ್ಳುತ್ತಿರುವ ಸಾಂಸ್ಕೃತಿಕ ನಗರಿ

ಪ್ರಮುಖ ವೃತ್ತಗಳಿಗೆ ಸುಣ್ಣ-ಬಣ್ಣ, ದೀಪಾಲಂಕಾರ; ರಸ್ತೆ,ಫುಟ್‌ಪಾತ್‌ಗಳ ದುರಸ್ತಿ ಕಾರ್ಯ ಚುರುಕು

ಮೈಸೂರು: ದಸರಾ ಮಹೋತ್ಸವಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆಯೇ ಅರಮನೆ ನಗರಿ ಮೈಸೂರಿನಲ್ಲಿ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ಅರಮನೆ ಸುತ್ತಮುತ್ತಲ ಪ್ರದೇಶಗಳಲ್ಲಿ ಅರಮನೆ ನಗರಿಯನ್ನು ಸುಂದರಗೊಳಿಸುವ ಕಾಮಗಾರಿಯನ್ನು ಮೈಸೂರು ನಗರಪಾಲಿಕೆ ಶುರು ಮಾಡಿದೆ. ಅರಮನೆ ಆವರಣದ ಜಯಮಾರ್ತಾಂಡ ದ್ವಾರ, ಬಲರಾಮ ದ್ವಾರ, ಅರಮನೆ ಮಂಡಳಿ ಕಚೇರಿ ಎದುರು, ಆನೆಗೆ ಅಂಬಾರಿ ಕಟ್ಟುವ ಜಾಗದಲ್ಲಿ ಅಳವಡಿಸಿರುವ ಗ್ರಿಲ್‌ಗಳಿಗೆ ಬಣ್ಣ ಬಳಿಯುವ ಕೆಲಸ ನಡೆಯುತ್ತಿದೆ. ಹಾಗೆಯೇ ಉದ್ಯಾನವನದಲ್ಲಿ ಹೊಸ ಹೂವಿನ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ.

ದಸರಾ ಉದ್ಘಾಟನೆ ಹೊತ್ತಿಗೆ ಅರಮನೆಯ ಎದುರಿನ ಅಂಗಳ, ಉದ್ಯಾನವನ್ನು ಹೂವುಗಳ ರಾಶಿಯಿಂದ ಕಂಗೊಳಿಸುವಂತೆ ಮಾಡುವ ಕೆಲಸ ನಡೆಯುತ್ತಿದೆ. ಅದೇ ರೀತಿ ಜಯ ಮಾರ್ತಾಂಡ ದ್ವಾರ ಮೊದಲಾದ ಕಡೆಗಳಲ್ಲಿ ಕೆಟ್ಟು ಹೋಗಿರುವ ವಿದ್ಯುತ್ ಬಲ್ಬ್‌ಗಳನ್ನು ಬದಲಿಸಿ ಹೊಸದಾಗಿ ಅಳವಡಿಸುವುದು, ಗೋಪುರಗಳಿಗೆ ಬಣ್ಣ ಬಳಿಯುವ ಕೆಲಸ ಮಾಡುತ್ತಿರುವುದನ್ನು ಕಾಣಬಹುದಾಗಿದೆ.

೯ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ: ನಗರದ ಸೌಂದರ್ಯಕ್ಕೆ ಪ್ರಮುಖ ಪಾತ್ರ ವಹಿಸಿರುವ ನಗರ ಪಾಲಿಕೆಯು ೯ ಕೋಟಿ ರೂ. ವೆಚ್ಚದಲ್ಲಿ ವಿವಿಧ ಕಾಮಗಾರಿಗಳನ್ನು ಆರಂಭಿಸಿದೆ. ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಬನ್ನಿಮಂಟಪ ರಸ್ತೆ, ಕೋಟೆ ಮಾರಮ್ಮ ದೇವಸ್ಥಾನದ ರಸ್ತೆ, ಹಾರ್ಡಿಂಜ್ ವೃತ್ತ, ಮೈಸೂರು ವಿವಿ ರಸ್ತೆ, ಚಾಮರಾಜ ಜೋಡಿ ರಸ್ತೆ, ಕಲಾಮಂದಿರದ ರಸ್ತೆ, ಚಾಮುಂಡಿವಿಹಾರ ಕ್ರೀಡಾಂಗಣದ ರಸ್ತೆ ಬದಿಗಳಲ್ಲಿ ಇರುವ ಫುಟ್‌ಪಾತ್‌ಗಳ ದುರಸ್ತಿ, ಬಣ್ಣ ಬಳಿಯುವ ಕೆಲಸ ಮಾಡಲಾಗುತ್ತಿದೆ.

ನಗರದ ಪ್ರಮುಖ ವೃತ್ತಗಳಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ಚಾಮರಾಜೇಂದ್ರ ಒಡೆಯರ್ವೃತ್ತ, ಜಯಚಾಮರಾಜ ಒಡೆಯರ್ ವೃತ್ತಗಳಿಗೆ ಬಣ್ಣ ಬಣ್ಣದ ದೀಪಾಲಂಕಾರ ಮಾಡಲು ಕಾರ್ಮಿಕರು ಕಾಮಗಾರಿ ಆರಂಭಿಸಿ ಪಕ್ಷಿಗಳು ಕಟ್ಟಿದ್ದ ಗೂಡುಗಳನ್ನು ತೆಗೆದು ಶುಚಿಗೊಳಿಸಿ ಬಣ್ಣ ಬಳಿಯುವ ಕೆಲಸ ಮಾಡುತ್ತಿದ್ದಾರೆ

” ನಗರದಲ್ಲಿ ಅಂದ ಚೆಂದದಿಂದ ಕಣ್ಮನ ಸೆಳೆಯುವ ವಿದ್ಯುತ್ ದೀಪಗಳನ್ನು ಅಳವಡಿಸುವ ಕಾರ್ಯದಲ್ಲಿ ೨೦೦ಕ್ಕೂ ಹೆಚ್ಚು ಕಾರ್ಮಿಕರು ತೊಡಗಿದ್ದಾರೆ. ಚಾಮರಾಜ ಜೋಡಿ ರಸ್ತೆ, ಹಾರ್ಡಿಂಜ್ ವೃತ್ತ, ರಾಮಸ್ವಾಮಿ ವೃತ್ತ, ಲಲಿತಮಹಲ್ ರಸ್ತೆ,ಸಯ್ಯಾಜಿರಾವ್ ರಸ್ತೆಯಲ್ಲಿರುವ ಮರಗಳಿಗೆ ದೀಪಾಲಂಕಾರ ಮಾಡಲಾಗುತ್ತಿದೆ. ಬಹುಬೇಗನೆ ಕೆಲಸ ಮುಗಿಸಲು ಸಣ್ಣ ಸಣ್ಣ ಮೊತ್ತದಿಂದ ದೊಡ್ಡ ಮೊತ್ತದವರೆಗೂ ಪ್ರತ್ಯೇಕ ಟೆಂಡರ್ ನೀಡಲಾಗಿದೆ. ಇದರಿಂದಾಗಿ ತಮಗೆ ಸಿಕ್ಕ ಪ್ರದೇಶಗಳಲ್ಲಿ ಗುತ್ತಿಗೆದಾರರು ಲೈಟಿಂಗ್ಸ್ ಅಳವಡಿಸುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಹೇಳಲಾಗಿದೆ.”

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

16 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

18 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

19 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

19 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

22 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

2 days ago