Andolana originals

ದಸರಾ: ಜನರ ಸುರಕ್ಷತೆಗೆ ಆದ್ಯತೆ ನೀಡಿ

ನವೀನ್ ಡಿಸೋಜ

ಆಚರಣೆ ವೇಳೆ ನಿಯಮ ಪಾಲಿಸುವಂತೆ ಪೊಲೀಸ್ ಇಲಾಖೆಯಿಂದ ಹಲವು ಸೂಚನೆ 

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಆಚರಣೆ ಸಂಬಂಧವಾಗಿ ಪೊಲೀಸ್ ಇಲಾಖೆಯಿಂದ ಮಹತ್ವದ ಆದೇಶ ಹೊರಡಿಸಲಾಗಿದ್ದು, ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸೂಚನೆ ನೀಡಲಾಗಿದೆ.

ಸೆ.೨೨ರಿಂದ ಮಡಿಕೇರಿ ದಸರಾ ಕಾರ್ಯಕ್ರಮಗಳು ಆರಂಭವಾಗಲಿವೆ. ಪ್ರತಿದಿನ ವಿಭಿನ್ನ ಕಾರ್ಯಕ್ರಮಗಳು ನಡೆಯಲಿದ್ದು, ದಸರಾ ಸಾಂಸ್ಕೃತಿಕ ಸಮಿತಿ ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಅ.೨ರಂದು ರಾತ್ರಿ ದಶಮಂಟಪಗಳ ಶೋಭಾಯಾತ್ರೆ ನಡೆಯಲಿದ್ದು, ಲಕ್ಷಾಂತರ ಮಂದಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ಅಗತ್ಯ ಮುನ್ನೆ ಚ್ಚರಿಕಾ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ತಿಳಿಸಿದೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಅಹಿತಕರ ಘಟನೆ ನಡೆದಿರುವ ಹಿನ್ನೆಲೆಯಲ್ಲಿ ಆಯೋಜಕರಿಗೆ ಕೆಲವು ನಿಯಮಗಳನ್ನು ಪಾಲಿಸಬೇಕೆಂದು ಸೂಚನೆ ನೀಡಲಾಗಿದೆ. ಮಡಿಕೇರಿ ದಸರಾ ಮೆರವಣಿಗೆಯ ವೀಕ್ಷಣೆಗಾಗಿ ಬರುವ ಸಾರ್ವಜನಿಕರು, ವಿಶೇಷವಾಗಿ ಹಿರಿಯ ನಾಗರಿಕರ, ಮಹಿಳೆಯರ ಹಾಗೂ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕಾಗಿದೆ. ದಸರಾ ಮೆರವಣಿಗೆ ಸಾಗುವ ರಸ್ತೆಗಳಲ್ಲಿನ ಜನವಸತಿ ಪ್ರದೇಶಗಳಲ್ಲಿ ವಾಸಿಸುವ ಹಾಗೂ ಕೂಗಳತೆಯ ದೂರದಲ್ಲಿರುವ ಆಸ್ಪತ್ರೆಗಳಲ್ಲಿ ದಾಖಲಾಗಿರುವ ಗರ್ಭಿಣಿಯರ, ಹಿರಿಯರ ಸುರಕ್ಷತೆಯ ನಿಟ್ಟಿನಲ್ಲಿ ಮಡಿಕೇರಿ ದಸರಾ ಸಮಿತಿ ಹಾಗೂ ದಶಮಂಟಪ ಸಮಿತಿಯವರು ಕಡ್ಡಾಯವಾಗಿ ಸೂಚನೆಗಳನ್ನು ಪಾಲಿಸಬೇಕೆಂದು ಆದೇಶಿಸಲಾಗಿದೆ.

ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದ ರಿಟ್ ಪೆಟಿಷನ್ ನಂ.೨೩೩೮೫/೨೦೨೩ರ ಆದೇಶವನ್ನು ಪಾಲನೆ ಮಾಡಬೇಕು. ಧ್ವನಿವರ್ಧಕ, ಮ್ಯೂಸಿಕ್ ಸಿಸ್ಟಮ್‌ಅನ್ನು ನಿರ್ದಿಷ್ಟಪಡಿಸಿದ ಸಮಯ ಹಾಗೂ ಡೆಸಿಬಲ್‌ಗಳಂತೆ ಬಳಸಬೇಕು. ಮೆರವಣಿಗೆಯಲ್ಲಿ ಸಾಗುವ ಮಂಟಪಗಳನ್ನು ಟ್ರಾಕ್ಟರ್, ಟ್ರೈಲರ್‌ಗಳ ಮೇಲೆ ಭಾರತೀಯ ಮೋಟಾರು ವಾಹನ ಕಾಯಿದೆ-೧೯೮೮ರ ನಿಯಮಗಳಂತೆ ತಯಾರಿಸಬೇಕು.

ದಶ ಮಂಟಪಗಳ ನಿರ್ಮಾಣದ ಸಮಯದಲ್ಲಿ (ದಸರಾ ದಿನದ ಹಿಂದಿನ ದಿನಗಳಲ್ಲಿ) ಜನರ ಓಡಾಟಕ್ಕೆ ತೊಂದರೆ ಆಗುವ ರೀತಿಯಲ್ಲಿ ಸಾರ್ವಜನಿಕ ರಸ್ತೆಗಳನ್ನು ಬಳಸಬಾರದು. ಮಂಟಪಗಳನ್ನು ಅವುಗಳ ಸ್ಥಿರತೆಯ ಬಗ್ಗೆ ತಾಂತ್ರಿಕ ಪರಿಣತರಿಂದ ದೃಢೀಕರಿಸಿದ ನಂತರವೇ ಸಾರ್ವಜನಿಕ ರಸ್ತೆಗೆ ತರಬೇಕು. ಮಂಟಪಗಳನ್ನು ಹಾಗೂ ಕಲಾಕೃತಿಗಳನ್ನು ಅತಿ ಎತ್ತರವಾಗಿ ನಿರ್ಮಿಸುವುದರಿಂದ ಮೆರವಣಿಗೆ ಸಾಗುವ ಮಾರ್ಗದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿಗಳಿಗೆ ಮಂಟಪಗಳು ಹಾಗೂ ಕಲಾಕೃತಿಗಳು ತಾಗಿ ವಿದ್ಯುತ್ ಅವಘಡ ಸಂಭವಿಸುವ ಸಾಧ್ಯತೆ ಇರುತ್ತದೆ. ಹಾಗಾಗಿ ಎತ್ತರವನ್ನು ಮಿತಿಗೊಳಿಸಬೇಕು.

ದಶಮಂಟಪಗಳ ಕಥಾ ಪ್ರದರ್ಶನವನ್ನು ಸಾಕಷ್ಟು ಸ್ಥಳಾವಕಾಶ ಇರುವ ಕಡೆಗಳಲ್ಲಿ ಯಾವುದೇ ಕಾಲ್ತುಳಿತ ಹಾಗೂ ಇತರೆ ಅವಘಡಗಳಿಗೆ ಅವಕಾಶ ಆಗದಂತೆ ಪ್ರದರ್ಶಿಸಬೇಕು. ದಶಮಂಟಪಗಳ ಕಥಾ ಪ್ರದರ್ಶನದ ಸಮಯದಲ್ಲಿ ಸಿಡಿಮದ್ದು, ಬೆಂಕಿಯ ಜ್ವಾಲೆ, ಬಿರುಸುಬಾಣಗಳನ್ನು ಬಳಸುವುದರಿಂದ ಬೆಂಕಿ ಅವಘಡ ಸಂಭವಿಸಿ ನೆರೆಯುವ ಜನರು ಕಾಲ್ತುಳಿತಕ್ಕೆ ಸಿಲುಕುವ ಸಾಧ್ಯತೆ ಇರುವುದರಿಂದ ಇವುಗಳನ್ನು ಬಳಸದಂತೆ ಕ್ರಮವಹಿಸುವುದು ಹಾಗೂ ಅಗ್ನಿ ನಿಯಂತ್ರಣ ಸಾಮಗ್ರಿಗಳನ್ನು ಪ್ರತಿ ಮಂಟಪಗಳಲ್ಲಿ ಕಡ್ಡಾಯವಾಗಿ ಇರಿಸಿಕೊಳ್ಳಬೇಕು.

ಏಕರೂಪ ಸಮಾಧಾನಕರ ಬಹುಮಾನ ನೀಡಿ…: 

ದಶ ಮಂಟಪಗಳ ಮೆರವಣಿಗೆಯಲ್ಲಿ ಭಾಗವಹಿಸುವ ಮಂಟಪಗಳನ್ನು ತೀರ್ಪುಗಾರರು ವೀಕ್ಷಿಸಿ ಅವುಗಳಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನಗಳನ್ನು ನೀಡುವುದು ವಾಡಿಕೆ. ಆಯಾಯ ಮಂಟಪಗಳ ಉಸ್ತುವಾರಿ ಸಮಿತಿಯವರು ತೀರ್ಪುಗಾರರ ತೀರ್ಪನ್ನು ಪ್ರತಿಷ್ಠೆಯನ್ನಾಗಿ ಪರಿಗಣಿಸಿ ಮಂಟಪ ಸಮಿತಿಗಳ ನಡುವೆ ಪೈಪೋಟಿ ನಡೆಸಿ ಪ್ರಥಮ ಸ್ಥಾನಕ್ಕಾಗಿ ಮಂಟಪ ಹಾಗೂ ಕಲಾಕೃತಿಗಳ ಗಾತ್ರಗಳನ್ನು ಹೆಚ್ಚಿಸಿ ಅವೈಜ್ಞಾನಿಕ ವಿಧಾನಗಳನ್ನು ಬಳಸುವುದಲ್ಲದೆ, ಸಿಡಿಮದ್ದು ಹಾಗೂ ಪಟಾಕಿಯನ್ನು ಹೆಚ್ಚಾಗಿ ಬಳಸಿ ಮತ್ತು ಹೆಚ್ಚು ಧ್ವನಿ ಹೊಮ್ಮುವ ಧ್ವನಿವರ್ಧಕಗಳನ್ನು (ಡಿಜೆ) ಹಾಗೂ ಹೆಚ್ಚು ಹೊಗೆ ಹೊಮ್ಮುವ ಉಪಕರಣಗಳನ್ನು ಬಳಸಿ ವಾಯುಮಾಲಿನ್ಯ, ಶಬ್ದ ಮಾಲಿನ್ಯ ಮಾಡುವುದು ಕಂಡು ಬಂದಿದೆ. ಅಲ್ಲದೆ, ತೀರ್ಪನ್ನು ಪ್ರಕಟಿಸಿದ ನಂತರ ಮಂಟಪಗಳ ಸಮಿತಿಯವರು ಪರಸ್ಪರ ಜಗಳ ಮಾಡಿಕೊಂಡು ಸಾರ್ವಜನಿಕರ ಸುರಕ್ಷತೆಗೆ ಹಾಗೂ ಕಾನೂನು ಸುವ್ಯಸ್ಥೆಗೆ ಧಕ್ಕೆ ಉಂಟು ಮಾಡುವುದು ಹಾಗೂ ದಸರಾ ಆಚರಣೆಯ ಸಂತರ ಮಂಟಪಗಳನ್ನು ರಸ್ತೆಯಲ್ಲಿಯೇ ಬಿಟ್ಟು ವಾಹನ ಸಂಚಾರಕ್ಕೆ ಅಡಚಣೆ ಉಂಟು ಮಾಡುತ್ತಿರುವುದರಿಂದ ಉತ್ತಮ ಕಲಾಕೃತಿಯ ಆಯ್ಕೆಯ ಪ್ರಕ್ರಿಯೆಯನ್ನು ಕೈಬಿಟ್ಟು ಎಲ್ಲಾ ಮಂಟಪಗಳಿಗೂ ಏಕರೂಪ ಸಮಾಧಾನಕರ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸುವ ಬಗ್ಗೆ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಸಲಹೆ ಮಾಡಿದೆ.

” ದಸರಾ ಆಚರಣೆ ಸಂದರ್ಭದಲ್ಲಿ ಜನರ ಸುರಕ್ಷತೆಗೆ ಆದ್ಯತೆ ನೀಡಬೇಕಾಗಿದೆ. ಹೀಗಾಗಿ ಪೊಲೀಸ್ ಇಲಾಖೆಯ ಎಲ್ಲಾ ಸೂಚನೆಗಳನ್ನು ಪಾಲಿಸಬೇಕು. ಇತಿಹಾಸ ಪ್ರಸಿದ್ಧ ಮಡಿಕೇರಿ ದಸರಾ ಮಹೋತ್ಸವವನ್ನು ಕಣ್ತುಂಬಿಸಿಕೊಳ್ಳಲು ರಾಜ್ಯದ ವಿವಿಧೆಡೆಗಳಿಂದ ಬರುವ ಜನರ ಹಕ್ಕುಗಳಿಗೆ ಧಕ್ಕೆಯಾಗದಂತೆ ಎಲ್ಲರ ಸುರಕ್ಷತೆಗೆ ಆದ್ಯತೆ ನೀಡುವ ಮೂಲಕ ದಸರ ಆಚರಣೆಯನ್ನು ಯಶಸ್ವಿಯಾಗಿಸಲು ಸಹಕರಿಸಬೇಕು.”

-ಕೆ.ರಾಮರಾಜನ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

ಆಂದೋಲನ ಡೆಸ್ಕ್

Recent Posts

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

44 mins ago

ಮಹದೇಶ್ವರ ಬೆಟ್ಟ | ಪಾದಯಾತ್ರೆ, ದ್ವಿಚಕ್ರ ವಾಹನಕ್ಕೆ ತಾತ್ಕಾಲಿಕ ನಿರ್ಬಂಧ

ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಾಗೂ ದ್ವಿಚಕ್ರ ವಾಹನದಲ್ಲಿ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ…

1 hour ago

ಮುಡುಕುತೊರೆ ಜಾತ್ರೆ : ಪೋಸ್ಟರ್ ಬಿಡುಗಡೆಗೊಳಿಸಿದ ಸಚಿವ ಎಚ್‌ಸಿಎಂ

ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…

1 hour ago

ಗುರಿ ಇಟ್ಟುಕೊಂಡು ನಿರಂತರ ಓದಿ : ಪಿಯುಸಿ ವಿದ್ಯಾರ್ಥಿಗಳಿಗೆ ನಿಶಾಂತ್‌ ಸಲಹೆ

ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…

2 hours ago

ಉತ್ತರ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ವಿಮಾನ ಪತನ: ಇಬ್ಬರು ಪೈಲಟ್‌ಗಳು ಬಚಾವ್‌

ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್‌ರಾಜ್‌ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್‌ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್‌ಗಳನ್ನು…

3 hours ago

ನೈಸರ್ಗಿಕ ಕೃಷಿ ಪದ್ಧತಿ ಎಲ್ಲರ ಪಾಲಿಗೆ ಜೀವನೋಪಾಯವಾಗಲಿ: ಡಾ. ಶರಣ ಪ್ರಕಾಶ್‌ ಪಾಟೀಲ್

ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…

3 hours ago