Andolana originals

ಕಾನೂನು ಹೋರಾಟಕ್ಕೆ ಮುಂದಾದ ದಶಮಂಟಪ ಸಮಿತಿ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವ ಆರೋಪದಡಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಗಳ ಸುಮಾರು ೬೨ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಸಂಬಂಧ ದಶಮಂಟಪ ಸಮಿತಿ ಕಾನೂನು ಹೋರಾಟಕ್ಕೆ ಮುಂದಾಗಿದೆ.

ಐತಿಹಾಸಿಕ ಮಡಿಕೇರಿ ದಸರಾಕ್ಕೆ ವರ್ಣರಂಜಿತವಾಗಿ ತೆರೆ ಬಿದ್ದಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ರಾಜ್ಯದ ನಾನಾ ಭಾಗಗಳಿಂದ ಮಡಿಕೇರಿ ದಸರಾಕ್ಕೆ ಆಗಮಿಸುವ ಪ್ರವಾಸಿಗರು ದಶ ದೇವಾಲಯಗಳಿಂದ ಸಿದ್ಧಪಡಿಸುವ ಮಂಟಪಗಳಲ್ಲಿನ ಪೌರಾಣಿಕ ಕಥಾ ಸಾರಾಂಶ ನೋಡಲು ಮುಗಿಬೀಳುತ್ತಾರೆ. ಅಲ್ಲದೇ ಡಿಜೆ ಸೌಂಡ್‌ಗೆ ಹೆಜ್ಜೆ ಹಾಕಿ ಖುಷಿಪಡುತ್ತಾರೆ. ಆದರೆ ಈ ಬಾರಿ ಮಡಿಕೇರಿ ದಸರಾಕ್ಕೆ ಡಿಜೆ ಬಳಸಬಾರದು ಎಂದು ಪೊಲೀಸ್ ಇಲಾಖೆ ಮೊದಲೇ ಸೂಚಿಸಿತ್ತು. ಅದರಂತೆ ಈ ಬಾರಿ ಡಿಜೆ ಬಳಕೆಯನ್ನು ಕಡಿಮೆ ಮಾಡಲಾಗಿತ್ತು. ಇದರಿಂದ ಯುವ ಸಮೂಹ ನಿರಾಸೆಗೊಂಡಿತು.

ಈ ನಡುವೆ ರಾತ್ರಿ ೧೦ ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕ ಬಳಸಬಾರದೆಂಬ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅ.೨ರಂದುದಶಮಂಟಪ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ :  ಹೊಂಗನೂರು: ಸಮರ್ಪಕ ರಸ್ತೆ, ಕುಡಿಯುವ ನೀರಿಲ್ಲದೆ ಸಾರ್ವಜನಿಕರ ಪರದಾಟ

ಮಡಿಕೇರಿ ನಗರದ ಪೇಟೆ ಶ್ರೀರಾಮಮಂದಿರ, ದೇಚೂರು ಶ್ರೀರಾಮ ಮಂದಿರ, ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋದಂಡ ರಾಮ ದೇವಾಲಯ ಮಂಟಪ ಸಮಿತಿಗಳ ತಲಾ ೬ ಮಂದಿ, ಕರವಲೆ ಭಗವತಿ, ಕೋಟೆ ಮಾರಿಯಮ್ಮ ಮಂಟಪ ಸಮಿತಿಗಳ ತಲಾ ೭ ಮಂದಿ, ಕೋಟೆ ಗಣಪತಿಯ ೮ ಮಂದಿ, ಚೌಡೇಶ್ವರಿ ಹಾಗೂ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ಮಂಟಪ ಸಮಿತಿಯ ತಲಾ ೫ ಮಂದಿ ವಿರುದ್ಧ ಸೆಕ್ಷನ್ ೩೭, ೧೦೯, ಅಡಿ ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಇದೀಗ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಮುಂದಾಗಿದೆ. ಈಗಾಗಲೇವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ಪೊಲೀಸರು ನೀಡಿದ ನೋಟೀಸ್ ಅನ್ನು ಕೂಡ ಸ್ವೀಕರಿಸಿರುವ ಪದಾಧಿಕಾರಿಗಳು ವಕೀಲರ ಸಲಹೆಯಂತೆ ಕಾನೂನು ಹೋರಾಟ ನಡೆಸಲಿದ್ದಾರೆ.

” ೧೦ ಗಂಟೆಯವರೆಗೆ ಪೊಲೀಸ್ ಇಲಾಖೆ ಸಮಯ ನೀಡಿತ್ತು. ಆದರೆ, ಶೋಭಾಯಾತ್ರೆಗೆ ಧ್ವನಿವರ್ಧಕದ ಅವಶ್ಯವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ೨ ಗಂಟೆ ಹೆಚ್ಚಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಅವರು ೭೦ ಡೆಸಿಬಲ್ ಬಳಸುವಂತೆ ಸೂಚನೆ ನೀಡಿದ್ದರು. ಅದನ್ನು ಪಾಲಿಸಲಾಗಿದೆ. ಆದರೂ ಡಿಜೆ ಬಳಸದ ಮಂಟಪಗಳಿಗೂ ನೋಟಿಸ್ ನೀಡಲಾಗಿದೆ. ಈ ಸಂಬಂಧ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಸಜ್ಜಾಗಿದ್ದು, ವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ವಕೀಲರ ಸೂಚನೆಯಿಂದ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.”

-ಹರೀಶ್ ಅಣ್ವೇಕರ್, ದಸರಾ ದಶಮಂಟಪ ಸಮಿತಿ ಅಧ್ಯಕ್ಷರು

” ಶೋಭಾಯಾತ್ರೆ ಸಂದರ್ಭದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಿದ್ದೇವೆ. ಆದರೂ ನೋಟಿಸ್ ನೀಡಲಾಗಿದೆ. ದಶಪಮಂಟಪ ಎಂಬುದು ದೊಡ್ಡ ಸಮಿತಿಯಿದೆ. ಪ್ರತಿ ಬಾರಿ ತಾಳ್ಮೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈಗಲೇ ಸರಿಮಾಡಿದರೆ ಉತ್ತಮ. ಇಲ್ಲದಿದ್ದರೆ ಮುಂಬರುವ ವರ್ಷ ತಕ್ಕ ಉತ್ತರ ನೀಡಬೇಕಾಗುತ್ತದೆ.”

-ಬಿ.ಎಂ.ರಾಜೇಶ್, ದಶಮಂಟಪ ಸಮಿತಿ ಗೌರವ ಅಧ್ಯಕ್ಷ

ಎಸ್.ಎ.ಹುಸೇನ್

ಆಂದೋಲನ ಡೆಸ್ಕ್

Recent Posts

ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪ್ರಕರಣ: ಗಾಯಾಳು ರವಿಗೆ ಮುಂದುವರಿದ ಚಿಕಿತ್ಸೆ

ಪ್ರಶಾಂತ್‌ ಎನ್‌ ಮಲ್ಲಿಕ್‌  ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…

11 hours ago

ಕಾಫಿ ಮಳಿಗೆಯಲ್ಲಿದ್ದ ಹಣ ಕಳವು: ಆರೋಪಿ ಬಂಧನ

ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…

11 hours ago

ಕಾಡಾನೆ ದಾಳಿ: ಅಪಾರ ಪ್ರಮಾಣದ ಬೆಳೆ ನಾಶ

ಮಹಾದೇಶ್‌ ಎಂ ಗೌಡ  ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…

11 hours ago

ಬೆಂಗಳೂರಿನಲ್ಲೇ ಐಪಿಎಲ್ ಉದ್ಘಾಟನಾ ಪಂದ್ಯ

ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…

11 hours ago

ಪೌರಾಯುಕ್ತೆಗೆ ಧಮ್ಕಿ ಹಾಕಿದ್ದ ಪ್ರಕರಣ: ರಾಜೀವ್‌ ಗೌಡಗೆ ಹೈಕೋರ್ಟ್‌ ತರಾಟೆ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್‌ ತೀವ್ರ…

11 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆ ಊಟ ಆದೇಶಕ್ಕೆ ತಡೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…

12 hours ago