Andolana originals

ಕಾನೂನು ಹೋರಾಟಕ್ಕೆ ಮುಂದಾದ ದಶಮಂಟಪ ಸಮಿತಿ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವ ಆರೋಪದಡಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಗಳ ಸುಮಾರು ೬೨ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಸಂಬಂಧ ದಶಮಂಟಪ ಸಮಿತಿ ಕಾನೂನು ಹೋರಾಟಕ್ಕೆ ಮುಂದಾಗಿದೆ.

ಐತಿಹಾಸಿಕ ಮಡಿಕೇರಿ ದಸರಾಕ್ಕೆ ವರ್ಣರಂಜಿತವಾಗಿ ತೆರೆ ಬಿದ್ದಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ರಾಜ್ಯದ ನಾನಾ ಭಾಗಗಳಿಂದ ಮಡಿಕೇರಿ ದಸರಾಕ್ಕೆ ಆಗಮಿಸುವ ಪ್ರವಾಸಿಗರು ದಶ ದೇವಾಲಯಗಳಿಂದ ಸಿದ್ಧಪಡಿಸುವ ಮಂಟಪಗಳಲ್ಲಿನ ಪೌರಾಣಿಕ ಕಥಾ ಸಾರಾಂಶ ನೋಡಲು ಮುಗಿಬೀಳುತ್ತಾರೆ. ಅಲ್ಲದೇ ಡಿಜೆ ಸೌಂಡ್‌ಗೆ ಹೆಜ್ಜೆ ಹಾಕಿ ಖುಷಿಪಡುತ್ತಾರೆ. ಆದರೆ ಈ ಬಾರಿ ಮಡಿಕೇರಿ ದಸರಾಕ್ಕೆ ಡಿಜೆ ಬಳಸಬಾರದು ಎಂದು ಪೊಲೀಸ್ ಇಲಾಖೆ ಮೊದಲೇ ಸೂಚಿಸಿತ್ತು. ಅದರಂತೆ ಈ ಬಾರಿ ಡಿಜೆ ಬಳಕೆಯನ್ನು ಕಡಿಮೆ ಮಾಡಲಾಗಿತ್ತು. ಇದರಿಂದ ಯುವ ಸಮೂಹ ನಿರಾಸೆಗೊಂಡಿತು.

ಈ ನಡುವೆ ರಾತ್ರಿ ೧೦ ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕ ಬಳಸಬಾರದೆಂಬ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅ.೨ರಂದುದಶಮಂಟಪ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ :  ಹೊಂಗನೂರು: ಸಮರ್ಪಕ ರಸ್ತೆ, ಕುಡಿಯುವ ನೀರಿಲ್ಲದೆ ಸಾರ್ವಜನಿಕರ ಪರದಾಟ

ಮಡಿಕೇರಿ ನಗರದ ಪೇಟೆ ಶ್ರೀರಾಮಮಂದಿರ, ದೇಚೂರು ಶ್ರೀರಾಮ ಮಂದಿರ, ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋದಂಡ ರಾಮ ದೇವಾಲಯ ಮಂಟಪ ಸಮಿತಿಗಳ ತಲಾ ೬ ಮಂದಿ, ಕರವಲೆ ಭಗವತಿ, ಕೋಟೆ ಮಾರಿಯಮ್ಮ ಮಂಟಪ ಸಮಿತಿಗಳ ತಲಾ ೭ ಮಂದಿ, ಕೋಟೆ ಗಣಪತಿಯ ೮ ಮಂದಿ, ಚೌಡೇಶ್ವರಿ ಹಾಗೂ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ಮಂಟಪ ಸಮಿತಿಯ ತಲಾ ೫ ಮಂದಿ ವಿರುದ್ಧ ಸೆಕ್ಷನ್ ೩೭, ೧೦೯, ಅಡಿ ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಇದೀಗ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಮುಂದಾಗಿದೆ. ಈಗಾಗಲೇವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ಪೊಲೀಸರು ನೀಡಿದ ನೋಟೀಸ್ ಅನ್ನು ಕೂಡ ಸ್ವೀಕರಿಸಿರುವ ಪದಾಧಿಕಾರಿಗಳು ವಕೀಲರ ಸಲಹೆಯಂತೆ ಕಾನೂನು ಹೋರಾಟ ನಡೆಸಲಿದ್ದಾರೆ.

” ೧೦ ಗಂಟೆಯವರೆಗೆ ಪೊಲೀಸ್ ಇಲಾಖೆ ಸಮಯ ನೀಡಿತ್ತು. ಆದರೆ, ಶೋಭಾಯಾತ್ರೆಗೆ ಧ್ವನಿವರ್ಧಕದ ಅವಶ್ಯವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ೨ ಗಂಟೆ ಹೆಚ್ಚಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಅವರು ೭೦ ಡೆಸಿಬಲ್ ಬಳಸುವಂತೆ ಸೂಚನೆ ನೀಡಿದ್ದರು. ಅದನ್ನು ಪಾಲಿಸಲಾಗಿದೆ. ಆದರೂ ಡಿಜೆ ಬಳಸದ ಮಂಟಪಗಳಿಗೂ ನೋಟಿಸ್ ನೀಡಲಾಗಿದೆ. ಈ ಸಂಬಂಧ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಸಜ್ಜಾಗಿದ್ದು, ವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ವಕೀಲರ ಸೂಚನೆಯಿಂದ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.”

-ಹರೀಶ್ ಅಣ್ವೇಕರ್, ದಸರಾ ದಶಮಂಟಪ ಸಮಿತಿ ಅಧ್ಯಕ್ಷರು

” ಶೋಭಾಯಾತ್ರೆ ಸಂದರ್ಭದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಿದ್ದೇವೆ. ಆದರೂ ನೋಟಿಸ್ ನೀಡಲಾಗಿದೆ. ದಶಪಮಂಟಪ ಎಂಬುದು ದೊಡ್ಡ ಸಮಿತಿಯಿದೆ. ಪ್ರತಿ ಬಾರಿ ತಾಳ್ಮೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈಗಲೇ ಸರಿಮಾಡಿದರೆ ಉತ್ತಮ. ಇಲ್ಲದಿದ್ದರೆ ಮುಂಬರುವ ವರ್ಷ ತಕ್ಕ ಉತ್ತರ ನೀಡಬೇಕಾಗುತ್ತದೆ.”

-ಬಿ.ಎಂ.ರಾಜೇಶ್, ದಶಮಂಟಪ ಸಮಿತಿ ಗೌರವ ಅಧ್ಯಕ್ಷ

ಎಸ್.ಎ.ಹುಸೇನ್

ಆಂದೋಲನ ಡೆಸ್ಕ್

Recent Posts

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

34 mins ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

2 hours ago

ಮ.ಬೆಟ್ಟ | ಯುಗಾದಿ ಜಾತ್ರೆಗೆ ಪಾದಯಾತ್ರೆಯಲ್ಲಿ ಬರುತ್ತಿರುವ ಭಕ್ತರು

ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಯುಗಾದಿ ಜಾತ್ರಾ ಮಹೋತ್ಸವಕ್ಕೆ…

2 hours ago

ಮೈಸೂರು | ಕೆಂಪೇಗೌಡ ವೃತ್ತ ಕಾಮಗಾರಿ ಪರಿಶೀಲಿಸಿದ ಸಂಸದ ಯದುವೀರ್‌

ಮೈಸೂರು : ನಗರದ ಹೊರವಲಯದ ಕೆಂಪೇಗೌಡ ವೃತ್ತ(ಮಣಿಪಾಲ್ ಜಂಕ್ಷನ್)ದಲ್ಲಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ದಿ ಪ್ರಾಧಿಕಾರದಿಂದ ನಡೆಯುತ್ತಿರುವ ಕಾಮಗಾರಿಗಳನ್ನು ಸಂಸದ ಯದುವೀರ್…

2 hours ago

ಚಿಕ್ಕಮಗಳೂರು: ಮುತ್ತೋಡಿ ಅರಣ್ಯದಲ್ಲಿ ಭಾರೀ ಕಾಡ್ಗಿಚ್ಚು

ಚಿಕ್ಕಮಗಳೂರು: ತಾಲ್ಲೂಕಿನ ಮುತ್ತೋಡಿ ಅರಣ್ಯ ವಲಯದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದೆ. ಪರಿಣಾಮ ಅಪರೂಪದ ಅರಣ್ಯ…

4 hours ago

ಯುಗಾದಿ ಹಾಗೂ ರಂಜಾನ್‌ ಹಬ್ಬಕ್ಕೆ 2000 ಹೆಚ್ಚುವರಿ ಬಸ್‌ ವ್ಯವಸ್ಥೆ: ಕೆಎಸ್‌ಆರ್‌ಟಿಸಿ ಪ್ರಕಟಣೆ

ಬೆಂಗಳೂರು: ಯುಗಾದಿ ಹಾಗೂ ರಂಜಾನ್‌ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ 2000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ…

4 hours ago