Andolana originals

ಕಾನೂನು ಹೋರಾಟಕ್ಕೆ ಮುಂದಾದ ದಶಮಂಟಪ ಸಮಿತಿ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವ ಆರೋಪದಡಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಗಳ ಸುಮಾರು ೬೨ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಸಂಬಂಧ ದಶಮಂಟಪ ಸಮಿತಿ ಕಾನೂನು ಹೋರಾಟಕ್ಕೆ ಮುಂದಾಗಿದೆ.

ಐತಿಹಾಸಿಕ ಮಡಿಕೇರಿ ದಸರಾಕ್ಕೆ ವರ್ಣರಂಜಿತವಾಗಿ ತೆರೆ ಬಿದ್ದಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ರಾಜ್ಯದ ನಾನಾ ಭಾಗಗಳಿಂದ ಮಡಿಕೇರಿ ದಸರಾಕ್ಕೆ ಆಗಮಿಸುವ ಪ್ರವಾಸಿಗರು ದಶ ದೇವಾಲಯಗಳಿಂದ ಸಿದ್ಧಪಡಿಸುವ ಮಂಟಪಗಳಲ್ಲಿನ ಪೌರಾಣಿಕ ಕಥಾ ಸಾರಾಂಶ ನೋಡಲು ಮುಗಿಬೀಳುತ್ತಾರೆ. ಅಲ್ಲದೇ ಡಿಜೆ ಸೌಂಡ್‌ಗೆ ಹೆಜ್ಜೆ ಹಾಕಿ ಖುಷಿಪಡುತ್ತಾರೆ. ಆದರೆ ಈ ಬಾರಿ ಮಡಿಕೇರಿ ದಸರಾಕ್ಕೆ ಡಿಜೆ ಬಳಸಬಾರದು ಎಂದು ಪೊಲೀಸ್ ಇಲಾಖೆ ಮೊದಲೇ ಸೂಚಿಸಿತ್ತು. ಅದರಂತೆ ಈ ಬಾರಿ ಡಿಜೆ ಬಳಕೆಯನ್ನು ಕಡಿಮೆ ಮಾಡಲಾಗಿತ್ತು. ಇದರಿಂದ ಯುವ ಸಮೂಹ ನಿರಾಸೆಗೊಂಡಿತು.

ಈ ನಡುವೆ ರಾತ್ರಿ ೧೦ ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕ ಬಳಸಬಾರದೆಂಬ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅ.೨ರಂದುದಶಮಂಟಪ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ :  ಹೊಂಗನೂರು: ಸಮರ್ಪಕ ರಸ್ತೆ, ಕುಡಿಯುವ ನೀರಿಲ್ಲದೆ ಸಾರ್ವಜನಿಕರ ಪರದಾಟ

ಮಡಿಕೇರಿ ನಗರದ ಪೇಟೆ ಶ್ರೀರಾಮಮಂದಿರ, ದೇಚೂರು ಶ್ರೀರಾಮ ಮಂದಿರ, ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋದಂಡ ರಾಮ ದೇವಾಲಯ ಮಂಟಪ ಸಮಿತಿಗಳ ತಲಾ ೬ ಮಂದಿ, ಕರವಲೆ ಭಗವತಿ, ಕೋಟೆ ಮಾರಿಯಮ್ಮ ಮಂಟಪ ಸಮಿತಿಗಳ ತಲಾ ೭ ಮಂದಿ, ಕೋಟೆ ಗಣಪತಿಯ ೮ ಮಂದಿ, ಚೌಡೇಶ್ವರಿ ಹಾಗೂ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ಮಂಟಪ ಸಮಿತಿಯ ತಲಾ ೫ ಮಂದಿ ವಿರುದ್ಧ ಸೆಕ್ಷನ್ ೩೭, ೧೦೯, ಅಡಿ ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಇದೀಗ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಮುಂದಾಗಿದೆ. ಈಗಾಗಲೇವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ಪೊಲೀಸರು ನೀಡಿದ ನೋಟೀಸ್ ಅನ್ನು ಕೂಡ ಸ್ವೀಕರಿಸಿರುವ ಪದಾಧಿಕಾರಿಗಳು ವಕೀಲರ ಸಲಹೆಯಂತೆ ಕಾನೂನು ಹೋರಾಟ ನಡೆಸಲಿದ್ದಾರೆ.

” ೧೦ ಗಂಟೆಯವರೆಗೆ ಪೊಲೀಸ್ ಇಲಾಖೆ ಸಮಯ ನೀಡಿತ್ತು. ಆದರೆ, ಶೋಭಾಯಾತ್ರೆಗೆ ಧ್ವನಿವರ್ಧಕದ ಅವಶ್ಯವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ೨ ಗಂಟೆ ಹೆಚ್ಚಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಅವರು ೭೦ ಡೆಸಿಬಲ್ ಬಳಸುವಂತೆ ಸೂಚನೆ ನೀಡಿದ್ದರು. ಅದನ್ನು ಪಾಲಿಸಲಾಗಿದೆ. ಆದರೂ ಡಿಜೆ ಬಳಸದ ಮಂಟಪಗಳಿಗೂ ನೋಟಿಸ್ ನೀಡಲಾಗಿದೆ. ಈ ಸಂಬಂಧ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಸಜ್ಜಾಗಿದ್ದು, ವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ವಕೀಲರ ಸೂಚನೆಯಿಂದ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.”

-ಹರೀಶ್ ಅಣ್ವೇಕರ್, ದಸರಾ ದಶಮಂಟಪ ಸಮಿತಿ ಅಧ್ಯಕ್ಷರು

” ಶೋಭಾಯಾತ್ರೆ ಸಂದರ್ಭದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಿದ್ದೇವೆ. ಆದರೂ ನೋಟಿಸ್ ನೀಡಲಾಗಿದೆ. ದಶಪಮಂಟಪ ಎಂಬುದು ದೊಡ್ಡ ಸಮಿತಿಯಿದೆ. ಪ್ರತಿ ಬಾರಿ ತಾಳ್ಮೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈಗಲೇ ಸರಿಮಾಡಿದರೆ ಉತ್ತಮ. ಇಲ್ಲದಿದ್ದರೆ ಮುಂಬರುವ ವರ್ಷ ತಕ್ಕ ಉತ್ತರ ನೀಡಬೇಕಾಗುತ್ತದೆ.”

-ಬಿ.ಎಂ.ರಾಜೇಶ್, ದಶಮಂಟಪ ಸಮಿತಿ ಗೌರವ ಅಧ್ಯಕ್ಷ

ಎಸ್.ಎ.ಹುಸೇನ್

ಆಂದೋಲನ ಡೆಸ್ಕ್

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

6 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

9 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

9 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

10 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

12 hours ago