Andolana originals

ಕಾನೂನು ಹೋರಾಟಕ್ಕೆ ಮುಂದಾದ ದಶಮಂಟಪ ಸಮಿತಿ

ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದ ದಶಮಂಟಪಗಳ ಶೋಭಾಯಾತ್ರೆ ವೇಳೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಧ್ವನಿವರ್ಧಕ ಬಳಸಿರುವ ಆರೋಪದಡಿ ಪೊಲೀಸರೇ ಸ್ವಯಂ ಪ್ರೇರಿತವಾಗಿ ಸಮಿತಿಗಳ ಸುಮಾರು ೬೨ ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಸಂಬಂಧ ದಶಮಂಟಪ ಸಮಿತಿ ಕಾನೂನು ಹೋರಾಟಕ್ಕೆ ಮುಂದಾಗಿದೆ.

ಐತಿಹಾಸಿಕ ಮಡಿಕೇರಿ ದಸರಾಕ್ಕೆ ವರ್ಣರಂಜಿತವಾಗಿ ತೆರೆ ಬಿದ್ದಿದೆ. ಪ್ರತಿ ವರ್ಷ ದಸರಾ ಸಂದರ್ಭದಲ್ಲಿ ರಾಜ್ಯದ ನಾನಾ ಭಾಗಗಳಿಂದ ಮಡಿಕೇರಿ ದಸರಾಕ್ಕೆ ಆಗಮಿಸುವ ಪ್ರವಾಸಿಗರು ದಶ ದೇವಾಲಯಗಳಿಂದ ಸಿದ್ಧಪಡಿಸುವ ಮಂಟಪಗಳಲ್ಲಿನ ಪೌರಾಣಿಕ ಕಥಾ ಸಾರಾಂಶ ನೋಡಲು ಮುಗಿಬೀಳುತ್ತಾರೆ. ಅಲ್ಲದೇ ಡಿಜೆ ಸೌಂಡ್‌ಗೆ ಹೆಜ್ಜೆ ಹಾಕಿ ಖುಷಿಪಡುತ್ತಾರೆ. ಆದರೆ ಈ ಬಾರಿ ಮಡಿಕೇರಿ ದಸರಾಕ್ಕೆ ಡಿಜೆ ಬಳಸಬಾರದು ಎಂದು ಪೊಲೀಸ್ ಇಲಾಖೆ ಮೊದಲೇ ಸೂಚಿಸಿತ್ತು. ಅದರಂತೆ ಈ ಬಾರಿ ಡಿಜೆ ಬಳಕೆಯನ್ನು ಕಡಿಮೆ ಮಾಡಲಾಗಿತ್ತು. ಇದರಿಂದ ಯುವ ಸಮೂಹ ನಿರಾಸೆಗೊಂಡಿತು.

ಈ ನಡುವೆ ರಾತ್ರಿ ೧೦ ಗಂಟೆ ನಂತರ ಸಾರ್ವಜನಿಕ ಸ್ಥಳದಲ್ಲಿ ಹೆಚ್ಚಿನ ಪ್ರಮಾಣದ ಧ್ವನಿವರ್ಧಕ ಬಳಸಬಾರದೆಂಬ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಅ.೨ರಂದುದಶಮಂಟಪ ಶೋಭಾಯಾತ್ರೆ ವೇಳೆ ಧ್ವನಿವರ್ಧಕ ಬಳಸಲಾಗಿದೆ ಎಂದು ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನು ಓದಿ :  ಹೊಂಗನೂರು: ಸಮರ್ಪಕ ರಸ್ತೆ, ಕುಡಿಯುವ ನೀರಿಲ್ಲದೆ ಸಾರ್ವಜನಿಕರ ಪರದಾಟ

ಮಡಿಕೇರಿ ನಗರದ ಪೇಟೆ ಶ್ರೀರಾಮಮಂದಿರ, ದೇಚೂರು ಶ್ರೀರಾಮ ಮಂದಿರ, ದಂಡಿನ ಮಾರಿಯಮ್ಮ, ಕಂಚಿ ಕಾಮಾಕ್ಷಿ, ಕೋದಂಡ ರಾಮ ದೇವಾಲಯ ಮಂಟಪ ಸಮಿತಿಗಳ ತಲಾ ೬ ಮಂದಿ, ಕರವಲೆ ಭಗವತಿ, ಕೋಟೆ ಮಾರಿಯಮ್ಮ ಮಂಟಪ ಸಮಿತಿಗಳ ತಲಾ ೭ ಮಂದಿ, ಕೋಟೆ ಗಣಪತಿಯ ೮ ಮಂದಿ, ಚೌಡೇಶ್ವರಿ ಹಾಗೂ ಕುಂದುರುಮೊಟ್ಟೆ ಚೌಟಿ ಮಾರಿಯಮ್ಮ ದೇವಾಲಯ ಮಂಟಪ ಸಮಿತಿಯ ತಲಾ ೫ ಮಂದಿ ವಿರುದ್ಧ ಸೆಕ್ಷನ್ ೩೭, ೧೦೯, ಅಡಿ ಪ್ರಕರಣಗಳು ದಾಖಲಾಗಿವೆ.

ಈ ಸಂಬಂಧ ಇದೀಗ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಮುಂದಾಗಿದೆ. ಈಗಾಗಲೇವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ಪೊಲೀಸರು ನೀಡಿದ ನೋಟೀಸ್ ಅನ್ನು ಕೂಡ ಸ್ವೀಕರಿಸಿರುವ ಪದಾಧಿಕಾರಿಗಳು ವಕೀಲರ ಸಲಹೆಯಂತೆ ಕಾನೂನು ಹೋರಾಟ ನಡೆಸಲಿದ್ದಾರೆ.

” ೧೦ ಗಂಟೆಯವರೆಗೆ ಪೊಲೀಸ್ ಇಲಾಖೆ ಸಮಯ ನೀಡಿತ್ತು. ಆದರೆ, ಶೋಭಾಯಾತ್ರೆಗೆ ಧ್ವನಿವರ್ಧಕದ ಅವಶ್ಯವಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ೨ ಗಂಟೆ ಹೆಚ್ಚಿಗೆ ನೀಡುವಂತೆ ಮನವಿ ಮಾಡಲಾಗಿತ್ತು. ಅವರು ೭೦ ಡೆಸಿಬಲ್ ಬಳಸುವಂತೆ ಸೂಚನೆ ನೀಡಿದ್ದರು. ಅದನ್ನು ಪಾಲಿಸಲಾಗಿದೆ. ಆದರೂ ಡಿಜೆ ಬಳಸದ ಮಂಟಪಗಳಿಗೂ ನೋಟಿಸ್ ನೀಡಲಾಗಿದೆ. ಈ ಸಂಬಂಧ ಕಾನೂನು ಹೋರಾಟಕ್ಕೆ ದಶಮಂಟಪ ಸಮಿತಿ ಸಜ್ಜಾಗಿದ್ದು, ವಕೀಲರಾದ ಮೋಹನ್, ಸಹಾಯಕರಾಗಿ ರಂಜಿತ್ ಅವರನ್ನು ನೇಮಕ ಮಾಡಲಾಗಿದೆ. ವಕೀಲರ ಸೂಚನೆಯಿಂದ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು.”

-ಹರೀಶ್ ಅಣ್ವೇಕರ್, ದಸರಾ ದಶಮಂಟಪ ಸಮಿತಿ ಅಧ್ಯಕ್ಷರು

” ಶೋಭಾಯಾತ್ರೆ ಸಂದರ್ಭದಲ್ಲಿ ಸರ್ಕಾರದ ಆದೇಶವನ್ನು ಪಾಲನೆ ಮಾಡಿದ್ದೇವೆ. ಆದರೂ ನೋಟಿಸ್ ನೀಡಲಾಗಿದೆ. ದಶಪಮಂಟಪ ಎಂಬುದು ದೊಡ್ಡ ಸಮಿತಿಯಿದೆ. ಪ್ರತಿ ಬಾರಿ ತಾಳ್ಮೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಈಗಲೇ ಸರಿಮಾಡಿದರೆ ಉತ್ತಮ. ಇಲ್ಲದಿದ್ದರೆ ಮುಂಬರುವ ವರ್ಷ ತಕ್ಕ ಉತ್ತರ ನೀಡಬೇಕಾಗುತ್ತದೆ.”

-ಬಿ.ಎಂ.ರಾಜೇಶ್, ದಶಮಂಟಪ ಸಮಿತಿ ಗೌರವ ಅಧ್ಯಕ್ಷ

ಎಸ್.ಎ.ಹುಸೇನ್

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

6 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

7 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

7 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

7 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

7 hours ago