Andolana originals

ಡಿಸೆಂಬರ್‌ನಲ್ಲಿ ಮ. ಬೆಟ್ಟಕ್ಕೆ ಸಿಎಂ ಭೇಟಿ; ಮುಕ್ತಾಯ ಹಂತದಲ್ಲಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಡಿಸಿ ಸೂಚನೆ

ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಡಿಸೆಂಬರ್ ತಿಂಗಳಲ್ಲಿ ಮುಖ್ಯಮಂತ್ರಿಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ಮುಕ್ತಾಯದ ಹಂತದಲ್ಲಿರುವ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಿ. ಟಿ. ಶಿಲ್ಪಾ ನಾಗ್ ತಿಳಿಸಿದರು.

ಮ. ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಮ. ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿದ್ದು, ಕ್ಷೇತ್ರದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ಧಪಡಿಸಬೇಕು, ಯಾವುದೇ ಕಾಮಗಾರಿಗಳು ಬಾಕಿ ಇರದಂತೆ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಯಾವುದಾದರೂ ಲೋಪದೋಷಗಳು ಕಂಡು ಬಂದರೆ ಸಂಬಂಧಪಟ್ಟ ಗುತ್ತಿಗೆದಾರ ಹಾಗೂ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಾಸಕ ಎಂ. ಆರ್. ಮಂಜುನಾಥ್ ಮಾತನಾಡಿ, ಮ. ಬೆಟ್ಟಕ್ಕೆ ಬರುವಂತಹ ಭಕ್ತಾದಿಗಳಿಗೆ ತಿರುಪತಿ ಮಾದರಿಯಲ್ಲಿ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಲು ಚಿಂತನೆ ನಡೆಸಲಾಗುತ್ತಿದೆ. ಕ್ಷೇತ್ರಕ್ಕೆ ಬಡ ಭಕ್ತಾದಿಗಳು ಆಗಮಿಸಿ ಸೇವೆ ಸಲ್ಲಿಸಿ ಹರಕೆ ಕಾಣಿಕೆ ಸಲ್ಲಿಸುತ್ತಿದ್ದಾರೆ. ಅವರ ಹರಕೆ ಹಣವನ್ನು ಯಾವುದೇ ಕಾರಣಕ್ಕೂ ಪೋಲು ಮಾಡದೆ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಽಕಾರದ ವತಿಯಿಂದ ನಡೆಯುತ್ತಿರುವ ಕಾಮಗಾರಿ ವೇಳೆ ಸಂಬಂಧ ಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಕಟ್ಟಡದ ವಿನ್ಯಾಸ ಅನುಮೋದನೆಯಂತೆ ನಡೆಯುತ್ತಿದೆಯೇ ಎಂಬುದರ ಬಗ್ಗೆ ಗಮನ ವಹಿಸಬೇಕು ಎಂದು ತಿಳಿಸಿದರು. ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೆಚ್ಚಿನ ಪ್ರವಾಸಿ ತಾಣಗಳು ಇದ್ದು, ಅವುಗಳನ್ನು ಅಭಿವೃದ್ಧಿಪಡಿಸಿ ಪ್ರವಾಸಿಗರನ್ನು ಆಕರ್ಷಣೆ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ವಹಿಸಬೇಕು ಎಂದರು.

ಪ್ರಾಧಿಕಾರದ ಕಾರ್ಯದರ್ಶಿ ಎ. ಇ. ರಘು ಮಾತನಾಡಿ, ಮ. ಬೆಟ್ಟದಲ್ಲಿ ನಿರ್ಮಾಣ ಮಾಡಿರುವ ೩೮೬ ಕೊಠಡಿಗಳ ಕಟ್ಟಡ ಕಾಮಗಾರಿ ಪೂರ್ಣವಾಗುವ ಹಂತದಲ್ಲಿದೆ. ಪ್ರತಿಯೊಂದು ಕಾಮಗಾರಿಗಳನ್ನೂ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ದೀಪಾವಳಿ ಜಾತ್ರಾ ಮಹೋತ್ಸವ ಮುಗಿದ ಕೂಡಲೇ ಕಾಮಗಾರಿಗಳನ್ನು ಪೂರ್ಣಗೊಳಿಸಿ ಉದ್ಘಾಟನೆಗೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು. ಮ್ಯೂಸಿಯಂ : ಮ. ಬೆಟ್ಟದ ದೀಪದಗಿರಿ ಒಡ್ಡುವಿನ ೧೦೮ ಅಡಿ ಎತ್ತರದ ಮಲೆ ಮಹದೇಶ್ವರ ಪ್ರತಿಮೆಯ ತಳಭಾಗದಲ್ಲಿ ಮಲೆ ಮಹದೇಶ್ವರ ಬಾಲ್ಯದಿಂದ ಐಕ್ಯವಾಗುವವರೆಗೂ ಮಾಡಿರುವ ಪವಾಡಗಳನ್ನು, ಶಿವಲೀಲೆಗಳನ್ನು ನಿರ್ಮಾಣ ಮಾಡಲಾಗಿದೆ. ಮ್ಯೂಸಿಯಂನಲ್ಲಿ ಮಲೆ ಮಹದೇಶ್ವರರ ಬಾಲ್ಯ, ಕಾರಯ್ಯ ಬಿಲ್ಲಯ್ಯರವರ ಜೊತೆಗಿನ ಸಂಬಂಧ, ಸಂಕಮ್ಮರವರ ಮನಃಪರಿವರ್ತನೆ, ಕುಂತೂರು ಮಠದ ಒಡನಾಟದ ಇತಿಹಾಸ, ೭೭ ಮಲೆಗಳ ಪ್ರವಾಸ, ನಾಗಮಲೆಯಲ್ಲಿ ಪವಾಡ ಸೃಷ್ಟಿ, ಹಬ್ಬ ಹರಿದಿನ ವಿಶೇಷ ದಿನಗಳ ಸಂಪೂರ್ಣ ಮಾಹಿತಿ ಇರಲಿದೆ ಎಂದರು.

ಮ. ಬೆಟ್ಟದಲ್ಲಿ ಪ್ರತಿ ತಿಂಗಳು ಬಳಕೆ ಮಾಡುವ ವಿದ್ಯುತ್ ಗೆ ಸುಮಾರು ೨೫ ಲಕ್ಷ ರೂ. ಪಾವತಿ ಮಾಡಲಾಗುತ್ತಿದೆ. ಈ ನಿಟ್ಟಿನಲ್ಲಿ ಒಂದು ಮೆಗಾ ವ್ಯಾಟ್ ಸೋಲಾರ್ ಪವರ್ ಸ್ಟೇಷನ್ ಉದ್ಘಾಟನೆಗೆ ಸಿದ್ಧವಾಗಿದ್ದು ಇದರಿಂದ ಮಾಸಿಕ ೧೨ ಲಕ್ಷ ರೂ. ಉಳಿತಾಯವಾಗಲಿದೆ. ಇದಲ್ಲದೆ ಜಾತ್ರಾ ಮಹೋತ್ಸವ, ಹಬ್ಬ ಹರಿದಿನ ವಿಶೇಷ ದಿನಗಳಲ್ಲಿ ವಿದ್ಯುತ್ ಕೊರತೆ ನೀಗಲಿದೆ ಎಂದರು. ಮ. ಬೆಟ್ಟದಲ್ಲಿರುವ ದೊಡ್ಡಕೆರೆ ಮೈದಾನ ಕಾಮಗಾರಿ ಪ್ರಗತಿಯಲ್ಲಿದ್ದರಿಂದ ಕಳೆದ ೨ ವರ್ಷಗಳಿಂದ ತೆಪ್ಪೋತ್ಸವ ಸ್ಥಗಿತಗೊಂಡಿತ್ತು. ಇದೀಗ ದೊಡ್ಡ ಕೆರೆ ಕಲ್ಯಾಣಿ ಕಾಮಗಾರಿ ಪೂರ್ಣಗೊಂಡಿದ್ದು ಉದ್ಘಾಟನೆಯಾಗಲಿದೆ ಎಂದರು. ಸಭೆಗೂ ಮುನ್ನ ಕಾಮಗಾರಿ ನಡೆಯುತ್ತಿರುವ ಸ್ಥಳಗಳಿಗೆ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಾಲೂರು ಬೃಹನ್ಮಠದ ಪೀಠಾಧಿಪತಿಗಳಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಸಿಇಒ ಮೋನಾ ರೋತ್ ಎಸ್‌ಪಿ ಡಾ. ಬಿ. ಟಿ. ಕವಿತಾ, ಡಿಸಿಎಫ್ ಡಾ. ಸಂತೋಷ್ ಕುಮಾರ್, ತಹಸಿಲ್ದಾರ್ ವೈ. ಕೆ. ಗುರುಪ್ರಸಾದ್, ಎಇಇ ಚಿನ್ನಣ್ಣ ಮಹೇಶ್, ಮ. ಬೆಟ್ಟ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಜಗದೀಶ್, ಪಿಡಿಒ ಕಿರಣ್ ಅರಣ್ಯ ಇಲಾಖೆಯ ಸಿಬ್ಬಂದಿ, ಪ್ರಾಧಿಕಾರದ ಸಿಬ್ಬಂದಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಕ್ಯಾಬಿನೆಟ್‌ ಸಭೆಗೆ ನಿರ್ಧಾರ: ಮ. ಬೆಟ್ಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸೆಂಬರ್ ತಿಂಗಳ ಮೊದಲನೇ ವಾರದಲ್ಲಿ ಆಗಮಿಸಲಿದ್ದು, ದೀಪದ ಗಿರಿ ಒಡ್ಡುವಿನ ಮ್ಯೂಸಿಯಂ, ದೊಡ್ಡಕೆರೆ ಮೈದಾನ, ೩೮೬ ಕೊಠಡಿಗಳ ವಸತಿಗೃಹ, ವೇದ ಆಗಮ ಸಂಸ್ಕ ತ ಪಾಠಶಾಲೆ ಸೇರಿದಂತೆ ವಿವಿಧ ಕಟ್ಟಡಗಳನ್ನು ಉದ್ಘಾಟನೆ ಮಾಡಲಿದ್ದಾರೆ. ಈ ಬಾರಿ ಮ. ಬೆಟ್ಟದಲ್ಲಿಯೇ ಕ್ಯಾಬಿನೆಟ್ ಸಭೆ ಮಾಡಲು ನಿರ್ಧರಿಸಲಾಗಿರುವುದರಿಂದ ಸರ್ಕಾರದ ಕಾರ್ಯದರ್ಶಿಗಳು, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು ಆಗಮಿಸುವ ನಿರೀಕ್ಷೆ ಇದೆ. ಅದಕ್ಕಾಗಿ ಈಗಾಗಲೇ ಅಗತ್ಯ ಸೌಲಭ್ಯಗಳನ್ನು ಮಾಡಿಕೊಳ್ಳಲಾಗುತ್ತಿದೆ. – ಸಿ. ಟಿ. ಶಿಲ್ಪಾ ನಾಗ್, ಜಿಲ್ಲಾಧಿಕಾರಿ

andolana

Recent Posts

ಉಪಸಭಾಪತಿಗೆ ಚಿತ್ರಹಿಂಸೆ ಆರೋಪ : ಐಪಿಎಸ್‌ ಅಧಿಕಾರಿ ಬಂಧನ

ಅಮರಾವತಿ : ಹಿಂದಿನ ವೈಎಸ್‍ಆರ್‍ಸಿಪಿ ಆಡಳಿತದ ಅವಧಿಯಲ್ಲಿ ಆಂಧ್ರ ವಿಧಾನಸಭೆಯ ಪ್ರಸ್ತುತ ಉಪಸಭಾಪತಿ ಕೆ. ರಘುರಾಮ ಕೃಷ್ಣ ರಾಜು ಅವರ…

6 hours ago

ಮಾರ್ಚ್‌ 11ರಿಂದ ವೈದ್ಯಾಧಿಕಾರಿಗಳ ಮುಷ್ಕರ : ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್ 11ರಿಂದ…

6 hours ago

ಟ್ರಂಪ್‌ ಜಾಗತಿಕ ಸುಂಕ ರದ್ದು : ವರದಿ

ವಾಷಿಂಗ್ಟನ್ : ಕಾನೂನುಬಾಹಿರವಾಗಿ ಟ್ರಂಪ್ ವಿಧಿಸಿದ್ದ ಆಮದು ಸುಂಕ ಸಂಗ್ರಹವನ್ನ ಅಮೆರಿಕ ನಿಲ್ಲಿಸಲಿದೆ ಎಂದು ಯುಎಸ್ ಕಸ್ಟಮ್ಸ್ ಮತ್ತು ಗಡಿ…

7 hours ago

ಸಫಾರಿ ಆದಾಯದ ಶೇ.35 ಭಾಗ ಕಾಡಿನಂಚಿನ ಜನಕಲ್ಯಾಣಕ್ಕೆ ಬಳಕೆ : ಖಂಡ್ರೆ

ಬೆಂಗಳೂರು : ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಗ್ರಾಮಗಳಲ್ಲಿ…

7 hours ago

ವನ್ಯಜೀವಿ ಸಂಚಾರ | ಕಾಡಂಚಿನ ಗ್ರಾಮದ ಮುಖಂಡರಿಗೆ ಮಾಹಿತಿ ರವಾನಿಸಲು ಖಂಡ್ರೆ ಸೂಚನೆ

ಬೆಂಗಳೂರು : ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ…

8 hours ago

ಮನರೇಗಾ ನಾಶ | ಜನರ ಅನ್ನ ಕಿತ್ತುಕೊಳ್ಳುತ್ತಿರುವ ಕೇಂದ್ರ ; ಸಿಎಂ ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ : ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್…

8 hours ago