Andolana originals

ಭಯಬಿಟ್ಟು ಗ್ರಾಮಕ್ಕೆ ಬನ್ನಿ: ಡಿಸಿ ಶಿಲ್ಪಾ ನಾಗ್ ಮನವಿ

ಚಾಮರಾಜನಗರ: ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದಲೇ ತಿಳಿದುಕೊಳ್ಳಲು ಅರ್ಧ ದಿನವಿಡೀ ಓಡಾಡಿದ ಜಿಲ್ಲಾಮಟ್ಟದ ಅಧಿಕಾರಿಗಳು ಕೊನೆಗೂ ಗ್ರಾಮಸ್ಥರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು.

‘ಮತಗಟ್ಟೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳನ್ನು ಮಾತ್ರ ವಶಕ್ಕೆ ಪಡೆದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿರುವ 6 ಆರೋಪಿಗಳು ಶರಣಾಗಬೇಕು. ಬಳಿಕ ಜೈಲಿನಲ್ಲಿರುವ ತಂದೆ, ತಾಯಂದಿರ ಪಟ್ಟಿ ಮಾಡಲಾಗುವುದು. ಈ ಸಂಬಂಧ ಡಿವೈಎಸ್ಪಿ ಧರ್ಮೇಂದ್ರ ಅವರು ಕ್ರಮ ವಹಿಸುವರು. ಗ್ರಾಮದ ಯಾರೊಬ್ಬರೂ ಭಯಪಡುವುದು ಬೇಡ, ಹೊರಗಡೆ ಇರುವವರು ಗ್ರಾಮಕ್ಕೆ ಮರಳಬೇಕು’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

‘ಗ್ರಾಮದ ಮನೆ ಮನೆಗೂ ಭೇಟಿ ನೀಡಿ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದುಕೊಂಡು ಬಂದಿದ್ದೇವೆ. ಗ್ರಾಮಕ್ಕೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ದೊರಕಿಸಿಕೊಡಲು ಜಿಲ್ಲಾಡಳಿತ ಈಗಾಗಲೇ ಕ್ರಿಯಾ ಯೋಜನೆ ಮಾಡಿ ಸರ್ಕಾರಕ್ಕೆ ಕಳುಹಿಸಿದೆ. ಹಣಕಾಸು ಇಲಾಖೆಯಲ್ಲಿ ಅನುಮೋದನೆ ನೀಡಿದ ನಂತರ ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದು ಎಂದು ಶಿಲ್ಪಾ ನಾಗ್ ಭರವಸೆ ನೀಡಿದರು.

‘ಗ್ರಾಮದಲ್ಲಿ 16 ಮಕ್ಕಳಿದ್ದು ಅವರಿಗೆ ನೇರವಾಗಿ ಮುಂದಿನ ತರಗತಿಗಳಿಗೆ ಪ್ರವೇಶಾತಿ ಕೊಟ್ಟು, ತಾಲ್ಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಸೇರಿಸಿ ಗುಣಮಟ್ಟದ ಶಿಕ್ಷಣ ಕೊಡಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.

‘ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಕೆಲವು ಗ್ರಾಮಸ್ಥರು ಜಾಬ್ ಕಾರ್ಡ್ ಕೇಳಿದ್ದಾರೆ. ಇದಕ್ಕೆ ತಕ್ಕ ಕ್ರಮ ವಹಿಸಲಾಗುವುದು. ಗ್ರಾಮದಲ್ಲಿರುವ ಸೋಲಾರ್‌ ದೀಪ ದುರಸ್ತಿಗೊಳಿಸಲು ಸೆಸ್ಕ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ ಮನೆ ನಿರ್ಮಾಣಕ್ಕೂ ಅನುಕೂಲ ಮಾಡಿಕೊಡಲಾಗುವುದು’ ಎಂದು ಡಿಸಿ ‘ಆಂದೋಲನ’ಕ್ಕೆ ತಿಳಿಸಿದರು.

ಟ್ಯಾಂಕರ್ ಮೂಲಕ ನೀರು: ಇಂಡಿಗನತ್ತ ಗ್ರಾಮದ ಕೊಳವೆಬಾವಿಯ ನೀರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಡಿದು ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ನಾಲ್ಕು ಕೊಳವೆ ಬಾವಿಗಳಿದ್ದು ನೀರು ಬರುತ್ತಿದೆ. ಆದರೂ ಕುಡಿಯುವ ನೀರಿನ ಸಮಸ್ಯೆ ಆಗಬಾರದೆಂದು ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದವರು ತಿಳಿಸಿದರು.

ಗ್ರಾಮದ ರೈತರು ತಮ್ಮ ಜಾನುವಾರುಗಳಿಗೆ ಮೇವು ಬೇಕೆಂದು ತಿಳಿಸಿದ್ದಾರೆ. ಈಗಾಗಲೇ ಎರಡು ಟನ್ ಮೇವು ವಿತರಣೆ ಮಾಡಲಾಗಿದೆ . ಮಳೆ ಬಂದು ಮೇವು ಬರುವವರೆಗೂ ಮೇವು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.

ಕುಟುಂಬದ ಯಜಮಾನ ಜೈಲು ಪಾಲಾಗಿರುವ ಮನೆಗಳಲ್ಲಿ ಮಹಿಳೆಯರು, ಮಕ್ಕಳು ಮತ್ತು ವಯೋವೃದ್ಧರ ಹಿತದೃಷ್ಟಿಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಶಿಶು ಪಾಲನ ಇಲಾಖೆಯ ಜಂಟಿ ಸಹಯೋಗದಲ್ಲಿ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.

ಅಧಿಕಾರಿಗಳ ಗಡಣ: ತಹಸಿಲ್ದಾರ್ ವೈ.ಕೆ ಗುರುಪ್ರಸಾದ್, ಡಿಎಚ್‌ಓ ಡಾ. ಚಿದಂಬರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಇಒ ಉಮೇಶ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್, ಟಿಹೆಚ್‌ ಒ ಡಾ. ಪ್ರಕಾಶ್, ಸಿಡಿಪಿಓ ನಂಜಮಣಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಕೇಶವಮೂರ್ತಿ ಪಿಡಿಒ ಕಿರಣ್, ಗ್ರಾಮ ಆಡಳಿತ ಅಧಿಕಾರಿ ವಿನೋದ್ ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

andolana

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

6 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

7 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

7 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

8 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

9 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

9 hours ago