Andolana originals

ಭಯಬಿಟ್ಟು ಗ್ರಾಮಕ್ಕೆ ಬನ್ನಿ: ಡಿಸಿ ಶಿಲ್ಪಾ ನಾಗ್ ಮನವಿ

ಚಾಮರಾಜನಗರ: ಗ್ರಾಮದಲ್ಲಿರುವ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರಿಂದಲೇ ತಿಳಿದುಕೊಳ್ಳಲು ಅರ್ಧ ದಿನವಿಡೀ ಓಡಾಡಿದ ಜಿಲ್ಲಾಮಟ್ಟದ ಅಧಿಕಾರಿಗಳು ಕೊನೆಗೂ ಗ್ರಾಮಸ್ಥರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾದರು.

‘ಮತಗಟ್ಟೆ ಧ್ವಂಸ ಪ್ರಕರಣದ ಪ್ರಮುಖ ಆರೋಪಿಗಳನ್ನು ಮಾತ್ರ ವಶಕ್ಕೆ ಪಡೆದು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ತಲೆಮರೆಸಿಕೊಂಡಿರುವ 6 ಆರೋಪಿಗಳು ಶರಣಾಗಬೇಕು. ಬಳಿಕ ಜೈಲಿನಲ್ಲಿರುವ ತಂದೆ, ತಾಯಂದಿರ ಪಟ್ಟಿ ಮಾಡಲಾಗುವುದು. ಈ ಸಂಬಂಧ ಡಿವೈಎಸ್ಪಿ ಧರ್ಮೇಂದ್ರ ಅವರು ಕ್ರಮ ವಹಿಸುವರು. ಗ್ರಾಮದ ಯಾರೊಬ್ಬರೂ ಭಯಪಡುವುದು ಬೇಡ, ಹೊರಗಡೆ ಇರುವವರು ಗ್ರಾಮಕ್ಕೆ ಮರಳಬೇಕು’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದರು.

‘ಗ್ರಾಮದ ಮನೆ ಮನೆಗೂ ಭೇಟಿ ನೀಡಿ ಕುಟುಂಬಸ್ಥರ ಬಗ್ಗೆ ಮಾಹಿತಿ ಪಡೆದುಕೊಂಡು ಬಂದಿದ್ದೇವೆ. ಗ್ರಾಮಕ್ಕೆ ಎಲ್ಲಾ ರೀತಿಯ ಮೂಲ ಸೌಲಭ್ಯಗಳನ್ನು ದೊರಕಿಸಿಕೊಡಲು ಜಿಲ್ಲಾಡಳಿತ ಈಗಾಗಲೇ ಕ್ರಿಯಾ ಯೋಜನೆ ಮಾಡಿ ಸರ್ಕಾರಕ್ಕೆ ಕಳುಹಿಸಿದೆ. ಹಣಕಾಸು ಇಲಾಖೆಯಲ್ಲಿ ಅನುಮೋದನೆ ನೀಡಿದ ನಂತರ ಕಾಡಂಚಿನ ಗ್ರಾಮಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳಿಗೂ ಮನವಿ ಮಾಡಲಾಗುವುದು ಎಂದು ಶಿಲ್ಪಾ ನಾಗ್ ಭರವಸೆ ನೀಡಿದರು.

‘ಗ್ರಾಮದಲ್ಲಿ 16 ಮಕ್ಕಳಿದ್ದು ಅವರಿಗೆ ನೇರವಾಗಿ ಮುಂದಿನ ತರಗತಿಗಳಿಗೆ ಪ್ರವೇಶಾತಿ ಕೊಟ್ಟು, ತಾಲ್ಲೂಕಿನ ವಿವಿಧ ವಿದ್ಯಾರ್ಥಿ ನಿಲಯಗಳಿಗೆ ಸೇರಿಸಿ ಗುಣಮಟ್ಟದ ಶಿಕ್ಷಣ ಕೊಡಿಸಲು ಮನವಿ ಮಾಡಿದ್ದಾರೆ. ಇದಕ್ಕೆ ಜಿಲ್ಲಾಡಳಿತ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದರು.

‘ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕೆಲಸ ಮಾಡಲು ಕೆಲವು ಗ್ರಾಮಸ್ಥರು ಜಾಬ್ ಕಾರ್ಡ್ ಕೇಳಿದ್ದಾರೆ. ಇದಕ್ಕೆ ತಕ್ಕ ಕ್ರಮ ವಹಿಸಲಾಗುವುದು. ಗ್ರಾಮದಲ್ಲಿರುವ ಸೋಲಾರ್‌ ದೀಪ ದುರಸ್ತಿಗೊಳಿಸಲು ಸೆಸ್ಕ್‌ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಇದಲ್ಲದೆ ಮನೆ ನಿರ್ಮಾಣಕ್ಕೂ ಅನುಕೂಲ ಮಾಡಿಕೊಡಲಾಗುವುದು’ ಎಂದು ಡಿಸಿ ‘ಆಂದೋಲನ’ಕ್ಕೆ ತಿಳಿಸಿದರು.

ಟ್ಯಾಂಕರ್ ಮೂಲಕ ನೀರು: ಇಂಡಿಗನತ್ತ ಗ್ರಾಮದ ಕೊಳವೆಬಾವಿಯ ನೀರನ್ನು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಡಿದು ಪರಿಶೀಲನೆ ನಡೆಸಿದರು. ಗ್ರಾಮದಲ್ಲಿ ನಾಲ್ಕು ಕೊಳವೆ ಬಾವಿಗಳಿದ್ದು ನೀರು ಬರುತ್ತಿದೆ. ಆದರೂ ಕುಡಿಯುವ ನೀರಿನ ಸಮಸ್ಯೆ ಆಗಬಾರದೆಂದು ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ ಎಂದವರು ತಿಳಿಸಿದರು.

ಗ್ರಾಮದ ರೈತರು ತಮ್ಮ ಜಾನುವಾರುಗಳಿಗೆ ಮೇವು ಬೇಕೆಂದು ತಿಳಿಸಿದ್ದಾರೆ. ಈಗಾಗಲೇ ಎರಡು ಟನ್ ಮೇವು ವಿತರಣೆ ಮಾಡಲಾಗಿದೆ . ಮಳೆ ಬಂದು ಮೇವು ಬರುವವರೆಗೂ ಮೇವು ಪೂರೈಕೆ ಮಾಡಲಾಗುವುದು ಎಂದು ತಿಳಿಸಿದರು.

ಕುಟುಂಬದ ಯಜಮಾನ ಜೈಲು ಪಾಲಾಗಿರುವ ಮನೆಗಳಲ್ಲಿ ಮಹಿಳೆಯರು, ಮಕ್ಕಳು ಮತ್ತು ವಯೋವೃದ್ಧರ ಹಿತದೃಷ್ಟಿಯಿಂದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಶಿಶು ಪಾಲನ ಇಲಾಖೆಯ ಜಂಟಿ ಸಹಯೋಗದಲ್ಲಿ ಊಟದ ವ್ಯವಸ್ಥೆ ಮಾಡಲಾಗುವುದು ಎಂದರು.

ಅಧಿಕಾರಿಗಳ ಗಡಣ: ತಹಸಿಲ್ದಾರ್ ವೈ.ಕೆ ಗುರುಪ್ರಸಾದ್, ಡಿಎಚ್‌ಓ ಡಾ. ಚಿದಂಬರ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಇಒ ಉಮೇಶ್, ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ನವೀನ್ ಮಠದ್, ಟಿಹೆಚ್‌ ಒ ಡಾ. ಪ್ರಕಾಶ್, ಸಿಡಿಪಿಓ ನಂಜಮಣಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿ ಕೇಶವಮೂರ್ತಿ ಪಿಡಿಒ ಕಿರಣ್, ಗ್ರಾಮ ಆಡಳಿತ ಅಧಿಕಾರಿ ವಿನೋದ್ ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

andolana

Recent Posts

ಸದನದ ಘನತೆಗೆ ಧಕ್ಕೆ ಆರೋಪ : ಶಾಸಕ ಶಿವಲಿಂಗೇಗೌಡ ವಜಾಕ್ಕೆ ಆಗ್ರಹ

ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…

37 mins ago

ಹುಲಿ ಸಂರಕ್ಷಣೆಗೆ ಅಂತಾರಾಷ್ಟ್ರೀಯ ಶೃಂಗಸಭೆ : ಬಂಡೀಪುರ, ನಾಗರಹೊಳೆಯಲ್ಲಿ ಆಯೋಜನೆ

ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…

2 hours ago

ಟಿ20 ವಿಶ್ವಕಪ್ | ಭಾರತ ಪಂದ್ಯ ಬಹಿಷ್ಕಾರ ನಿರ್ಧಾರ ಅಚಲ ; ಪಾಕ್‌ ಪುನರುಚ್ಚಾನ

ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿ…

2 hours ago

ಯುಪಿಎಸ್‌ಸಿ ಪರೀಕ್ಷೆಗೆ ಅಧಿಸೂಚನೆ : ಈಗಾಗಲೇ ಪಾಸಾಗಿ ನೇಮಕಗೊಂಡವರಿಗಿಲ್ಲ ಮರು ಪರೀಕ್ಷೆ ಅವಕಾಶ

ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಅಧಿಸೂಚನೆ ಪ್ರಕಟಿಸಿದೆ.…

2 hours ago

ಹಸುಗಳಿಗೆ ಮಾರಕ ರೋಗ : ರೈತರಲ್ಲಿ ತೀವ್ರ ಆತಂಕ

ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…

3 hours ago

ನಾಳೆ,ನಾಡಿದ್ದು ಮೈಸೂರಿನ ಈ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ಮೈಸೂರು : ವಿ.ವಿ ಮೊಹಲ್ಲಾ ಉಪವಿಭಾಗ ವ್ಯಾಪ್ತಿಯಲ್ಲಿ ಭೂಗತ ಕೇಬಲ್ ಅಳವಡಿಸುವ ಕೆಲಸದ ನಿಮಿತ್ತ ಫೆ.6 ಮತ್ತು 7 ರಂದು…

3 hours ago