Andolana originals

ಡಿಸಿ ಎಚ್ಚರಿಕೆ; ರಸ್ತೆಗೆ ಮತ್ತೊಮ್ಮೆ ಡಾಂಬರೀಕರಣ

ಮಂಜು ಕೋಟೆ

ಕೋಟೆ: ನಗರೋತ್ಥಾನ ಯೋಜನೆಯಡಿ ಅಸಮರ್ಪಕವಾಗಿ ನಡೆದಿದ್ದ ಕಾಮಗಾರಿ

ಎಚ್.ಡಿ.ಕೋಟೆ: ಪುರಸಭೆ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆಯಡಿ ನಡೆದಿದ್ದ ರಸ್ತೆ ಕಾಮಗಾರಿಗಳು ಸಮರ್ಪಕವಾಗಿಲ್ಲದ ಬಗ್ಗೆ ಜಿಲ್ಲಾಧಿಕಾರಿಗಳು ನೀಡಿದ ಎಚ್ಚರಿಕೆಯಿಂದ ಎಚ್ಚೆತ್ತ ಗುತ್ತಿಗೆದಾರರು ಮತ್ತು ಅಽಕಾರಿಗಳು ಮತ್ತೊಮ್ಮೆ ರಸ್ತೆ ಕಾಮಗಾರಿಯ ದುರಸ್ತಿಯನ್ನು ನಡೆಸಿದ ಘಟನೆ ನಡೆದಿದೆ.

ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ಮೂಲಸೌಕರ್ಯ ಒದಗಿಸುವಲ್ಲಿ ಮತ್ತು ಅಭಿವೃದ್ಧಿ ಕೆಲಸ ನಡೆಸುವಲ್ಲಿ, ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಹಿಂದೆ ಇದ್ದರೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಂದ ಬರುವ ಅಲ್ಪ ಸ್ವಲ್ಪ ಅನುದಾನದಲ್ಲೂ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಸಮರ್ಪಕವಾಗಿ ಕೆಲಸ ನಿರ್ವಹಿಸದೆ ನಿರ್ಲಕ್ಷಿಸುತ್ತಿರುವುದು ಇತ್ತೀಚೆಗೆ ಬೆಳಕಿಗೆ ಬಂದಿತ್ತು

ಮೂರು ತಿಂಗಳ ಹಿಂದೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿರವರು ಪಟ್ಟಣದ ವ್ಯಾಪ್ತಿಯ ವಾರ್ಡುಗಳಲ್ಲಿ ನಡೆದಿರುವ ನಗರೋತ್ಥಾನ ಯೋಜನೆಯಡಿ ಕೋಟ್ಯಂತರ ರೂ. ವೆಚ್ಚದ ಡಾಂಬರೀಕರಣ ಮತ್ತು ಸಿಸಿ ರಸ್ತೆಗಳ ಕಾಮಗಾರಿಗಳನ್ನು ಅಽಕಾರಿಗಳ ತಂಡದೊಂದಿಗೆ ಪರಿಶೀಲಿಸಿದಾಗ ಸಮರ್ಪಕವಾಗಿ ಕಾಮಗಾರಿ ನಡೆಯದಿರುವುದು ಬೆಳಕಿಗೆ ಬಂದಿತ್ತು.

ತಕ್ಷಣ ಕಾಮಗಾರಿಗಳನ್ನು ನೋಡಿಕೊಳ್ಳಬೇಕಾಗಿದ್ದ ಇಂಜಿನಿಯರ್ ಸುರೇಶ್ ಅವರನ್ನು ಅಮಾನತ್ತುಗೊಳಿಸಿ ಗುತ್ತಿಗೆದಾರರಿಗೆ ಕಾಮಗಾರಿಯ ಬಿಲ್‌ಅನ್ನು ತಡೆಹಿಡಿಯಲಾಗಿತ್ತು. ಕ್ಯಾಡ್ ಸಂಸ್ಥೆಯ ಪಿಎಂಸಿ ಚೇತನ್ ಮತ್ತು ಮಸ್ತಿ ಉಲ್ಲಾ ಇಇ ನರಸು ಕಾರಂತ್, ಸಹಾಯಕ ಅಭಿಯಂತರ ಮಂಜುನಾಥ್, ಪಿಡಿ ಪ್ರಿಯದರ್ಶಿನಿ ಮತ್ತಿತರರು ಪುರಸಭೆ ವ್ಯಾಪ್ತಿಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳನ್ನು ಮತ್ತೊಮ್ಮೆ ೪-೫ ಬಾರಿ ಪರಿಶೀಲಿಸಿ ಉಂಟಾಗಿರುವ ಲೋಪವನ್ನು ಸರಿಪಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದ್ದರು.

ಪಟ್ಟಣದ ಹೌಸಿಂಗ್ ಬೋರ್ಡ್, ಸಿದ್ದಪ್ಪಾಜಿ ರಸ್ತೆ, ಜೂನಿಗೇರಿ ಬೀದಿ, ಚಾಕಹಳ್ಳಿ ವ್ಯಾಪ್ತಿಯ ಆರು ರಸ್ತೆಗಳಿಗೆ ಮತ್ತೊಮ್ಮೆ ಗುತ್ತಿಗೆದಾರರು ಅಧಿಕಾರಿಗಳ ಸಮ್ಮುಖದಲ್ಲಿ ಡಾಂಬರೀಕರಣ ಮಾಡಿದ್ದಾರೆ. ಅಧಿಕಾರಿ ವರ್ಗ ಮತ್ತು ಜನಪ್ರತಿನಿಧಿಗಳು ತಮ್ಮ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಮಾಡಿದಾಗ ಮಾತ್ರ ಹಿಂದುಳಿದಿರುವ ಪಟ್ಟಣ ಅಭಿವೃದ್ಧಿಯತ್ತ ಸಾಗಬಹುದು ಎನ್ನುವುದು ಜನರ ಅನಿಸಿಕೆಯಾಗಿದೆ.

” ಕೋಟೆ ಪುರಸಭೆ ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲಿಸಿದಾಗ ಕಾಮಗಾರಿಯು ಸಮರ್ಪಕವಾಗಿ ಇಲ್ಲದಿರುವುದು ತಿಳಿದುಬಂದಿತ್ತು. ಕ್ರಿಯಾ ಯೋಜನೆಯಂತೆ ಸರ್ಕಾರದ ಅನುದಾನದಲ್ಲಿ ಸಮರ್ಪಕವಾಗಿ ಕಾಮಗಾರಿ ನಡೆಯಬೇಕೆಂಬುದು ನನ್ನ ಉದ್ದೇಶವಾಗಿದೆ. ಹೀಗಾಗಿ ತಪ್ಪಿತಸ್ಥರನ್ನು ಅಮಾನತ್ತು ಮಾಡಲಾಗಿದೆ. ಸಮರ್ಪಕವಾಗಿ ಕೆಲಸ ನಿರ್ವಹಿಸಲು ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ್ದರಿಂದ ರಸ್ತೆಯ ಕಾಮಗಾರಿಯ ಮತ್ತೊಮ್ಮೆ ನಡೆಯಲು ಸಾಧ್ಯವಾಗಿದೆ”.

-ಜಿ. ಲಕ್ಷ್ಮೀಕಾಂತ್ ರೆಡ್ಡಿ, ಜಿಲ್ಲಾಧಿಕಾರಿ

ಆಂದೋಲನ ಡೆಸ್ಕ್

Recent Posts

ಹನೂರು| ಕಗ್ಗತ್ತಲ್ಲಿನಲ್ಲಿದ್ದ ಎರಡು ಬಡ ಕುಟುಂಬಗಳಿಗೆ ಆಸರೆಯಾದ ಪೇದೆ ಕುಮಾರಸ್ವಾಮಿ: ಸಾರ್ವಜನಿಕರಿಂದ ಮೆಚ್ಚುಗೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸ್ವಾತಂತ್ರ ಬಂದು 78 ವರ್ಷ ಪೂರ್ಣಗೊಂಡಿದ್ದರು ವಿದ್ಯುತ್ ಬೆಳಕು ನೋಡದೆ…

10 mins ago

ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತೊಮ್ಮೆ ಟೀಕೆ

ಮಂಡ್ಯ: ನಿನ್ನೆಯಷ್ಟೇ ಸಿಎಂ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್‌ ಬಗ್ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟೀಕೆ ಮಾಡಿದ್ದಾರೆ. ಈ ಕುರಿತು…

24 mins ago

ಗ್ರಾಹಕರಿಗೆ ಬಿಗ್‌ ಶಾಕ್:‌ ಎಲ್‌ಪಿಜಿ ಸಿಲಿಂಡರ್‌ ದರ ಏರಿಕೆ

ನವದೆಹಲಿ: ಇರಾನ್-‌ಇಸ್ರೇಲ್‌ ಸಂಘರ್ಷದ ನಡುವೆಯೇ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋ ಗ್ರಾಂ ತೂಕದ ಗೃಹ ಬಳಕೆಯ…

47 mins ago

ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ: ಸ್ಪೀಕರ್‌ ಯು.ಟಿ.ಖಾದರ್‌ ಕರೆ

ಮಂಗಳೂರು: ಬಜೆಟ್‌ ಅಧಿವೇಶನದಲ್ಲಿ ಎಲ್ಲಾ ಶಾಸಕರು ಭಾಗಿಯಾಗಿ ಎಂದು ಸ್ಪೀಕರ್‌ ಯು.ಟಿ.ಖಾದರ್‌ ಕರೆ ನೀಡಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ…

1 hour ago

ಹಾಸನ| ಒಂದೇ ವಾರದಲ್ಲಿ ಎರಡು ಚಿರತೆ ಸೆರೆ: ನೆಮ್ಮದಿಯ ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹಾಸನ: ಜಿಲ್ಲೆಯ ಚನ್ನರಾಯಪಟ್ಟಣದ ದಿಂಡಗೂರು ಗ್ರಾಮದಲ್ಲಿ ಕಳೆದ ಒಂದು ವಾರದ ಅಂತರದಲ್ಲಿ ಎರಡು ಚಿರತೆಗಳನ್ನು ಸೆರೆ ಹಿಡಿಯಲಾಗಿದ್ದು, ಗ್ರಾಮಸ್ಥರು ನೆಮ್ಮದಿಯ…

2 hours ago

ಯುದ್ಧದ ನಡುವೆ ಇರಾನ್‌ನಲ್ಲಿ ಭೂಕಂಪ: 4.1 ತೀವ್ರತೆ ದಾಖಲು

ಟೆಹರಾನ್:‌ ಯುದ್ಧದ ನಡುವೆಯೇ ಇರಾನ್‌ನಲ್ಲಿ ಇಂದು ಭೂಕಂಪ ಸಂಭವಿಸಿದೆ. ಇರಾನ್‌ನ ಆಯಕಟ್ಟಿನ ಪ್ರದೇಶದವಾದ ಬಂದರ್‌ ಅಬ್ಬಾಸ್‌ ಸಮೀಪ ರಿಕ್ಟರ್‌ ಮಾಪಕದಲ್ಲಿ…

2 hours ago