Andolana originals

ಸಾಲದ ಕಾಟ ; ನೆಲೆಯೂ ಇಲ್ಲದೆ ನರಳಾಟ

ಪ್ರಸಾದ್‌ ಲಕ್ಕೂರು

ಚಾಮರಾಜನಗರ: ಖಾಸಗಿ ಕಿರು ಹಣಕಾಸು ಸಂಸ್ಥೆ ಗಳಿಂದ ಸಾಲ ಪಡೆದು ಸಕಾಲಕ್ಕೆ ತೀರಿಸಲಾಗದೆ ಕುಟುಂಬವೊಂದು ಬೀದಿಗೆ ಬಿದ್ದಿದೆ. ಸಾಲ ಮರು ಪಾವತಿಸುವಂತೆ ಹಣಕಾಸು ಸಂಸ್ಥೆಗಳ ಸಿಬ್ಬಂದಿ ನೀಡುತ್ತಿ ರುವ ಒತ್ತಡದಿಂದ ಸಂಕಷ್ಟಕ್ಕೆ ಸಿಲುಕಿದೆ.

ತಾಲ್ಲೂಕಿನ ಕುದೇರು ಗ್ರಾಮದ ನಾಗರಾಜು ಅವರ ಕುಟುಂಬ ಅಕ್ಷರಶಃ ನಲುಗಿ ಹೋಗಿದೆ. ೨ ಹಣಕಾಸು ಸಂಸ್ಥೆಗಳಿಂದ ಒಟ್ಟು ೨. ೭೦ ಲಕ್ಷ ರೂ. ಸಾಲ ಪಡೆದಿರುವ ನಾಗರಾಜು ಮತ್ತು ಪೂಜಾ ದಂಪತಿ, ಮರು ಪಾವತಿ ಸಲು ಆಗದೆ ಪರಿ ತಪಿಸುತ್ತಿದ್ದಾರೆ.

ನಾಗರಾಜು ಅವರದು ಮನೆ ಗಳಿಗೆ ಬಣ್ಣ ಹೊಡೆ ಯುವ ಕಾಯಕ. ಥೈರಾಯ್ಡ್ ಸಮಸ್ಯೆಯಿರುವ ಇವರು ಆಗಾಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಿದೆ. ಬಣ್ಣ ಹೊಡೆಯುವ ಕೆಲಸದಿಂದ ಸಂಸಾರ ಸಾಕುವುದು ಹಾಗೂ ಸಾಲ ತೀರಿಸುವುದು ಕಷ್ಟವಾಗಿತ್ತು. ಹಣಕಾಸು ಸಂಸ್ಥೆಗಳ ಸಿಬ್ಬಂದಿಗಳ ಕಿರುಕುಳ ತಾಳಲಾಗದೆ ನಾಗರಾಜು ಮತ್ತು ಪೂಜಾ ದಂಪತಿ ಕೆಲಸ ಅರಸಿ ಮೈಸೂರಿಗೆ ಹೋಗಿ ೪ ತಿಂಗಳು ಇದ್ದರು.

ಮನೆಗೆ ಬಾಡಿಗೆ ಪಾವತಿ, ಕಡಿಮೆ ಸಂಪಾದನೆಯಿಂದ ಕುಟುಂಬ ನಿರ್ವಹಣೆಯೇ ಕಷ್ಟವಾಯಿತು. ಮೈಸೂರಿನ ಬದುಕು ದುಬಾರಿಯಾದಾಗ ಸ್ವಗ್ರಾಮಕ್ಕೆ ವಾಪಸ್ ಬಂದಿದ್ದಾರೆ. ಆದರೆ, ನಾಗರಾಜು ಅವರ ತಾಯಿ ಮನೆಯ ಬೀಗ ನೀಡಲು ನಿರಾಕರಿಸಿದ್ದಾರೆ.

ಸಾಲ ನೀಡಿರುವ ಹಣಕಾಸು ಸಂಸ್ಥೆಯ ಸಿಬ್ಬಂದಿ ಪದೇ ಪದೇ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಸಾಲವನ್ನು ತೀರಿಸಿದರೆ ಮಾತ್ರ ಮನೆಯ ಬೀಗ ನೀಡುವೆ ಎಂದಿದ್ದಾರೆ. ಹಾಗಾಗಿ ಸುಮಾರು ಒಂದೂವರೆ ವರ್ಷದಿಂದ ಮನೆಯ ಬಾಗಿಲು ಬಂದ್ ಆಗಿದೆ.

ನಾಗರಾಜು ದಂಪತಿ ಅದೇ ಗ್ರಾಮದಲ್ಲಿರುವ ತಮ್ಮ ಮಾವನ ಮನೆಯನ್ನು ಸೇರಿಕೊಂಡಿದ್ದಾರೆ. ಹಣಕಾಸು ಸಂಸ್ಥೆಗಳ ಸಿಬ್ಬಂದಿಯ ಕಿರುಕುಳದಿಂದ ನಾಗರಾಜು ಸ್ವಂತ ಮನೆಯಿದ್ದರೂ ಮಾವನ ಮನೆಯಲ್ಲಿ ವಾಸ್ತವ್ಯ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಈ ದಂಪತಿಗೆ ಒಬ್ಬ ಮಗನಿದ್ದು, ಶಾಲೆಯಲ್ಲಿ ಓದುತ್ತಿದ್ದಾನೆ. ಫೈನಾನ್ಸ್‌ಗಳ ಕಾಟದಿಂದ ಈ ಕುಟುಂಬ ಬಸವಳಿದಿದೆ.

ಊರು ತೋರೆದ 1o ಕುಟುಂಬ

ಕುದೇರು ಗ್ರಾಮದ ಬಹುತೇಕ ಎಲ್ಲ ಸಮುದಾಯಗಳ ಸುಮಾರು ೧೦ ಕುಟುಂಬಗಳು ಸಾಲದ ಬಾಧೆ ತಾಳಲಾರದೆ ಊರನ್ನೇ ತೊರೆದಿವೆ. ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿದ್ದ ಕುಟುಂಬಗಳು ಸಿಬ್ಬಂದಿ ಹಾಗೂ ಗುಂಪಿನ ಸದಸ್ಯರ ಕಿರುಕುಳ ಹಾಗೂ ನಿಂದನೆಯಿಂದ ಮನ ನೊಂದು ಊರನ್ನೇ ತೊರೆದು ಮೈಸೂರು, ಬೆಂಗಳೂರು ಸೇರಿವೆ.

ನಲುಗಿದ ರತ್ನಮ್ಮ ಕುಟುಂಬ

ಇದೇ ಗ್ರಾಮದ ರತ್ನಮ್ಮ ಅವರು, ೪ ಹಣಕಾಸು ಸಂಸ್ಥೆಗಳಿಂದ ವಾರ, ಪಾಕ್ಷಿಕ, ತಿಂಗಳ ಕಂತು ಆಧಾರದಲ್ಲಿ ೨. ೮೦ ಲಕ್ಷ ರೂ. ಸಾಲ ಪಡೆದಿದ್ದಾರೆ. ಇವರು ಶೇ. ೫೦ ರಷ್ಟು ಸಾಲ ಮರು ಪಾವತಿಸಿದ್ದಾರೆ. ಬಾಕಿ ತೀರಿಸಲು ಸಾಧ್ಯವಾಗದೆ ನೊಂದಿದ್ದಾರೆ. ರತ್ನಮ್ಮ ಮತ್ತು ಇವರ ಪತಿ ಬಸವರಾಜು ಜೀವನ ನಿರ್ವಹಣೆಗೆ ಕೂಲಿ ಮಾಡುತ್ತಾರೆ. ಇತ್ತೀಚೆಗೆ ಬಸವರಾಜು ಎಡಗಾಲಿನಲ್ಲಿ ಇಸುಬು ಕಾಣಿಸಿಕೊಂಡು ಗಾಯವಾಗಿದೆ. ಕೂಲಿ ಕೆಲಸಕ್ಕೆ ಹೋಗಲಾಗದೆ, ಸಾಲ ಮರು ಪಾವತಿಸಲು ಸಾಧ್ಯವಾಗುತ್ತಿಲ್ಲ. ಹಣಕಾಸು ಸಂಸ್ಥೆಗಳ ಸಿಬ್ಬಂದಿ ಬೆಳಿಗ್ಗೆ, ಮಧ್ಯಾಹ್ನ ಮನೆ ಬಾಗಿಲಿಗೆ ಬಂದು ಕುಳಿತುಕೊಳ್ಳುತ್ತಾರೆ. ರಾತ್ರಿಯಾದರೂ ಹೋಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ವಾರ ಕಂತಿನ ಹಣ ಪಾವತಿಸುವುದಾಗಿ ಗೋಗರೆದರೂ ಕೇಳುವುದಿಲ್ಲ. ಅದೆಲ್ಲ ನಮಗೆ ಬೇಕಿಲ್ಲ. ಪಡೆದಿರುವ ಸಾಲವನ್ನು ಮರುಪಾವತಿ ಮಾಡಿ ಎಂದು ಒತ್ತಡ ಹಾಕುತ್ತಿದ್ದಾರೆ ಎಂದು ರತ್ನಮ್ಮ ಕಣ್ಣೀರು ಹಾಕುತ್ತಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಶಾಂತಿ ನೆಲೆಸಲಿ

ಏಕಸ್ವಾಮ್ಯ ಸಾಧಿಸಲು ತಯಾರು ಪರಮಾಣು ಅಣ್ವಸ್ತ್ರ ಅದಕ್ಕಾಗಿಯೇ ನಿಲ್ಲದೆ ನಡೆಯುತ್ತಿದೆ ವಾಯು, ಡ್ರೋನ್, ಕ್ಷಿಪಣಿ ದಾಳಿ ನೆತ್ತರು ಹರಿಯುತ್ತಿದೆ ಹಿಂಸೆ…

2 hours ago

ಓದುಗರ ಪತ್ರ: ಸಂಬಂಧ..!

ಸಂಬಂಧ..! ಒಂದೊಂದು ರೀತಿ ಒಬ್ಬೊಬ್ಬರ ಸಂಬಂಧ.. ಇವರದು ಹಾಲು-ಜೇನು ಅವರದು ಎಣ್ಣೆ-ಸೀಗೆಕಾಯಿ ಬೇಕಿದ್ದರೆ ಗಮನಿಸಿ.. ಇರಾನ್ -ಇಸ್ರೇಲ್ ಹಾವು-ಮುಂಗುಸಿ !…

2 hours ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ನಿರ್ಗಮನ ದ್ವಾರದ ಬಳಿ ಮರವೊಂದು ಒಣಗಿ ನಿಂತಿದ್ದು, ಯಾವಾಗಲಾದರೂ ಬೀಳುವ ಸಾಧ್ಯತೆಯಿದೆ. ಕ್ರಾ-ರ್ಡ್ ಹಾಲ್…

2 hours ago

ಓದುಗರ ಪತ್ರ: ರೈಲು ನಿಲ್ದಾಣದಲ್ಲಿ ಕಾರ್ಯ ನಿರ್ವಹಿಸದ ಎಸ್ಕಲೇಟರ್

ಮೈಸೂರಿನ ಮುಖ್ಯ ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟರ್ ಕೇವಲ ತೋರಿಕೆಗೆ ಮಾತ್ರ ಇದೆ ಎನಿಸುತ್ತದೆ. ಒಂದನೇ ಪ್ಲಾಟ್ ಫಾರ್ಮ್ ಬಿಟ್ಟರೆ ಉಳಿದ…

2 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಗಂಭೀರ ಸಮಸ್ಯೆ ಎದುರಿಸಲು ಒಟ್ಟಾದವರೂ ಸಿನಿಮಾ ಪ್ರಚಾರವೂ

ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ…

2 hours ago

ಬೇಸಿಗೆ ತಾಪಮಾನದಲ್ಲೂ ಉತ್ತಮ ಹೈನುಗಾರಿಕೆ

ಬೇಸಿಗೆಯಲ್ಲೂ ೨.೮೦ ಲಕ್ಷ ಲೀ. ಹಾಲು ಸಂಗ್ರಹ; ಚಾಮುಲ್ ಇತಿಹಾಸದಲ್ಲಿ ಹೊಸ ಮೈಲಿಗಲ್ಲು. ಚಾಮರಾಜನಗರ: ಚಾಮರಾಜನಗರ ಜಿಲ್ಲಾ ಸಹಕಾರ ಹಾಲು…

3 hours ago