Andolana originals

ಸಾಲದ ಕಾಟ ; ನೆಲೆಯೂ ಇಲ್ಲದೆ ನರಳಾಟ

ಪ್ರಸಾದ್‌ ಲಕ್ಕೂರು

ಚಾಮರಾಜನಗರ: ಖಾಸಗಿ ಕಿರು ಹಣಕಾಸು ಸಂಸ್ಥೆ ಗಳಿಂದ ಸಾಲ ಪಡೆದು ಸಕಾಲಕ್ಕೆ ತೀರಿಸಲಾಗದೆ ಕುಟುಂಬವೊಂದು ಬೀದಿಗೆ ಬಿದ್ದಿದೆ. ಸಾಲ ಮರು ಪಾವತಿಸುವಂತೆ ಹಣಕಾಸು ಸಂಸ್ಥೆಗಳ ಸಿಬ್ಬಂದಿ ನೀಡುತ್ತಿ ರುವ ಒತ್ತಡದಿಂದ ಸಂಕಷ್ಟಕ್ಕೆ ಸಿಲುಕಿದೆ.

ತಾಲ್ಲೂಕಿನ ಕುದೇರು ಗ್ರಾಮದ ನಾಗರಾಜು ಅವರ ಕುಟುಂಬ ಅಕ್ಷರಶಃ ನಲುಗಿ ಹೋಗಿದೆ. ೨ ಹಣಕಾಸು ಸಂಸ್ಥೆಗಳಿಂದ ಒಟ್ಟು ೨. ೭೦ ಲಕ್ಷ ರೂ. ಸಾಲ ಪಡೆದಿರುವ ನಾಗರಾಜು ಮತ್ತು ಪೂಜಾ ದಂಪತಿ, ಮರು ಪಾವತಿ ಸಲು ಆಗದೆ ಪರಿ ತಪಿಸುತ್ತಿದ್ದಾರೆ.

ನಾಗರಾಜು ಅವರದು ಮನೆ ಗಳಿಗೆ ಬಣ್ಣ ಹೊಡೆ ಯುವ ಕಾಯಕ. ಥೈರಾಯ್ಡ್ ಸಮಸ್ಯೆಯಿರುವ ಇವರು ಆಗಾಗ್ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಿದೆ. ಬಣ್ಣ ಹೊಡೆಯುವ ಕೆಲಸದಿಂದ ಸಂಸಾರ ಸಾಕುವುದು ಹಾಗೂ ಸಾಲ ತೀರಿಸುವುದು ಕಷ್ಟವಾಗಿತ್ತು. ಹಣಕಾಸು ಸಂಸ್ಥೆಗಳ ಸಿಬ್ಬಂದಿಗಳ ಕಿರುಕುಳ ತಾಳಲಾಗದೆ ನಾಗರಾಜು ಮತ್ತು ಪೂಜಾ ದಂಪತಿ ಕೆಲಸ ಅರಸಿ ಮೈಸೂರಿಗೆ ಹೋಗಿ ೪ ತಿಂಗಳು ಇದ್ದರು.

ಮನೆಗೆ ಬಾಡಿಗೆ ಪಾವತಿ, ಕಡಿಮೆ ಸಂಪಾದನೆಯಿಂದ ಕುಟುಂಬ ನಿರ್ವಹಣೆಯೇ ಕಷ್ಟವಾಯಿತು. ಮೈಸೂರಿನ ಬದುಕು ದುಬಾರಿಯಾದಾಗ ಸ್ವಗ್ರಾಮಕ್ಕೆ ವಾಪಸ್ ಬಂದಿದ್ದಾರೆ. ಆದರೆ, ನಾಗರಾಜು ಅವರ ತಾಯಿ ಮನೆಯ ಬೀಗ ನೀಡಲು ನಿರಾಕರಿಸಿದ್ದಾರೆ.

ಸಾಲ ನೀಡಿರುವ ಹಣಕಾಸು ಸಂಸ್ಥೆಯ ಸಿಬ್ಬಂದಿ ಪದೇ ಪದೇ ಮನೆ ಬಾಗಿಲಿಗೆ ಬರುತ್ತಿದ್ದಾರೆ. ಅವರ ಸಾಲವನ್ನು ತೀರಿಸಿದರೆ ಮಾತ್ರ ಮನೆಯ ಬೀಗ ನೀಡುವೆ ಎಂದಿದ್ದಾರೆ. ಹಾಗಾಗಿ ಸುಮಾರು ಒಂದೂವರೆ ವರ್ಷದಿಂದ ಮನೆಯ ಬಾಗಿಲು ಬಂದ್ ಆಗಿದೆ.

ನಾಗರಾಜು ದಂಪತಿ ಅದೇ ಗ್ರಾಮದಲ್ಲಿರುವ ತಮ್ಮ ಮಾವನ ಮನೆಯನ್ನು ಸೇರಿಕೊಂಡಿದ್ದಾರೆ. ಹಣಕಾಸು ಸಂಸ್ಥೆಗಳ ಸಿಬ್ಬಂದಿಯ ಕಿರುಕುಳದಿಂದ ನಾಗರಾಜು ಸ್ವಂತ ಮನೆಯಿದ್ದರೂ ಮಾವನ ಮನೆಯಲ್ಲಿ ವಾಸ್ತವ್ಯ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಈ ದಂಪತಿಗೆ ಒಬ್ಬ ಮಗನಿದ್ದು, ಶಾಲೆಯಲ್ಲಿ ಓದುತ್ತಿದ್ದಾನೆ. ಫೈನಾನ್ಸ್‌ಗಳ ಕಾಟದಿಂದ ಈ ಕುಟುಂಬ ಬಸವಳಿದಿದೆ.

ಊರು ತೋರೆದ 1o ಕುಟುಂಬ

ಕುದೇರು ಗ್ರಾಮದ ಬಹುತೇಕ ಎಲ್ಲ ಸಮುದಾಯಗಳ ಸುಮಾರು ೧೦ ಕುಟುಂಬಗಳು ಸಾಲದ ಬಾಧೆ ತಾಳಲಾರದೆ ಊರನ್ನೇ ತೊರೆದಿವೆ. ವಿವಿಧ ಹಣಕಾಸು ಸಂಸ್ಥೆಗಳಿಂದ ಸಾಲ ಪಡೆದಿದ್ದ ಕುಟುಂಬಗಳು ಸಿಬ್ಬಂದಿ ಹಾಗೂ ಗುಂಪಿನ ಸದಸ್ಯರ ಕಿರುಕುಳ ಹಾಗೂ ನಿಂದನೆಯಿಂದ ಮನ ನೊಂದು ಊರನ್ನೇ ತೊರೆದು ಮೈಸೂರು, ಬೆಂಗಳೂರು ಸೇರಿವೆ.

ನಲುಗಿದ ರತ್ನಮ್ಮ ಕುಟುಂಬ

ಇದೇ ಗ್ರಾಮದ ರತ್ನಮ್ಮ ಅವರು, ೪ ಹಣಕಾಸು ಸಂಸ್ಥೆಗಳಿಂದ ವಾರ, ಪಾಕ್ಷಿಕ, ತಿಂಗಳ ಕಂತು ಆಧಾರದಲ್ಲಿ ೨. ೮೦ ಲಕ್ಷ ರೂ. ಸಾಲ ಪಡೆದಿದ್ದಾರೆ. ಇವರು ಶೇ. ೫೦ ರಷ್ಟು ಸಾಲ ಮರು ಪಾವತಿಸಿದ್ದಾರೆ. ಬಾಕಿ ತೀರಿಸಲು ಸಾಧ್ಯವಾಗದೆ ನೊಂದಿದ್ದಾರೆ. ರತ್ನಮ್ಮ ಮತ್ತು ಇವರ ಪತಿ ಬಸವರಾಜು ಜೀವನ ನಿರ್ವಹಣೆಗೆ ಕೂಲಿ ಮಾಡುತ್ತಾರೆ. ಇತ್ತೀಚೆಗೆ ಬಸವರಾಜು ಎಡಗಾಲಿನಲ್ಲಿ ಇಸುಬು ಕಾಣಿಸಿಕೊಂಡು ಗಾಯವಾಗಿದೆ. ಕೂಲಿ ಕೆಲಸಕ್ಕೆ ಹೋಗಲಾಗದೆ, ಸಾಲ ಮರು ಪಾವತಿಸಲು ಸಾಧ್ಯವಾಗುತ್ತಿಲ್ಲ. ಹಣಕಾಸು ಸಂಸ್ಥೆಗಳ ಸಿಬ್ಬಂದಿ ಬೆಳಿಗ್ಗೆ, ಮಧ್ಯಾಹ್ನ ಮನೆ ಬಾಗಿಲಿಗೆ ಬಂದು ಕುಳಿತುಕೊಳ್ಳುತ್ತಾರೆ. ರಾತ್ರಿಯಾದರೂ ಹೋಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ ವಾರ ಕಂತಿನ ಹಣ ಪಾವತಿಸುವುದಾಗಿ ಗೋಗರೆದರೂ ಕೇಳುವುದಿಲ್ಲ. ಅದೆಲ್ಲ ನಮಗೆ ಬೇಕಿಲ್ಲ. ಪಡೆದಿರುವ ಸಾಲವನ್ನು ಮರುಪಾವತಿ ಮಾಡಿ ಎಂದು ಒತ್ತಡ ಹಾಕುತ್ತಿದ್ದಾರೆ ಎಂದು ರತ್ನಮ್ಮ ಕಣ್ಣೀರು ಹಾಕುತ್ತಾರೆ.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

7 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

10 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

11 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

14 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago