Andolana originals

ಈಡೇರಿದ ಸಾಲಿಗ್ರಾಮ ಜನತೆಯ ದಶಕಗಳ ಬೇಡಿಕೆ

ಕೆ.ಟಿ.ಮೋಹನ್ ಕುಮಾರ್

ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಸಾಲಿಗ್ರಾಮ ಗ್ರಾಮ ಪಂಚಾಯಿತಿ

ಸಾಲಿಗ್ರಾಮ: ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪಟ್ಟಣದ ಜನರ ಬಹುದಿನಗಳ ಬೇಡಿಕೆ ಈಗ ಈಡೇರಿದೆ.

ಸಾಲಿಗ್ರಾಮ ಈ ಹಿಂದೆ ನಗರಸಭೆಯಾಗಿತ್ತು. ಕಾರಣಾಂತರಗಳಿಂದ ಅದನ್ನು ಪಂಚಾಯಿತಿಯನ್ನಾಗಿ ಮಾರ್ಪಡಿಸಲಾಗಿತ್ತು. ಇದನ್ನು ಪುರಸಭೆಯಾಗಿ ಮಾರ್ಪಾಡು ಮಾಡಬೇಕೆಂದು ೧೯೭೫ರ ನ.೨೧ರಂದು ಅಂದಿನ ಮುಖ್ಯಮಂತ್ರಿ ಯಾಗಿದ್ದ ಡಿ.ದೇವರಾಜ ಅರಸು ಮತ್ತು ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಹೆಚ್.ಎಂ.ಚನ್ನಬಸಪ್ಪ ಅವರುಗಳಿಗೆ ಅಂದಿನ ನಗರ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಮನವಿ ಸಲ್ಲಿಸಿದ್ದರು. ಅಂದಿನಿಂದ ಇಲ್ಲಿಯವರೆಗೂ ಬೇಡಿಕೆ ಈಡೇರಿರಲಿಲ್ಲ.

ಸಾಲಿಗ್ರಾಮ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೩೦ ಜನ ಸದಸ್ಯರಿದ್ದಾರೆ. ಪ್ರಸ್ತುತ ದಿನಗಳಲ್ಲಿ ಪಟ್ಟಣವು ಬಹಳ ವಿಸ್ತಾರವಾಗಿ ಬೆಳೆದಿದ್ದು, ೨೦ ಸಾವಿರಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ, ರಸ್ತೆ, ಮಾರುಕಟ್ಟೆ, ಮೂಲಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಪಟ್ಟಣವನ್ನು ಅಭಿವೃದ್ಧಿ ಪಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂಬುದು ಈ ಭಾಗದ ಜನರ ಬೇಡಿಕೆಯಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನ.೨೭ರಂದು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವುದಕ್ಕೆ ಒಪ್ಪಿಗೆ ನೀಡಿದೆ. ಆ ಮೂಲಕ ಪಟ್ಟಣಕ್ಕೆ ಹೆಚ್ಚಿನ ಅನುದಾನ ಬರಲಿದ್ದು ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ ಬರೆದಂತಾಗಿದೆ. ಅದ ರೊಂದಿಗೆ ಈ ಭಾಗದ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಡಿ.ರವಿಶಂಕರ್ ಅವರ ಅಧಿಕಾರ ಅವಧಿಯಲ್ಲಿ ಸಾಲಿ ಗ್ರಾಮವು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದೆ.

ಈ ಹಿಂದೆ ಕಾಂಗ್ರೆಸ್-ಜಾ.ದಳ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಂದಿನ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದ ಸಾ.ರಾ.ಮಹೇಶ್ ಅವರು ಅಭಿವೃದ್ಧಿಯ ದೃಷ್ಟಿಕೋನದಿಂದ ಕೃಷ್ಣರಾಜನಗರ ತಾಲ್ಲೂಕನ್ನು ವಿಭಜಿಸಿ ಸಾಲಿಗ್ರಾಮವನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಮಾಡಿದ್ದರು. ಸಾಲಿಗ್ರಾಮದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪಟ್ಟಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಬೇಕು. ಜೊತೆಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬುದು ಜನರ ಆಶಯವಾಗಿದೆ.

” ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿಮೇಲ್ದರ್ಜೆಗೇರಿಸಿರುವುದರಿಂದ ಪಟ್ಟಣದ ಜನತೆಯ ಬಹುದಶಕಗಳ ಬೇಡಿಕೆ ಈಡೇರಿದಂತಾಗಿದೆ. ಇದಕ್ಕೆ ಪ್ರಮುಖ ಕಾರಣರಾದ ಶಾಸಕ ಡಿ.ರವಿಶಂಕರ್ ಅವರಿಗೆ ಸಾಲಿಗ್ರಾಮ ಪಟ್ಟಣದ ಜನತೆಯ ಪರವಾಗಿ ಅಭಿನಂದನೆಗಳು.”

-ಕಂಠಿಕುಮಾರ್, ಅಧ್ಯಕ್ಷರು, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕ

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago