Andolana originals

ಈಡೇರಿದ ಸಾಲಿಗ್ರಾಮ ಜನತೆಯ ದಶಕಗಳ ಬೇಡಿಕೆ

ಕೆ.ಟಿ.ಮೋಹನ್ ಕುಮಾರ್

ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೇರಿದ ಸಾಲಿಗ್ರಾಮ ಗ್ರಾಮ ಪಂಚಾಯಿತಿ

ಸಾಲಿಗ್ರಾಮ: ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿ ಯನ್ನಾಗಿ ಮೇಲ್ದರ್ಜೆಗೇರಿಸಬೇಕೆಂಬ ಪಟ್ಟಣದ ಜನರ ಬಹುದಿನಗಳ ಬೇಡಿಕೆ ಈಗ ಈಡೇರಿದೆ.

ಸಾಲಿಗ್ರಾಮ ಈ ಹಿಂದೆ ನಗರಸಭೆಯಾಗಿತ್ತು. ಕಾರಣಾಂತರಗಳಿಂದ ಅದನ್ನು ಪಂಚಾಯಿತಿಯನ್ನಾಗಿ ಮಾರ್ಪಡಿಸಲಾಗಿತ್ತು. ಇದನ್ನು ಪುರಸಭೆಯಾಗಿ ಮಾರ್ಪಾಡು ಮಾಡಬೇಕೆಂದು ೧೯೭೫ರ ನ.೨೧ರಂದು ಅಂದಿನ ಮುಖ್ಯಮಂತ್ರಿ ಯಾಗಿದ್ದ ಡಿ.ದೇವರಾಜ ಅರಸು ಮತ್ತು ಲೋಕೋಪಯೋಗಿ ಇಲಾಖೆ ಸಚಿವರಾಗಿದ್ದ ಹೆಚ್.ಎಂ.ಚನ್ನಬಸಪ್ಪ ಅವರುಗಳಿಗೆ ಅಂದಿನ ನಗರ ಪಂಚಾಯಿತಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ಮನವಿ ಸಲ್ಲಿಸಿದ್ದರು. ಅಂದಿನಿಂದ ಇಲ್ಲಿಯವರೆಗೂ ಬೇಡಿಕೆ ಈಡೇರಿರಲಿಲ್ಲ.

ಸಾಲಿಗ್ರಾಮ ಗ್ರಾಮ ಪಂಚಾಯಿತಿಯಲ್ಲಿ ಒಟ್ಟು ೩೦ ಜನ ಸದಸ್ಯರಿದ್ದಾರೆ. ಪ್ರಸ್ತುತ ದಿನಗಳಲ್ಲಿ ಪಟ್ಟಣವು ಬಹಳ ವಿಸ್ತಾರವಾಗಿ ಬೆಳೆದಿದ್ದು, ೨೦ ಸಾವಿರಕ್ಕೂ ಅಧಿಕ ಜನಸಂಖ್ಯೆಯನ್ನು ಹೊಂದಿದೆ. ಪಟ್ಟಣದಲ್ಲಿ ಒಳಚರಂಡಿ ವ್ಯವಸ್ಥೆ, ರಸ್ತೆ, ಮಾರುಕಟ್ಟೆ, ಮೂಲಸೌಲಭ್ಯಗಳ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಪಟ್ಟಣವನ್ನು ಅಭಿವೃದ್ಧಿ ಪಡಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕೆಂಬುದು ಈ ಭಾಗದ ಜನರ ಬೇಡಿಕೆಯಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನ.೨೭ರಂದು ಬೆಂಗಳೂರಿನಲ್ಲಿ ನಡೆದ ಸಚಿವ ಸಂಪುಟ ಸಭೆ ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸುವುದಕ್ಕೆ ಒಪ್ಪಿಗೆ ನೀಡಿದೆ. ಆ ಮೂಲಕ ಪಟ್ಟಣಕ್ಕೆ ಹೆಚ್ಚಿನ ಅನುದಾನ ಬರಲಿದ್ದು ಸರ್ವಾಂಗೀಣ ಅಭಿವೃದ್ಧಿಗೆ ಮುನ್ನುಡಿ ಬರೆದಂತಾಗಿದೆ. ಅದ ರೊಂದಿಗೆ ಈ ಭಾಗದ ಸಾರ್ವಜನಿಕರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕ್ಷೇತ್ರದ ಶಾಸಕ ಡಿ.ರವಿಶಂಕರ್ ಅವರ ಅಧಿಕಾರ ಅವಧಿಯಲ್ಲಿ ಸಾಲಿ ಗ್ರಾಮವು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಏರಿದೆ.

ಈ ಹಿಂದೆ ಕಾಂಗ್ರೆಸ್-ಜಾ.ದಳ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಂದಿನ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದ ಸಾ.ರಾ.ಮಹೇಶ್ ಅವರು ಅಭಿವೃದ್ಧಿಯ ದೃಷ್ಟಿಕೋನದಿಂದ ಕೃಷ್ಣರಾಜನಗರ ತಾಲ್ಲೂಕನ್ನು ವಿಭಜಿಸಿ ಸಾಲಿಗ್ರಾಮವನ್ನು ನೂತನ ತಾಲ್ಲೂಕು ಕೇಂದ್ರವನ್ನಾಗಿ ಮಾಡಿದ್ದರು. ಸಾಲಿಗ್ರಾಮದ ಸಮಗ್ರ ಅಭಿವೃದ್ಧಿ ನಿಟ್ಟಿನಲ್ಲಿ ಪಟ್ಟಣದಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು ಆರಂಭಗೊಳ್ಳಬೇಕು. ಜೊತೆಗೆ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬುದು ಜನರ ಆಶಯವಾಗಿದೆ.

” ಸಾಲಿಗ್ರಾಮ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿಮೇಲ್ದರ್ಜೆಗೇರಿಸಿರುವುದರಿಂದ ಪಟ್ಟಣದ ಜನತೆಯ ಬಹುದಶಕಗಳ ಬೇಡಿಕೆ ಈಡೇರಿದಂತಾಗಿದೆ. ಇದಕ್ಕೆ ಪ್ರಮುಖ ಕಾರಣರಾದ ಶಾಸಕ ಡಿ.ರವಿಶಂಕರ್ ಅವರಿಗೆ ಸಾಲಿಗ್ರಾಮ ಪಟ್ಟಣದ ಜನತೆಯ ಪರವಾಗಿ ಅಭಿನಂದನೆಗಳು.”

-ಕಂಠಿಕುಮಾರ್, ಅಧ್ಯಕ್ಷರು, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಎಸ್‌ಸಿ ಘಟಕ

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

22 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago