Andolana originals

ಏ.25ಕ್ಕೆ ಮೈಸೂರು ಬೃಹತ್‌ ನಗರಪಾಲಿಕೆ ರಚನೆ ನಿರ್ಧಾರ

ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಕೆ. ಬಿ. ರಮೇಶ್ ನಾಯಕ

ಮೈಸೂರು: ಹಲವು ದಿನಗಳಿಂದ ಎದುರು ನೋಡುತ್ತಿರುವ ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮೈಸೂರು ಮಹಾ ನಗರಪಾಲಿಕೆ ಯನ್ನಾಗಿ ಮೇಲ್ದರ್ಜೆಗೇರಿಸುವ ವಿಷಯ ಏ. 25ರಂದು ನಿರ್ಧಾರವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆಯಲಿರುವ ಮಹತ್ವದ ಸಭೆಯಲ್ಲಿ ‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ರಚನೆ ಸಂಬಂಧ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿರುವುದರಿಂದ ಅಂದಿನ ಸಭೆ ಕುತೂಹಲ ಮೂಡಿಸಿದೆ. ಈ ಸಭೆಯಲ್ಲಿ ಗ್ರೇಟರ್ ಮೈಸೂರು ರಚನೆಗೆ ಒಲವು ತೋರಿದರೆ ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದಕ್ಕೆ ಜಿಲ್ಲಾಡಳಿತ ಬೇಕಾದ ತಯಾರಿ ಮಾಡಿಕೊಂಡಿದೆ.

ಒಂದು ವೇಳೆ ಗ್ರೇಟರ್ ಮೈಸೂರು ಪ್ರಸ್ತಾಪವನ್ನು ಮುಂದೂಡಿ ಚುನಾವಣೆ ನಡೆಸುವ ತೀರ್ಮಾನ ತೆಗೆದುಕೊಂಡರೆ ರಾಜಕೀಯ ಪಕ್ಷಗಳ ಮುಖಂಡರಲ್ಲಿ ಸಂತಸ ಮೂಡಲಿದೆ.

ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಮೈಸೂರು ವರ್ಷದಿಂದ ವರ್ಷಕ್ಕೆ ನಗರದ ನಾಲ್ಕೂ ದಿಕ್ಕುಗಳಲ್ಲಿ ವಿಸ್ತಾರಗೊಂಡಿರುವುದರಿಂದ ಮುಂದಿನ 30-40 ವರ್ಷಗಳ ಅಭಿವೃದ್ಧಿಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ನಗರಪಾಲಿಕೆಯನ್ನು ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮಹಾನಗರ ಪಾಲಿಕೆ ರಚನೆ ಮಾಡಬೇಕೆಂಬ ಕೂಗು ಎದ್ದಿತ್ತು. ಪಾಲಿಕೆಯಲ್ಲಿ ಬಿಜೆಪಿ ಆಡಳಿತದಲ್ಲಿ ಇದ್ದಾಗ ಈ ಪ್ರಸ್ತಾಪ ಚರ್ಚೆಗೆ ಬಂದಿತ್ತಾದರೂ ರಾಜ್ಯ ಸರ್ಕಾರಕ್ಕೆ ಅಧಿಕೃತವಾಗಿ ಪ್ರಸ್ತಾವನೆ ಕಳುಹಿಸಿರಲಿಲ್ಲ.

2025ರ ನ.14ರಂದು ಸದಸ್ಯರ ಐದು ವರ್ಷಗಳ ಅಧಿಕಾರಾವಧಿ ಮುಗಿದಿದ್ದು, ನಂತರ ಪ್ರಾದೇಶಿಕ ಆಯುಕ್ತರನ್ನು ಆಡಳಿತಾಧಿಕಾರಿ ಯನ್ನಾಗಿ ನೇಮಿಸಲಾಗಿದೆ. ಅವಧಿ ಮುಗಿದ ಮೇಲೆ ಚುನಾವಣೆ ನಡೆಸಬೇಕಾಗಿತ್ತಾದರೂ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ. ಟಿ. ದೇವೇಗೌಡ ಅವರು ಮೈಸೂರು ನಗರದ ಸುತ್ತಮುತ್ತಲ ಪ್ರದೇಶಗಳನ್ನು ಸೇರಿಸಿಕೊಂಡು ಬೃಹತ್ ಪಾಲಿಕೆ ಮಾಡಬೇಕೆಂಬ ಮನವಿ ಸಲ್ಲಿಸುವ ಜತೆಗೆ ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. ಇದರಿಂದಾಗಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್. ಕೆ. ಅತೀಕ್ ಅವರು ಎರಡು ತಿಂಗಳ ಹಿಂದೆ ಅಧಿಕಾರಿಗಳ ಸಭೆ ನಡೆಸಿ ವರದಿ ಸಲ್ಲಿಸಲು ಆಗಮಿಸಬೇಕಿತ್ತಾದರೂ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು. ಇದೀಗ ಕಾಲು ನೋವಿನಿಂದ ಗುಣಮುಖರಾಗಿ ಮೂರು ತಿಂಗಳ ಬಳಿಕ ತವರು ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದರಾಮಯ್ಯ ಅವರು 25ಕ್ಕೆ ಮಹತ್ವದ ಸಭೆ ನಡೆಸುವುದು ನಿಶ್ಚಿತವಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ನಗರಾಭಿವೃದ್ಧಿ, ಪೌರಾಡಳಿತ ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಈ ಬಗ್ಗೆ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಹೇಳಲಾಗಿದೆ.

ನಗರದ ಹೊರವಲಯದ ಹೂಟಗಳ್ಳಿ ನಗರಸಭೆ, ಕಡಕೊಳ, ಶ್ರೀರಾಂಪುರ, ಬೋಗಾದಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗಳಲ್ಲಿ ಆಡಳಿತಾಧಿಕಾರಿಗಳು ಆಡಳಿತ ನಿರ್ವಹಿಸುತ್ತಿದ್ದು, ಬೃಹತ್ ಮಹಾನಗರ ಪಾಲಿಕೆಯೊಂದಿಗೆ ಇವುಗಳ ಸೇರ್ಪಡೆಗೆ ಈಗಾಗಲೇ ಸಮ್ಮತಿ ಸಿಕ್ಕಿದೆ. ಅದೇ ರೀತಿ ಚಾಮುಂಡಿಬೆಟ್ಟ, ಇಲವಾಲ, ಸಿದ್ದಲಿಂಗಪುರದಲ್ಲೂ ಆಕ್ಷೇಪಣೆ ಇಲ್ಲವೆಂದು ನಿರ್ಣಯ ಕೈಗೊಂಡು ಜಿಲ್ಲಾಡಳಿತಕ್ಕೆ ಪತ್ರ ನೀಡಲಾಗಿದೆ. ಇದರಿಂದಾಗಿ ಬೃಹತ್ ಮಹಾನಗರ ಪಾಲಿಕೆ ರಚನೆಗೆ ಸಂಬಂಧಪಟ್ಟಂತೆ ಯಾವುದೇ ಆಕ್ಷೇಪಣೆಗಳು ಇಲ್ಲದಿರುವ ಬಗ್ಗೆ ಸಿಎಂಗೆ ಮಾಹಿತಿ ಒದಗಿಸಲಾಗುತ್ತದೆ ಎಂದು ಗೊತ್ತಾಗಿದೆ.

ಡಿಸಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ: ಸಿಎಂ ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜಿ. ಲಕ್ಷ್ಮಿಕಾಂತ ರೆಡ್ಡಿ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಿ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು. ನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸಿಫ್, ಮುಡಾ ಆಯುಕ್ತ ಎ. ಎನ್. ರಘನಂದನ್, ಉಪ ವಿಭಾಗಾಧಿಕಾರಿ ಕೆ. ಆರ್. ರಕ್ಷಿತ್, ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ವಿ. ಪ್ರಿಯದರ್ಶಿನಿ, ಹೂಟಗಳ್ಳಿ ನಗರಸಭೆ ಪೌರಾಯುಕ್ತ ಚಂದ್ರಶೇಖರ್, ಮುಖ್ಯಾಧಿಕಾರಿಗಳಾದ ಎಚ್. ಎಂ. ಸುರೇಶ್, ಎಚ್. ಆರ್. ದೀಪಾ, ಬಸವರಾಜು, ನಗರಪಾಲಿಕೆ ಉಪ ಆಯುಕ್ತ ಜಿ. ಎಸ್. ಸೋಮಶೇಖರ್, ಅಧಿಕ್ಷಕ ಅಭಿಯಂತರರಾದ ಕೆ. ಜೆ. ಸಿಂಧು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತರ ಆಸೀಫ್ ಇಕ್ಬಾಲ್ ಖಲೀಲ್, ಮುಡಾ ನಗರ ಯೋಜಕ ಸದಸ್ಯ ಶಿವರಾಮಯ್ಯ ಮತ್ತಿತರರು ಹಾಜರಿದ್ದು ಸಿಎಂ ಸಭೆಯಲ್ಲಿ ಚರ್ಚಿಸುವ ವಿಷಯಗಳ ಪ್ರಾತ್ಯಕ್ಷಿಕೆ ನೀಡಿದರು. ‌

ಬೃಹತ್ ಮಹಾನಗರ ಪಾಲಿಕೆ ರಚನೆ ಮಾಡಲು ಒಪ್ಪಿಗೆ ಸಿಕ್ಕಿದರೆ ಕನಿಷ್ಠ 2-3 ವರ್ಷಗಳ ಕಾಲ ಚುನಾವಣೆ ನಡೆಯುವುದು ಅನುಮಾನ. ಪಪಂಗಳು ಮತ್ತು ನಗರಸಭೆಯನ್ನು ಪಾಲಿಕೆಯೊಂದಿಗೆ ವಿಲೀನ ಮಾಡಿದರೆ ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಎಂಎಎಸ್ ಮಟ್ಟದ ಅಧಿಕಾರಿಗಳು ಬದಲಿ ಜಾಗ ನೋಡಿಕೊಳ್ಳಬೇಕಿದೆ. ಒಂದು ವೇಳೆ ಚುನಾವಣೆ ನಡೆದರೆ ರಾಜಕೀಯ ಪಕ್ಷಗಳ ಆಕಾಂಕ್ಷಿಗಳು ತಯಾರಿ ಮಾಡಿಕೊಳ್ಳುವುದು ಗ್ಯಾರಂಟಿಯಾಗಿದೆ.

 

ಆಂದೋಲನ ಡೆಸ್ಕ್

Recent Posts

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು: ಸೆ.5ರ ಪ್ರತಿಭಟನೆ ಹಿಂಪಡೆದ ಸಿಜೆಪಿ

ನವದೆಹಲಿ: ಸೆಪ್ಟೆಂಬರ್‌ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್‌ಗೆ…

11 hours ago

ನೀಟ್‌ ಪ್ರತಿಭಟನಾಕಾರರ ವಿರುದ್ಧದ ಎಫ್‌ಐಆರ್‌ ರದ್ದು

ನವದೆಹಲಿ: ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಸುಪ್ರೀಂಕೋರ್ಟ್‌ ರದ್ದುಪಡಿಸಿದೆ. ಜುಲೈನಲ್ಲಿ…

11 hours ago

ನೇಪಾಳ ಪ್ರವಾಹ | ಮೃತರ ಸಂಖ್ಯೆ 939ಕ್ಕೆ ಏರಿಕೆ, ಇನ್ನೂ ಸುಮಾರು 4,000 ಜನ ಕಣ್ಮರೆ

ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…

13 hours ago

ಮಡಿಕೇರಿ: ಕೆರೆಗೆ ಹಾರಿ ತಾಯಿ ಮಗಳು ಆತ್ಮಹತ್ಯೆ

ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…

13 hours ago

ಮಡಿಕೇರಿ: ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ!

ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್‌ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…

13 hours ago

ಓದುಗರ ಪತ್ರ: ನೀರು ಸೋರಿಕೆ ತಡೆಗಟ್ಟಿ

ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…

21 hours ago