Andolana originals

ದಸರಾ ಕವಿಗೋಷ್ಠಿಯಲ್ಲಿ ನಾಡಗೀತೆ ಜಾಗೃತಿಗೆ ನಿರ್ಧಾರ

ಪ್ರಶಾಂತ್ ಎಸ್.

ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ನೂರು ವರ್ಷ ಹಿನ್ನೆಲೆ 

ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ;

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪರಿಚಯಿಸಲು ತೀರ್ಮಾನ 

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ದಸರಾ ಕವಿಗೋಷ್ಠಿಯನ್ನು ಈ ಬಾರಿ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಬಿಎಂಶ್ರೀ ಸಭಾಂಗಣದಲ್ಲಿ ಆಯೋಜಿಸಲು ದಸರಾ ಕವಿ ಗೋಷ್ಠಿ ಉಪ ಸಮಿತಿ ನಿರ್ಧರಿಸಿದ್ದು, ದೇಶ-ವಿದೇಶಗಳ ಖ್ಯಾತನಾಮ ಕವಿಗಳನ್ನು ಕವಿಗೋಷ್ಠಿಗೆ ಆಹ್ವಾನಿಸಲು ನಿರ್ಧರಿಸಿದೆ.

ಸಾಮಾನ್ಯವಾಗಿ ದಸರಾ ಕವಿಗೋಷ್ಠಿಯನ್ನು ಈವರೆಗೆ ಜಗನ್ಮೋಹನ ಅರಮನೆ, ಮಾನವಿಕ ಸಭಾಂಗಣ ಅಥವಾ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿತ್ತು. ಆದರೆ, ಈ ಬಾರಿ ಕುವೆಂಪು ವಿರಚಿತ ನಾಡ ಗೀತೆಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಯಲ್ಲಿರುವ ೪೦೦ ಆಸನ ಸಾಮರ್ಥ್ಯದ ಬಿ.ಎಂ.ಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ ಆಯೋಜಿಸಲು ನಿರ್ಧರಿಸಲಾಗಿದ್ದು, ಆ ಮೂಲಕ ಕುವೆಂಪು ಅಧ್ಯಯನ ಸಂಸ್ಥೆಯ ಪರಿಚಯವನ್ನು ಕಾವ್ಯಾಸಕ್ತರಿಗೆ ಮಾಡಿಕೊಡಲು ಮುಂದಾಗಿದೆ.

ಅಂತಾರಾಷ್ಟ್ರೀಯ ಕವಿಗಳು ಆಗಮನ: ದಸರಾ ಮಹೋತ್ಸವದ ಒಂದು ಭಾಗವಾಗಿ ಕವಿ ಗೋಷ್ಠಿ ವಾಡಿಕೆಯಂತೆ ನಡೆದುಕೊಂಡು ಬಂದಿದೆ. ಕಾವ್ಯೋತ್ಸವವು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ವೇದಿಕೆಯಾಗಿದ್ದು, ಇಲ್ಲಿ ಕರ್ನಾಟಕ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯ ಹಾಗೂ ಹೊರದೇಶ ಗಳಿಂದಲೂ ಕವಿಗಳು ಆಗಮಿಸಿ ಕವನ ವಾಚನ ಮಾಡಲಿದ್ದಾರೆ.

ಕುವೆಂಪು ಅವರ ಸಮಗ್ರ ಚಿತ್ರಗಳು: ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಗೀತೆಗೆ ನೂರು ವರ್ಷಗಳು ತುಂಬಿವೆ. ಹೀಗಾಗಿ ಕುವೆಂಪು ವಿರಚಿತ ಕರ್ನಾಟಕ ನಾಡಗೀತೆ ಕವನದ ಹಸ್ತಪ್ರತಿ ನೀಡಲು ಉದ್ದೇಶಿಸಿದೆ. ಹಾಗೆಯೇ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಕುವೆಂಪು ಗ್ಯಾಲರಿಯಲ್ಲಿ ಕುವೆಂಪು ಅವರ ಸಮಗ್ರ ಬದುಕನ್ನು ಕಟ್ಟಿಕೊಡುವ ಅಪರೂಪದ ಚಿತ್ರಗಳಿರಲಿದ್ದು, ಇದನ್ನು ಸಾಹಿತ್ಯಾಸಕ್ತರು ಕಣ್ತುಂಬಿಕೊಳ್ಳಬಹುದಾಗಿದೆ.

” ಕುವೆಂಪು ಅವರ ‘ಕೊಳಲು’ ಕವನ ಸಂಕಲನ ೧೯೩೦ರಲ್ಲಿ ಪ್ರಕಟವಾಯಿತು. ಅದರಲ್ಲಿ ‘ಜಯ ಹೇ ಕರ್ಣಾಟಕ ಮಾತೆ’ ಕವನವೂ ಸೇರಿದೆ. ೨೦೦೪ರಲ್ಲಿ ಕರ್ನಾಟಕ ಸರ್ಕಾರ ಅಽಕೃತ ನಾಡಗೀತೆಯಾಗಿಸಿದೆ.”

” ನಾಡಗೀತೆಗೆ ೧೦೦ ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ನಾಡಗೀತೆಯ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಲಾಗಿದೆ. ವಿಶೇಷವಾಗಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಗ್ಗೆ ಸಾಹಿತ್ಯಾ ಸಕ್ತರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಲಾಗಿದೆ.”

-ಪ್ರೊ.ಎನ್.ಕೆ.ಲೋಲಾಕ್ಷಿ, ಕಾರ್ಯಾಧ್ಯಕ್ಷರು, ದಸರಾ ಕವಿಗೋಷ್ಠಿ ಉಪ ಸಮಿತಿ

ಆಂದೋಲನ ಡೆಸ್ಕ್

Recent Posts

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

30 mins ago

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

41 mins ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

54 mins ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

1 hour ago

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…

1 hour ago

ಹೈಕೋರ್ಟ್‌ ಮೆಟ್ಟಿಲೇರಿದ ಮಲ್ಲಿಕಾರ್ಜುನ ಮುತ್ಯಾ

ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…

2 hours ago