Andolana originals

ದಸರಾ ಕವಿಗೋಷ್ಠಿಯಲ್ಲಿ ನಾಡಗೀತೆ ಜಾಗೃತಿಗೆ ನಿರ್ಧಾರ

ಪ್ರಶಾಂತ್ ಎಸ್.

ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ನೂರು ವರ್ಷ ಹಿನ್ನೆಲೆ 

ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ;

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪರಿಚಯಿಸಲು ತೀರ್ಮಾನ 

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ದಸರಾ ಕವಿಗೋಷ್ಠಿಯನ್ನು ಈ ಬಾರಿ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಬಿಎಂಶ್ರೀ ಸಭಾಂಗಣದಲ್ಲಿ ಆಯೋಜಿಸಲು ದಸರಾ ಕವಿ ಗೋಷ್ಠಿ ಉಪ ಸಮಿತಿ ನಿರ್ಧರಿಸಿದ್ದು, ದೇಶ-ವಿದೇಶಗಳ ಖ್ಯಾತನಾಮ ಕವಿಗಳನ್ನು ಕವಿಗೋಷ್ಠಿಗೆ ಆಹ್ವಾನಿಸಲು ನಿರ್ಧರಿಸಿದೆ.

ಸಾಮಾನ್ಯವಾಗಿ ದಸರಾ ಕವಿಗೋಷ್ಠಿಯನ್ನು ಈವರೆಗೆ ಜಗನ್ಮೋಹನ ಅರಮನೆ, ಮಾನವಿಕ ಸಭಾಂಗಣ ಅಥವಾ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿತ್ತು. ಆದರೆ, ಈ ಬಾರಿ ಕುವೆಂಪು ವಿರಚಿತ ನಾಡ ಗೀತೆಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಯಲ್ಲಿರುವ ೪೦೦ ಆಸನ ಸಾಮರ್ಥ್ಯದ ಬಿ.ಎಂ.ಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ ಆಯೋಜಿಸಲು ನಿರ್ಧರಿಸಲಾಗಿದ್ದು, ಆ ಮೂಲಕ ಕುವೆಂಪು ಅಧ್ಯಯನ ಸಂಸ್ಥೆಯ ಪರಿಚಯವನ್ನು ಕಾವ್ಯಾಸಕ್ತರಿಗೆ ಮಾಡಿಕೊಡಲು ಮುಂದಾಗಿದೆ.

ಅಂತಾರಾಷ್ಟ್ರೀಯ ಕವಿಗಳು ಆಗಮನ: ದಸರಾ ಮಹೋತ್ಸವದ ಒಂದು ಭಾಗವಾಗಿ ಕವಿ ಗೋಷ್ಠಿ ವಾಡಿಕೆಯಂತೆ ನಡೆದುಕೊಂಡು ಬಂದಿದೆ. ಕಾವ್ಯೋತ್ಸವವು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ವೇದಿಕೆಯಾಗಿದ್ದು, ಇಲ್ಲಿ ಕರ್ನಾಟಕ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯ ಹಾಗೂ ಹೊರದೇಶ ಗಳಿಂದಲೂ ಕವಿಗಳು ಆಗಮಿಸಿ ಕವನ ವಾಚನ ಮಾಡಲಿದ್ದಾರೆ.

ಕುವೆಂಪು ಅವರ ಸಮಗ್ರ ಚಿತ್ರಗಳು: ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಗೀತೆಗೆ ನೂರು ವರ್ಷಗಳು ತುಂಬಿವೆ. ಹೀಗಾಗಿ ಕುವೆಂಪು ವಿರಚಿತ ಕರ್ನಾಟಕ ನಾಡಗೀತೆ ಕವನದ ಹಸ್ತಪ್ರತಿ ನೀಡಲು ಉದ್ದೇಶಿಸಿದೆ. ಹಾಗೆಯೇ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಕುವೆಂಪು ಗ್ಯಾಲರಿಯಲ್ಲಿ ಕುವೆಂಪು ಅವರ ಸಮಗ್ರ ಬದುಕನ್ನು ಕಟ್ಟಿಕೊಡುವ ಅಪರೂಪದ ಚಿತ್ರಗಳಿರಲಿದ್ದು, ಇದನ್ನು ಸಾಹಿತ್ಯಾಸಕ್ತರು ಕಣ್ತುಂಬಿಕೊಳ್ಳಬಹುದಾಗಿದೆ.

” ಕುವೆಂಪು ಅವರ ‘ಕೊಳಲು’ ಕವನ ಸಂಕಲನ ೧೯೩೦ರಲ್ಲಿ ಪ್ರಕಟವಾಯಿತು. ಅದರಲ್ಲಿ ‘ಜಯ ಹೇ ಕರ್ಣಾಟಕ ಮಾತೆ’ ಕವನವೂ ಸೇರಿದೆ. ೨೦೦೪ರಲ್ಲಿ ಕರ್ನಾಟಕ ಸರ್ಕಾರ ಅಽಕೃತ ನಾಡಗೀತೆಯಾಗಿಸಿದೆ.”

” ನಾಡಗೀತೆಗೆ ೧೦೦ ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ನಾಡಗೀತೆಯ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಲಾಗಿದೆ. ವಿಶೇಷವಾಗಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಗ್ಗೆ ಸಾಹಿತ್ಯಾ ಸಕ್ತರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಲಾಗಿದೆ.”

-ಪ್ರೊ.ಎನ್.ಕೆ.ಲೋಲಾಕ್ಷಿ, ಕಾರ್ಯಾಧ್ಯಕ್ಷರು, ದಸರಾ ಕವಿಗೋಷ್ಠಿ ಉಪ ಸಮಿತಿ

ಆಂದೋಲನ ಡೆಸ್ಕ್

Recent Posts

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

1 hour ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

3 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

4 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

5 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

8 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

9 hours ago