Andolana originals

ದಸರಾ ಕವಿಗೋಷ್ಠಿಯಲ್ಲಿ ನಾಡಗೀತೆ ಜಾಗೃತಿಗೆ ನಿರ್ಧಾರ

ಪ್ರಶಾಂತ್ ಎಸ್.

ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ನೂರು ವರ್ಷ ಹಿನ್ನೆಲೆ 

ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ;

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪರಿಚಯಿಸಲು ತೀರ್ಮಾನ 

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ದಸರಾ ಕವಿಗೋಷ್ಠಿಯನ್ನು ಈ ಬಾರಿ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಬಿಎಂಶ್ರೀ ಸಭಾಂಗಣದಲ್ಲಿ ಆಯೋಜಿಸಲು ದಸರಾ ಕವಿ ಗೋಷ್ಠಿ ಉಪ ಸಮಿತಿ ನಿರ್ಧರಿಸಿದ್ದು, ದೇಶ-ವಿದೇಶಗಳ ಖ್ಯಾತನಾಮ ಕವಿಗಳನ್ನು ಕವಿಗೋಷ್ಠಿಗೆ ಆಹ್ವಾನಿಸಲು ನಿರ್ಧರಿಸಿದೆ.

ಸಾಮಾನ್ಯವಾಗಿ ದಸರಾ ಕವಿಗೋಷ್ಠಿಯನ್ನು ಈವರೆಗೆ ಜಗನ್ಮೋಹನ ಅರಮನೆ, ಮಾನವಿಕ ಸಭಾಂಗಣ ಅಥವಾ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿತ್ತು. ಆದರೆ, ಈ ಬಾರಿ ಕುವೆಂಪು ವಿರಚಿತ ನಾಡ ಗೀತೆಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಯಲ್ಲಿರುವ ೪೦೦ ಆಸನ ಸಾಮರ್ಥ್ಯದ ಬಿ.ಎಂ.ಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ ಆಯೋಜಿಸಲು ನಿರ್ಧರಿಸಲಾಗಿದ್ದು, ಆ ಮೂಲಕ ಕುವೆಂಪು ಅಧ್ಯಯನ ಸಂಸ್ಥೆಯ ಪರಿಚಯವನ್ನು ಕಾವ್ಯಾಸಕ್ತರಿಗೆ ಮಾಡಿಕೊಡಲು ಮುಂದಾಗಿದೆ.

ಅಂತಾರಾಷ್ಟ್ರೀಯ ಕವಿಗಳು ಆಗಮನ: ದಸರಾ ಮಹೋತ್ಸವದ ಒಂದು ಭಾಗವಾಗಿ ಕವಿ ಗೋಷ್ಠಿ ವಾಡಿಕೆಯಂತೆ ನಡೆದುಕೊಂಡು ಬಂದಿದೆ. ಕಾವ್ಯೋತ್ಸವವು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ವೇದಿಕೆಯಾಗಿದ್ದು, ಇಲ್ಲಿ ಕರ್ನಾಟಕ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯ ಹಾಗೂ ಹೊರದೇಶ ಗಳಿಂದಲೂ ಕವಿಗಳು ಆಗಮಿಸಿ ಕವನ ವಾಚನ ಮಾಡಲಿದ್ದಾರೆ.

ಕುವೆಂಪು ಅವರ ಸಮಗ್ರ ಚಿತ್ರಗಳು: ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಗೀತೆಗೆ ನೂರು ವರ್ಷಗಳು ತುಂಬಿವೆ. ಹೀಗಾಗಿ ಕುವೆಂಪು ವಿರಚಿತ ಕರ್ನಾಟಕ ನಾಡಗೀತೆ ಕವನದ ಹಸ್ತಪ್ರತಿ ನೀಡಲು ಉದ್ದೇಶಿಸಿದೆ. ಹಾಗೆಯೇ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಕುವೆಂಪು ಗ್ಯಾಲರಿಯಲ್ಲಿ ಕುವೆಂಪು ಅವರ ಸಮಗ್ರ ಬದುಕನ್ನು ಕಟ್ಟಿಕೊಡುವ ಅಪರೂಪದ ಚಿತ್ರಗಳಿರಲಿದ್ದು, ಇದನ್ನು ಸಾಹಿತ್ಯಾಸಕ್ತರು ಕಣ್ತುಂಬಿಕೊಳ್ಳಬಹುದಾಗಿದೆ.

” ಕುವೆಂಪು ಅವರ ‘ಕೊಳಲು’ ಕವನ ಸಂಕಲನ ೧೯೩೦ರಲ್ಲಿ ಪ್ರಕಟವಾಯಿತು. ಅದರಲ್ಲಿ ‘ಜಯ ಹೇ ಕರ್ಣಾಟಕ ಮಾತೆ’ ಕವನವೂ ಸೇರಿದೆ. ೨೦೦೪ರಲ್ಲಿ ಕರ್ನಾಟಕ ಸರ್ಕಾರ ಅಽಕೃತ ನಾಡಗೀತೆಯಾಗಿಸಿದೆ.”

” ನಾಡಗೀತೆಗೆ ೧೦೦ ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ನಾಡಗೀತೆಯ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಲಾಗಿದೆ. ವಿಶೇಷವಾಗಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಗ್ಗೆ ಸಾಹಿತ್ಯಾ ಸಕ್ತರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಲಾಗಿದೆ.”

-ಪ್ರೊ.ಎನ್.ಕೆ.ಲೋಲಾಕ್ಷಿ, ಕಾರ್ಯಾಧ್ಯಕ್ಷರು, ದಸರಾ ಕವಿಗೋಷ್ಠಿ ಉಪ ಸಮಿತಿ

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

9 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

12 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

16 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago