Andolana originals

ದಸರಾ ಕವಿಗೋಷ್ಠಿಯಲ್ಲಿ ನಾಡಗೀತೆ ಜಾಗೃತಿಗೆ ನಿರ್ಧಾರ

ಪ್ರಶಾಂತ್ ಎಸ್.

ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ನೂರು ವರ್ಷ ಹಿನ್ನೆಲೆ 

ಮಾನಸ ಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ;

ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಚಟುವಟಿಕೆಗಳ ಬಗ್ಗೆ ಪರಿಚಯಿಸಲು ತೀರ್ಮಾನ 

ಮೈಸೂರು: ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ದಸರಾ ಕವಿಗೋಷ್ಠಿಯನ್ನು ಈ ಬಾರಿ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಬಿಎಂಶ್ರೀ ಸಭಾಂಗಣದಲ್ಲಿ ಆಯೋಜಿಸಲು ದಸರಾ ಕವಿ ಗೋಷ್ಠಿ ಉಪ ಸಮಿತಿ ನಿರ್ಧರಿಸಿದ್ದು, ದೇಶ-ವಿದೇಶಗಳ ಖ್ಯಾತನಾಮ ಕವಿಗಳನ್ನು ಕವಿಗೋಷ್ಠಿಗೆ ಆಹ್ವಾನಿಸಲು ನಿರ್ಧರಿಸಿದೆ.

ಸಾಮಾನ್ಯವಾಗಿ ದಸರಾ ಕವಿಗೋಷ್ಠಿಯನ್ನು ಈವರೆಗೆ ಜಗನ್ಮೋಹನ ಅರಮನೆ, ಮಾನವಿಕ ಸಭಾಂಗಣ ಅಥವಾ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಆಯೋಜಿಸಿಕೊಂಡು ಬರಲಾಗುತ್ತಿತ್ತು. ಆದರೆ, ಈ ಬಾರಿ ಕುವೆಂಪು ವಿರಚಿತ ನಾಡ ಗೀತೆಗೆ ನೂರು ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ಯಲ್ಲಿರುವ ೪೦೦ ಆಸನ ಸಾಮರ್ಥ್ಯದ ಬಿ.ಎಂ.ಶ್ರೀ ಸಭಾಂಗಣದಲ್ಲಿ ದಸರಾ ಕವಿಗೋಷ್ಠಿ ಆಯೋಜಿಸಲು ನಿರ್ಧರಿಸಲಾಗಿದ್ದು, ಆ ಮೂಲಕ ಕುವೆಂಪು ಅಧ್ಯಯನ ಸಂಸ್ಥೆಯ ಪರಿಚಯವನ್ನು ಕಾವ್ಯಾಸಕ್ತರಿಗೆ ಮಾಡಿಕೊಡಲು ಮುಂದಾಗಿದೆ.

ಅಂತಾರಾಷ್ಟ್ರೀಯ ಕವಿಗಳು ಆಗಮನ: ದಸರಾ ಮಹೋತ್ಸವದ ಒಂದು ಭಾಗವಾಗಿ ಕವಿ ಗೋಷ್ಠಿ ವಾಡಿಕೆಯಂತೆ ನಡೆದುಕೊಂಡು ಬಂದಿದೆ. ಕಾವ್ಯೋತ್ಸವವು ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ವೇದಿಕೆಯಾಗಿದ್ದು, ಇಲ್ಲಿ ಕರ್ನಾಟಕ ಮಾತ್ರವಲ್ಲದೇ ಬೇರೆ ಬೇರೆ ರಾಜ್ಯ ಹಾಗೂ ಹೊರದೇಶ ಗಳಿಂದಲೂ ಕವಿಗಳು ಆಗಮಿಸಿ ಕವನ ವಾಚನ ಮಾಡಲಿದ್ದಾರೆ.

ಕುವೆಂಪು ಅವರ ಸಮಗ್ರ ಚಿತ್ರಗಳು: ಕುವೆಂಪು ವಿರಚಿತ ‘ಜಯ ಭಾರತ ಜನನಿಯ ತನುಜಾತೆ’ ಗೀತೆಗೆ ನೂರು ವರ್ಷಗಳು ತುಂಬಿವೆ. ಹೀಗಾಗಿ ಕುವೆಂಪು ವಿರಚಿತ ಕರ್ನಾಟಕ ನಾಡಗೀತೆ ಕವನದ ಹಸ್ತಪ್ರತಿ ನೀಡಲು ಉದ್ದೇಶಿಸಿದೆ. ಹಾಗೆಯೇ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿರುವ ಕುವೆಂಪು ಗ್ಯಾಲರಿಯಲ್ಲಿ ಕುವೆಂಪು ಅವರ ಸಮಗ್ರ ಬದುಕನ್ನು ಕಟ್ಟಿಕೊಡುವ ಅಪರೂಪದ ಚಿತ್ರಗಳಿರಲಿದ್ದು, ಇದನ್ನು ಸಾಹಿತ್ಯಾಸಕ್ತರು ಕಣ್ತುಂಬಿಕೊಳ್ಳಬಹುದಾಗಿದೆ.

” ಕುವೆಂಪು ಅವರ ‘ಕೊಳಲು’ ಕವನ ಸಂಕಲನ ೧೯೩೦ರಲ್ಲಿ ಪ್ರಕಟವಾಯಿತು. ಅದರಲ್ಲಿ ‘ಜಯ ಹೇ ಕರ್ಣಾಟಕ ಮಾತೆ’ ಕವನವೂ ಸೇರಿದೆ. ೨೦೦೪ರಲ್ಲಿ ಕರ್ನಾಟಕ ಸರ್ಕಾರ ಅಽಕೃತ ನಾಡಗೀತೆಯಾಗಿಸಿದೆ.”

” ನಾಡಗೀತೆಗೆ ೧೦೦ ವರ್ಷಗಳು ತುಂಬಿರುವ ಹಿನ್ನೆಲೆಯಲ್ಲಿ ಕನ್ನಡಿಗರಿಗೆ ನಾಡಗೀತೆಯ ಬಗ್ಗೆ ಅರಿವು ಮೂಡಿಸಲು ನಿರ್ಧರಿಸಲಾಗಿದೆ. ವಿಶೇಷವಾಗಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಬಗ್ಗೆ ಸಾಹಿತ್ಯಾ ಸಕ್ತರಿಗೆ ಪರಿಚಯ ಮಾಡಿಕೊಡುವ ಉದ್ದೇಶವನ್ನು ಹೊಂದಲಾಗಿದೆ.”

-ಪ್ರೊ.ಎನ್.ಕೆ.ಲೋಲಾಕ್ಷಿ, ಕಾರ್ಯಾಧ್ಯಕ್ಷರು, ದಸರಾ ಕವಿಗೋಷ್ಠಿ ಉಪ ಸಮಿತಿ

ಆಂದೋಲನ ಡೆಸ್ಕ್

Recent Posts

ನಾಳೆ ರಾಜ್ಯಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ…

16 mins ago

ಓದುಗರ ಪತ್ರ: ನೀಟು…. ಘಾಟು !

ನೀಟು.... ಘಾಟು ! ಆಗ, ಎಷ್ಟೊಂದು ಶಿಸ್ತು, ಕ್ರಮವಾಗಿ ನಡೆಯುತ್ತಿತ್ತು? ಪರೀಕ್ಷೆ “ ನೀಟ್ “! ಈಗ, ಇದಕ್ಕೂ ಅಂಟಿಬಿಟ್ಟಿತಲ್ಲ…

2 hours ago

ಓದುಗರ ಪತ್ರ: ಸಾರಿಗೆ ನಿಗಮದ ಬಸ್‌ಗಳಲ್ಲಿ ಮೊಬೈಲ್ ಹಾವಳಿ ತಡೆಗಟ್ಟಿ

ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದ ರೀತಿ ಮೊಬೈಲ್ ಉಪಯೋಗಿಸಬಾರದೆಂದು ನಿಯಮವನ್ನು ಜಾರಿಗೆ ತಂದು ಎರಡು ವರ್ಷಗಳೇ…

2 hours ago

ಓದುಗರ ಪತ್ರ: ಶಾಲಾ ವಾಹನ ಮಾಸಿಕ ಶುಲ್ಕ ಏರಿಕೆ ತಡೆಗೆ ಕ್ರಮ ಅಗತ್ಯ

ಡೀಸೆಲ್ ಬೆಲೆ ಏರಿಕೆ, ಬಿಡಿಭಾಗಗಳ ದುಬಾರಿ ವೆಚ್ಚ ಮತ್ತು ವಿಮೆ, ತೆರಿಗೆಗಳ ಹೆಚ್ಚಳದಿಂದಾಗಿ ಖಾಸಗಿ ಶಾಲಾ ವಾಹನಗಳ ಮಾಸಿಕ ಶುಲ್ಕವನ್ನು…

2 hours ago

ಹೋಂ ಸ್ಟೇಗಳ ದಾಖಲೆ ಪರಿಶೀಲನೆ ಚುರುಕು

ನವೀನ್ ಡಿಸೋಜ ಕೊಡಗಿನ ಹೋಂಸ್ಟೇವೊಂದರಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮ; ಜಂಟಿ ಸರ್ವೇ ಆರಂಭ ಮಡಿಕೇರಿ: ಹೋಂಸ್ಟೇಗಳಿಗೆ…

5 hours ago

ಅವಳಿ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಕಡಿಮೆ ಮಳೆ

ಭೇರ್ಯ ಮಹೇಶ್ ಬರಪೀಡಿತ ತಾಲ್ಲೂಕುಗಳು ಎಂದು ಘೋಷಿಸಲು ರೈತ ಮುಖಂಡರ ಆಗ್ರಹ ಕೆ.ಆರ್.ನಗರ: ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಪ್ರಸಿದ್ಧಿಯಾಗಿರುವ…

5 hours ago