Andolana originals

ಕೊಡಗು ಜಿಲ್ಲೆಯಲ್ಲಿ ದೀಪಾವಳಿ ಆಚರಣೆ ಸಂಭ್ರಮ..!

ನವೀನ್ ಡಿಸೋಜ

ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ ಮನವಿ

ಮಡಿಕೇರಿ: ದಸರಾ, ಕಾವೇರಿ ಜಾತ್ರೆಯ ಬೆನ್ನಲ್ಲೇ ಜಿಲ್ಲೆಯಲ್ಲಿ ಈಗ ದೀಪಾವಳಿ ಸಂಭ್ರಮ ಮನೆ ಮಾಡಿದೆ. ಜಿಲ್ಲೆಯಾದ್ಯಂತ ಪಟಾಕಿ ವ್ಯಾಪಾರದ ಭರಾಟೆ ಜೋರಾಗಿದೆ. ಮತ್ತೊಂದೆಡೆ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಜಿಲ್ಲಾಡಳಿತ ಹಸಿರು ಪಟಾಕಿಗಳ ಬಳಕೆ ಸಂಬಂಧ ಪಟಾಕಿ ಮಳಿಗೆಗಳ ಮೇಲೆ ಹದ್ದಿನ ಕಣ್ಣಿಟ್ಟಿವೆ.

ಬೆಳಕಿನ ಹಬ್ಬ ದೀಪಾವಳಿಯನ್ನು ಕೊಡಗು ಜಿಲ್ಲೆಯಲ್ಲಿಯೂ ಸಂಭ್ರಮ ದಿಂದ ಆಚರಿಸಲಾಗುತ್ತಿದೆ. ಮನೆಗಳಲ್ಲಿ, ಅಂಗಡಿಗಳಲ್ಲಿ ವಿಶೇಷ ಅಲಂಕಾರ, ಪೂಜೆ ನಡೆಯುತ್ತಿದೆ. ಎಲ್ಲೆಡೆ ದೀಪಗಳು ಮತ್ತು ಪಟಾಕಿಗಳ ಖರೀದಿ ಜೋರಾಗಿ ನಡೆದಿದೆ. ಜಿಲ್ಲೆಯಲ್ಲಿ ಪಟಾಕಿ ಮಳಿಗೆಗಳನ್ನು ತೆರೆಯಲಾಗಿದ್ದು, ಜಿಲ್ಲಾಡಳಿತ, ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಅಗ್ನಿ ಶಾಮಕ ಇಲಾಖೆಯ ನಿರ್ದೇಶನದಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ. ದೀಪಾವಳಿ ಹಬ್ಬದಲ್ಲಿ ವಾಯು ಮಾಲಿನ್ಯ, ಯಾವುದೇ ಅಹಿತಕರ ಘಟನೆಗಳಾಗದಂತೆ ಎಚ್ಚರ ವಹಿಸಲಾಗಿದೆ.

ಜಿಲ್ಲೆಯಲ್ಲಿ ಪಟಾಕಿ ಮಳಿಗೆಗಳನ್ನು ತೆರೆದಿರುವವರಿಗೆ ಸುರಕ್ಷತೆ ಮತ್ತು ಮಾಲಿನ್ಯ ನಿಯಂತ್ರಣ ಕುರಿತು ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿ ವ್ಯಾಪಾರಕ್ಕೆ ಅನುಮತಿಸಲಾಗಿದೆ. ಅ.೧೯ರಿಂದ ಲಾಗಿದೆ. ಮಡಿಕೇರಿಯ ಗಾಂಧಿ ಮೈದಾನದಲ್ಲಿ ೬ ಮಳಿಗೆಗಳು ಸೇರಿದಂತೆ ಒಟ್ಟು ೪೬ ಮಳಿಗೆಗಳಿಗೆ ಜಿಲ್ಲೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಮಳಿಗೆಗಳಲ್ಲಿ ಬೆಂಕಿ ಅವಘಡಗಳಾಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವುದರ ಜತೆಗೆ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಲು ಸೂಚಿಸಲಾಗಿದೆ. ಅಲ್ಲದೇ ಯಾವುದೇ ಕಾರಣಕ್ಕೂ ನಿಯಮ, ಷರತ್ತುಗಳಿಗೆ ಬದ್ಧರಾಗಿರುತ್ತೇವೆಂದು ಪ್ರತಿ ವ್ಯಾಪಾರಿಯಿಂದಲೂ ೧೦೦ ರೂ. ಛಾಪಾ ಕಾಗದದಲ್ಲಿ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ.

ದೇಶದಲ್ಲಿಯೇ ಅತಿ ಶುದ್ಧ ಗಾಳಿ ಹೊಂದಿರುವ ಪ್ರದೇಶಗಳಲ್ಲೊಂದಾದ ಮಡಿಕೇರಿ ನಗರ ಸೇರಿದಂತೆ ಕೊಡಗಿನಾದ್ಯಂತ ದೀಪಾವಳಿಗೂ ಒಂದು ವಾರದ ಮೊದಲು ಮತ್ತು ಹಬ್ಬದ ಒಂದು ವಾರದ ನಂತರ ವಾಯು ಮಾಲಿನ್ಯದ ಕುರಿತು ದತ್ತಾಂಶಗಳನ್ನು ಕಲೆಹಾಕಲಾಗುತ್ತಿದೆ. ಮಾಲಿನ್ಯ ನಿಯಂತ್ರಣ ಮಂಡಳಿ ಅ.೧೩ರಿಂದಲೇ ಮಾನಿಟರಿಂಗ್ ಆರಂಭಿಸಿದ್ದು, ಇದು ಅ.೨೭ರವರೆಗೆ ಮುಂದುವರಿಯಲಿದೆ. ಇದಲ್ಲದೇ ದೀಪಾವಳಿ ದಿನಗಳಂದು ರಾತ್ರಿ ವೇಳೆ ಸಿಡಿಸಲು ಅನುಮತಿ ಸಲಾದ ಪಟಾಕಿಗಳನ್ನು ಮಾತ್ರ ಬಳಸಲಾಗು ತ್ತಿದೆಯೇ ಎಂಬುದರ ಕುರಿತು ಮಾಲಿನ್ಯ ನಿಯಂತ್ರಣ ಮಂಡಳಿ ನಿಗಾ ವಹಿಸಲಿದೆ.

” ೨೦೨೫ನೇ ಸಾಲಿನ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಸಿಡಿತದಿಂದ ಉಂಟಾಗುವ ಶಬ್ದ, ವಾಯು ಮಾಲಿನ್ಯವನ್ನು ನಿಯಂತ್ರಣದಲ್ಲಿಡಲು ಹಾಗೂ ಸಾರ್ವಜನಿಕ ಆಸ್ತಿ ಮತ್ತು ಆರೋಗ್ಯ ಸಂರಕ್ಷಣೆಯ ಹಿತದೃಷ್ಟಿಯಿಂದ ಭಾರತ ಸರ್ಕಾರದ ಪರಿಸರ ನಿಯಮಾವಳಿ ಅಡಿಯಲ್ಲಿ ನಿಗದಿಪಡಿಸಿರುವ ಮಾನಕಗಳನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು. ಯಾವುದೇ ಕ್ರಮಗಳನ್ನು ಉಲ್ಲಂಘಿಸಿದರೆ, ಅದಕ್ಕೆ ಕಾರಣರಾದವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಪರಿಸರ ಸ್ನೇಹಿ ದೀಪಾವಳಿ ಆಚರಿಸಲು ಸಾರ್ವಜನಿಕರು ಸಹಕರಿಸಬೇಕು.”

-ವೆಂಕಟ್ ರಾಜಾ, ಕೊಡಗು ಜಿಲ್ಲಾಧಿಕಾರಿ

” ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ. ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳಿಗೆ ಸಂಬಂಧಪಟ್ಟ ಇಲಾಖೆಗಳ ಅನುಮತಿ ಪಡೆಯಬೇಕು. ೧೨೫ ಡೆಸಿಬಲ್‌ಗಳಿಗಿಂತ ಹೆಚ್ಚು ಶಬ್ದ ಉಂಟುಮಾಡುವ ಪಟಾಕಿಗಳ ದಾಸ್ತಾನು, ಮಾರಾಟ ಹಾಗೂ ಬಳಕೆಯನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ. ರಾತ್ರಿ ೮ ರಿಂದ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ.ಆರ್. ಕೋಡ್ ಇರುವ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು. ದಿನದ ಯಾವುದೇ ಸಮಯದಲ್ಲಿ ನಿಶ್ಶಬ್ದ ವಲಯಗಳೆಂದು ಘೋಷಿಸಲ್ಪಟ್ಟಿರುವ ಸ್ಥಳಗಳ (ಆಸ್ಪತ್ರೆ, ಶಾಲೆ, ಪ್ರಾರ್ಥನಾಮಂದಿರ, ವೃದ್ಧಾಶ್ರಮ ಇತ್ಯಾದಿ) ಸುತ್ತ ಮುತ್ತ ಯಾವುದೇ ರೀತಿಯ ಶಬ್ದ ಉಂಟುಮಾಡುವ ಪಟಾಕಿ ಹಾಗೂ ಸಿಡಿಮದ್ದುಗಳ ಬಳಕೆಯನ್ನು ನಿಷೇಧಿಸಲಾಗಿದೆ.”

” ದೀಪಾವಳಿ ಸಂದರ್ಭದಲ್ಲಿ ವಾಯು ಮಾಲಿನ್ಯ, ಶಬ್ದ ಮಾಲಿನ್ಯ ಉಂಟಾಗದಂತೆ ಎಚ್ಚರ ವಹಿಸಲಾಗಿದೆ. ಇಲಾಖೆ ಅಧಿಕಾರಿಗಳು ಪಟಾಕಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲಿಸುವುದರ ಜತೆಗೆ, ಹಬ್ಬದ ದಿನಗಳಲ್ಲಿ ರಾತ್ರಿ ವೇಳೆ ಪಟಾಕಿಗಳ ಬಳಕೆಯ ಮೇಲೆಯೂ ನಿಗಾ ವಹಿಸಿದ್ದಾರೆ. ನಿಯಮ ಉಲ್ಲಂಘನೆ ಕಂಡುಬಂದರೆ ಕ್ರಮ ಕೈಗೊಳ್ಳುವ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ”

-ರಘುರಾಮ್, ಜಿಲ್ಲಾ ಮಾಲಿನ್ಯ ನಿಯಂತ್ರಣ ಅಧಿಕಾರಿ

ಆಂದೋಲನ ಡೆಸ್ಕ್

Recent Posts

ಶುಶ್ರೂಷೆ ವೃತ್ತಿಗೆ ಮೆರುಗು ನೀಡಿದ ಫ್ಲಾರೆನ್ಸ್ ನೈಟಿಂಗೇಲ್

ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ…

2 hours ago

ಜನಮೆಚ್ಚುಗೆ ಗಳಿಸಿದ ರಾಜ್ಯಮಟ್ಟದ ಯಿಫಾ ಹಾಕಿ

ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು…

2 hours ago

ಮಾರುಕಟ್ಟೆ ಬಂದ್ ಭೀತಿ; ಹೊಗೆಸೊಪ್ಪು ತಂದ ರೈತರ ಪರದಾಟ

ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ…

2 hours ago

ಬಂಡೀಪಾಳ್ಯದಲ್ಲಿ ರೇಷ್ಮೆಗೂಡು ಮಾರುಕಟ್ಟೆ ನಿರ್ಮಾಣ ಶೀಘ್ರ ಆರಂಭ

ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ…

2 hours ago

ನೂರು ಸಾವಿರದ ಗಡಿ ದಾಟಿದ ಆಂದೋಲನ ಇನ್ ಸ್ಟಾ ಪೇಜ್ ಹಿಂಬಾಲಕರು

‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ…

2 hours ago

ದುಸ್ಥಿತಿಯಲ್ಲಿ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆ ಕಟ್ಟಡ

ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ…

2 hours ago