Andolana originals

‘ದೀಪಾವಳಿ: ಪಟಾಕಿ ಬದಲು ದೀಪ ಹಚ್ಚಿʼ

ಪಟಾಕಿ ಮಾರಾಟ ಮಳಿಗೆ ತೆರೆಯಲು ಐದು ಇಲಾಖೆಗಳ ಅಭಿಪ್ರಾಯ ಕಡ್ಡಾಯ

 

ಚಾಮರಾಜನಗರ: ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟ ನಿರ್ದೇಶನ ನೀಡಿದ್ದು, ಅದರಂತೆ ರಾತ್ರಿ ೮ ರಿಂದ ೧೦ ಗಂಟೆಯವರೆಗೆ ಮಾತ್ರ ಪಟಾಕಿಗಳನ್ನು ಸಿಡಿಸಲು ಅವಕಾಶ ನೀಡಲಾಗಿದೆ. ೧೨೫ ಡೆಸಿಬಲ್‌ಗಿಂತ ಕಡಿಮೆ ಶಬ್ದದ ಹಸಿರು ಪಟಾಕಿಗಳನ್ನೇ ಬಳಸಬೇಕಿದೆ. ಸರ್ವೋಚ್ಚ ನ್ಯಾಯಾಲಯ ಅನುಮತಿಸಿರುವ ಹಸಿರು ಪಟಾಕಿಗಳನ್ನು ಬಿಟ್ಟು ಇತರ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ.

ಚಾಮರಾಜನಗರ ಸೇರಿದಂತೆ ಎಲ್ಲಿಯೇ ಆಗಲಿ ಪಟಾಕಿ ಮಾರಾಟ ಮಾಡುವವರು ಹಾಗೂ ಪಟಾಕಿ ಸಂಗ್ರಹಿಸುವ ಗೋದಾಮುಗಳ ಮಾಲೀಕರು ಪೊಲೀಸ್ ಠಾಣೆ, ಅಗ್ನಿ ಶಾಮಕ ಠಾಣೆ, ಪರಿಸರ ಇಲಾಖೆ, ತಹಸಿ ಲ್ದಾರ್ ಹಾಗೂ ನಗರಸಭೆ ಅಥವಾ ಸಂಬಂಧಿಸಿದ ಸ್ಥಳೀಯ ಆಡಳಿತದ ಅಭಿಪ್ರಾಯ ಪಡೆಯಬೇಕಿದೆ. ಇದರ ಆಧಾರದ ಮೇಲೆ ಜಿಲ್ಲಾಡಳಿತ ಅನುಮತಿ ನೀಡಲಿದೆ. ಇದುವರೆಗೆ ಜಿಲ್ಲಾಡಳಿತಕ್ಕೆ ಇಂತಹ ೩೮ ಅರ್ಜಿಗಳು ಬಂದಿವೆ.

ನ್ಯಾಯಪೀಠದ ಆದೇಶದಂತೆ ಎಲ್ಲಾ ಪಟಾಕಿ ಹಾಗೂ ಅವುಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಮತ್ತು ಕ್ಯೂಆರ್ ಕೋಡ್ ಇರಲಿದೆ. ೧೨೫ ಡೆಸಿಬಲ್‌ಗಿಂತ (ಡಿಬಿ) ಹೆಚ್ಚು ಶಬ್ದವನ್ನು ಉತ್ಪಾದಿಸುವ ಪಟಾಕಿಗಳನ್ನು ಕಾನೂನು ಬಾಹಿರವೆಂದು ಪರಿಗಣಿಸಲಾಗಿದೆ. ಹೆಚ್ಚಿನ ಮಿತಿಯ ಪಟಾಕಿ ಬಳಕೆ ಪರಿಸರಕ್ಕೆ ಮತ್ತು ಸಾರ್ವಜನಿಕ ಆರೋಗ್ಯಕ್ಕೆ ಹಾನಿಕಾರಕ ಎಂದು ಪರಿಗಣಿಸಲಾಗಿದೆ.

ಹಸಿರು ಪಟಾಕಿಗಳು ಮಾಲಿನ್ಯವನ್ನು ಕಡಿಮೆ ಮಾಡುತ್ತವೆ. ಧ್ವನಿಮಟ್ಟದ ಮಿತಿಯ ನಿಯಮಕ್ಕೆ ಪೂರಕವಾಗಿವೆ ಎಂಬುದು ಪರಿಸರ ಇಲಾಖೆಯ ಹೇಳಿಕೆ. ೧೨೫ ಡೆಸಿಬೆಲ್ ಮೀರಿದರೆ ಅದರಿಂದ ಶ್ರವಣ ಶಕ್ತಿಗೆ, ಕಿವಿಯ ಸೂಕ್ಷ್ಮ ರಚನೆಗಳಿಗೆ ಹಾನಿ ಉಂಟಾಗಲೂಬಹುದು. ಇದರಿಂದಾಗಿ ತಾತ್ಕಾಲಿಕವಾಗಿ ಅಥವಾ ಶಾಶ್ವತ ವಾಗಿ ಕಿವುಡುತನ ಎದುರಾಗಲೂಬಹುದು. ಇಂತಹ ಅಪಾಯ ತಪ್ಪಿಸಲು ಹಸಿರು ಪಟಾಕಿಗಳನ್ನು ಬಳಸಲು ತಿಳಿಸಲಾಗಿದೆ.

ಅದೂ ಅಲ್ಲದೇ, ಹೆಚ್ಚಿನ ಶಬ್ದವು ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುತ್ತದೆ. ಅದರಲ್ಲಿಯೂ ವೃದ್ಧರು, ಗರ್ಭಿಣಿಯರು ಮತ್ತು ಚಿಕ್ಕ ಮಕ್ಕಳು ಹೆಚ್ಚಿನ ಶಬ್ದದಿಂದ ಘಾಸಿಯಾಗುವಂತಹ ದೈಹಿಕ ಮತ್ತು ಮಾನಸಿಕ ಸಮಸ್ಯೆಗಳನ್ನು ಎದುರಿಸಬಹುದಾದ ಸನ್ನಿವೇಶ ಬರಲೂಬಹುದು. ಶ್ವಾನ, ಇನ್ನಿತರ ಪ್ರಾಣಿಗಳೂ ದೊಡ್ಡ ಮಟ್ಟದ ಶಬ್ದದಿಂದ ಭಾರೀ ಗಾಬರಿಯಾಗುತ್ತವೆ. ಅವುಗಳಲ್ಲಿಯೂ ಮಾನಸಿಕ ಒತ್ತಡ ಉಂಟಾಗಿ ಶ್ರವಣ ಶಕ್ತಿ ನಷ್ಟ ಆಗುವುದಿದೆ. ಈ ಎಲ್ಲಾ ಕಾರಣಗಳಿಂದ ಹಸಿರು ಪಟಾಕಿಗಳನ್ನು ಮಾತ್ರವೇ ಬಳಸಬೇಕು ಎಂಬುದು ಜಿಲ್ಲಾಧಿಕಾರಿ ಅವರ ಮನವಿ.

” ಅ.೨೦ರಂದು ನರಕಚತುರ್ದಶಿ, ಅ.೨೧ರಂದು ಅಮಾವಾಸ್ಯೆ, ೨೨ರಂದು ದೀಪಾವಳಿ ಹಬ್ಬ ಇದ್ದು ಈ ಮೂರು ದಿನಗಳಂದು ಎಲ್ಲೆಡೆ ಅಧಿಕವಾಗಿ ಪಟಾಕಿ ಬಳಕೆ ಮಾಡಲಾಗುತ್ತದೆ. ನರಕಚತುದರ್ಶಿಯ ಹಿಂದಿನ, ದೀಪಾವಳಿಯ ನಂತರದ ದಿನಗಳಲ್ಲೂ ಸ್ವಲ್ಪ ಮಟ್ಟಿಗೆ ಪಟಾಕಿ ಸದ್ದು ಕೇಳಿಬರುತ್ತದೆ. ಪಟಾಕಿ ಮಾರಾಟವನ್ನು ನಿರ್ದಿಷ್ಟ ಸ್ಥಳದಲ್ಲಿಯೇ ಮಾರಾಟ ಮಾಡಬೇಕಿದೆ. ಅದರಂತೆ ಚಾಮರಾಜನಗರದಲ್ಲಿ ಮೆಗಾ ಕಾಂಪ್ಲೆಕ್ಸ್ ಹತ್ತಿರದಲ್ಲಿ ಮಾರಾಟ ಮಾಡಲು ಅನುಮತಿ ನೀಡಲಾಗಿದೆ.

” ರಾತ್ರಿ ೮ರಿಂದ ೧೦ರವರೆಗಿನ ನಿಗದಿತ ಸಮಯ ಬಿಟ್ಟು ಉಳಿದ ವೇಳೆಯಲ್ಲಿ ಪಟಾಕಿಗಳ ಬಳಕೆಯನ್ನು ಸಂಪೂರ್ಣವಾಗಿ ನೀಷೇಧಿಸಲಾಗಿದೆ.”

-ಸಿ.ಟಿ.ಶಿಲ್ಪಾ ನಾಗ್, ಜಿಲ್ಲಾಧಿಕಾರಿ

” ಜಿಲ್ಲೆಯ ಜನತೆ ಹಸಿರು ಪಟಾಕಿಯನ್ನೇ ಬಳಕೆ ಮಾಡಬೇಕು. ಸಾಧ್ಯವಾದರೆ, ಪಟಾಕಿ ಬದಲು ದೀಪ ಹಚ್ಚಿ ಬೆಳಕಿನ ಹಬ್ಬ ಆಚರಿಸಬೇಕು. ಇದರಿಂದ ಮನುಷ್ಯ, ಪ್ರಾಣಿ, ಸಸ್ಯ ಸಂಕುಲಗಳಿಗೆ ಅತ್ಯಂತ ಒಳ್ಳೆಯದು.”

-ಕೆ.ಎಲ್.ಸವಿತಾ, ಪರಿಸರ ಅಧಿಕಾರಿ, ಚಾ.ನಗರ

ಆಂದೋಲನ ಡೆಸ್ಕ್

Recent Posts

ಅಗತ್ಯ ಸುರಕ್ಷತಾ ಕ್ರಮಗಳೊಂದಿಗೆ ಬಂಡೀಪುರ-ನಾಗರಹೊಳೆ ಸಫಾರಿ ಆರಂಭಿಸಿ: ಸಿಎಂ ಡಿ.ಕೆ.ಶಿವಕುಮಾರ್‌ ಸೂಚನೆ

ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್‌…

2 hours ago

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

2 hours ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

3 hours ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

3 hours ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

4 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

4 hours ago