Andolana originals

ಬೆಳೆದ ಬೆಳೆ ಜಿಂಕೆಗಳ ಪಾಲು; ರೈತರು ಕಂಗಾಲು

ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳ ಜಮೀನುಗಳಿಗೆ ಜಿಂಕೆಗಳ ಹಿಂಡು ಲಗ್ಗೆ; ಬೆಳೆ ನಾಶ

ದಾ.ರಾ.ಮಹೇಶ್

ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕಿನ ಬಿ.ಆರ್. ಕಾವಲು, ಹೆಬ್ಬಾಳ, ಕಿಕ್ಕೇರಿಕಟ್ಟೆ,  ಬೆಕ್ಯಶೆಡ್, ಮುದಗನೂರು, ಕೊಳವಿಗೆ,  ಕಚುವಿನಹಳ್ಳಿ, ನೇರಳಕುಪ್ಪೆ ಮತ್ತಿತರ ಭಾಗಗಳಲ್ಲಿ ಜಿಂಕೆಗಳು ಹೊಲಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿರುವುದು ರೈತರನ್ನು ಕಂಗಾಲಾಗಿಸಿದೆ.

ಬೇಸಿಗೆಯಲ್ಲಿ ಬರುವ ಅಲ್ಪ ಸ್ವಲ್ಪ ಕೊಳವೆಬಾವಿ ನೀರಿನಿಂದ ಬಿತ್ತನೆ ಮಾಡಿ ಜೋಳ, ಹತ್ತಿ ಹಾಗೂ ಎಲೆಕೋಸು, ಬೀನ್ಸ್ ಮುಂತಾದ ತರಕಾರಿಗಳು,  ಬೆಳೆಗಳನ್ನು ಬೆಳೆಯುವ ಪ್ರಯತ್ನದಲ್ಲಿರುವ ರೈತರು ಜಿಂಕೆಗಳ ಹಾವಳಿಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಬೆಳೆದ ಬೆಳೆಯನ್ನು ಉಳಿಸಿಕೊಳ್ಳಬೇಕೆಂದು ರೈತರು ಹಗಲು, ರಾತ್ರಿ -ಸಲು ಕಾಯುತ್ತಿದ್ದಾರೆ.  ಒಂದೊಂದು ಹಿಂಡಿನಲ್ಲಿ ೩೦- ೪೦ರಷ್ಟಿರುವ ಜಿಂಕೆಗಳು ಕೇವಲ ಅರ್ಧ ಗಂಟೆಯಲ್ಲಿ ೨-೩ ಎಕರೆ ಪ್ರದೇಶದಲ್ಲಿನ ಬೆಳೆಗಳನ್ನು ನಾಶಪಡಿಸುತ್ತಿವೆ. ಮನುಷ್ಯನ ವಾಸನೆ ಬಂದೊಡನೆಯೇ ಅಲ್ಲಿಂದ ಜಾಗ ಖಾಲಿ ಮಾಡುತ್ತವೆ ಎನ್ನುತ್ತಾರೆ ರೈತರು.

ಜವಾಬ್ದಾರಿ ಮರೆತ ಅರಣ್ಯ ಇಲಾಖೆ: ಜಿಂಕೆಗಳ ಸಂರಕ್ಷ ಣೆ ಜವಾಬ್ದಾರಿ ಹೊರಬೇಕಿದ್ದ ಅರಣ್ಯ ಇಲಾಖೆಯ ಬೇಜವಾಬ್ದಾರಿಯಿಂದ ಜಿಂಕೆಗಳು ಕೃಷಿಕರ ಜಮೀನುಗಳಲ್ಲಿ ಬೆಳೆ ತಿನ್ನುತ್ತಿವೆ. ಮಳೆಯಾಶ್ರಿತ ಬೆಳೆಗಳು ಜಿಂಕೆಗಳ ಪಾಲಾಗುತ್ತಿವೆ. ಬೆಳೆ ರಕ್ಷಿಸಿಕೊಳ್ಳಲು ಬೆಳಿಗ್ಗೆಯಿಂದ ಸಂಜೆಯವರೆಗೂ ಹಾಗೂ  ರಾತ್ರಿಯಿಂದ ಬೆಳಗಿನವರೆಗೂ ಸರದಿಯಲ್ಲಿ ಕಾಯಬೇಕಿದೆ. ಸ್ವಲ್ಪ ಯಾಮಾರಿದರೂ ಜಿಂಕೆಗಳು ಜಮೀನಿಗೆ ಬಂದು ಪೈರು ತಿಂದು ಹಾಕುತ್ತವೆ ಎನ್ನುವುದು ಈ ಭಾಗದ ರೈತರ ಆರೋಪವಾಗಿದೆ.

ಜಿಂಕೆಗಳ ಸಂತತಿ ಹೆಚ್ಚಳ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಪಕ್ಕದಲ್ಲೇ ಇರುವುದರಿಂದ ಪ್ರತಿ ವರ್ಷ ಜಿಂಕೆಗಳ ಸಂತತಿ ಹೆಚ್ಚುತ್ತಲೇ ಇದೆ. ರೈತರ ಬೆಳೆ ಪ್ರತಿವರ್ಷ ನಾಶವಾಗುವುದನ್ನು ಸರ್ಕಾರ ಗಮನಿಸುತ್ತಿಲ್ಲ. ಪ್ರತಿ ವರ್ಷಗಳ ಮುಂಗಾರು ಬೆಳೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿವೆ. ಆದರೆ, ಪರಿಹಾರ ಮಾತ್ರ ಸಿಕ್ಕಿಲ್ಲ ಎನ್ನುತ್ತಾರೆ ರೈತರು.

ಪುಡಿಗಾಸಿನ ಪರಿಹಾರ: ರೈತರು ಲಕ್ಷಾಂತರ ರೂ. ಖರ್ಚು ಮಾಡಿ ಬೆಳೆದ ಬೆಳೆ ಹಾನಿಗೆ ಅರಣ್ಯ ಇಲಾಖೆ ಕೊಡುವ ಪುಡಿಗಾಸಿನ ಪರಿಹಾರ ಯಾವುದಕ್ಕೂ ಸರಿಯಾಗುವುದಿಲ್ಲ.  ಬೀನ್ಸ್, ಅವರೆಕಾಯಿ, ಜೋಳ, ಹತ್ತಿ ಸೇರಿದಂತೆ ಇತರೆ ಸಸಿಗಳು ಜಿಂಕೆಗಳ ಹಾವಳಿಗೆ ನಲುಗುತ್ತಿದ್ದು, ಈ ಭಾಗದ ರೈತರಲ್ಲಿ ಆತಂಕ ಸೃಷ್ಟಿಯಾಗಿದೆ.

” ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಹಲವು ಸಭೆ ಸಮಾರಂಭಗಳಲ್ಲಿ ರೈತರು ಜಿಂಕೆಗಳ ಹಾವಳಿ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಮಾರ್ಚ್ ತಿಂಗಳಲ್ಲಿ ನಡೆಯುವ ವಿಧಾನಸಭೆ ಅಽವೇಶನದಲ್ಲಿ ಈ ಕುರಿತು ಚರ್ಚೆ ಮಾಡಿ ಜಿಂಕೆಗಳ ಹಾವಳಿ ತಡೆಯುವಂತೆ ಒತ್ತಾಯ ಮಾಡುತ್ತೇನೆ.”

 -ಜಿ.ಡಿ.ಹರೀಶ್ ಗೌಡ,   ಶಾಸಕರು, ಹುಣಸೂರು

” ಜಿಂಕೆಗಳ ಹಾವಳಿ ತಡೆಗಟ್ಟಲು ಶಾಶ್ವತ ಕ್ರಮ ಕೈಗೊಳ್ಳಬೇಕು ಮತ್ತು ದಾಳಿಯಿಂದಾದ ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಪ್ರತಿ ವರ್ಷ ರೈತರು ಅರಣ್ಯ, ಕಂದಾಯ ಇಲಾಖೆಗಳ ಮೂಲಕ ಜಿಲ್ಲಾಧಿಕಾರಿ ಹಾಗೂ ಸರ್ಕಾರಕ್ಕೆ ಸಾಕಷ್ಟು ಬಾರಿ ಮನವಿ ಮಾಡಿದರೂ ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ.”

ಭರತವಾಡಿ ವೆಂಕಟೇಶ್,   ಗ್ರಾಪಂ ಉಪಾಧ್ಯಕ್ಷ, ದೊಡ್ಡಹೆಜ್ಜೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago