ಓದುಗರ ಪತ್ರ
ನಾಗಮೋಹನದಾಸ್ ಏಕ ಸದಸ್ಯ ಆಯೋಗವು ಒಳ ಮೀಸಲಾತಿ ಕುರಿತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದರೂ ಈ ವರದಿಯನ್ನು ಜಾರಿಗೆ ತರಲು ಸರ್ಕಾರ ವಿಳಂಬ ಮಾಡುತ್ತಿರುವ ಕಾರಣ ರಾಜ್ಯದ ಲಕ್ಷಾಂತರ ಸ್ಪರ್ಧಾರ್ಥಿಗಳ ಬದುಕು ಅತಂತ್ರಗೊಂಡಿದೆ.
ಬದುಕು ಕಟ್ಟಿಕೊಳ್ಳಲು ಮನೆ ಮಠ ಹಾಗೂ ಊರು ಬಿಟ್ಟು ಸರ್ಕಾರಿ ಉದ್ಯೋಗ ಪಡೆಯಲು ಸಾಕಷ್ಟು ಸ್ಪರ್ಧಾ ಆಕಾಂಕ್ಷಿಗಳು ಹಂಬಲಿಸುತ್ತಿದ್ದಾರೆ. ಒಳಮೀಸಲಾತಿ ಜಾರಿಗೊಳಿಸುವ ಸಂಬಂಧ ಏಕ ಸದಸ್ಯ ಆಯೋಗ ರಚನೆಯಾದ ದಿನದಿಂದ ಸರ್ಕಾರ ನೇಮಕಾತಿಗಳ ಅಽಸೂಚನೆಗೆ ತಡೆ ಹಿಡಿದಿರುವುದು ಸ್ಪರ್ಧಾರ್ಥಿಗಳು ಅತಂತ್ರ ಗೊಳ್ಳುವಂತೆ ಮಾಡಿದೆ.
ರಾಜ್ಯ ಸರ್ಕಾರವು ಸ್ಪರ್ಧಾರ್ಥಿಗಳ ಹಿತದೃಷ್ಟಿಯಿಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೆ ತರುವ ಮೂಲಕ ರಾಜ್ಯ ಸರ್ಕಾರದ ವಿವಿಧಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಽಸೂಚನೆಯನ್ನು ಹೊರಡಿಸುವುದರ ಜೊತೆಗೆ ವಯೋಮಿತಿಯಲ್ಲೂ ಸಡಿಲಿಕೆ ಮಾಡಬೇಕಿದೆ.
– ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…