Andolana originals

ಜಾತಿ-ಆದಾಯ ಪ್ರಮಾಣಪತ್ರ ವಿತರಣೆ ವಿಳಂಬ

ಚನ್ನೇಶ ಬಿ.ಇದರಮನಿ

ಸಿಬ್ಬಂದಿಗಳ ಕೊರತೆಯಿಂದ ಸಕಾಲದಲ್ಲಿ ಆಗದ ಕೆಲಸ; ಸಾರ್ವಜನಿಕರ ಆಕ್ರೋಶ

ಮೈಸೂರು: ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಇದಕ್ಕೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಜಾತಿ- ಆದಾಯ ಪ್ರಮಾಣಪತ್ರ ಪಡೆಯಲು ಉದ್ಯೋಗಾಕಾಂಕ್ಷಿಗಳು ಕಚೇರಿಗಳಿಗೆ ದಿನ ನಿತ್ಯ ಅಲೆಯುವಂತಾಗಿದೆ.

ಕೃಷ್ಣಮೂರ್ತಿಪುರಂನಲ್ಲಿರುವ ಮಹಾನಗರ ಪಾಲಿಕೆಯ ವಲಯ-೨ರ ಕಚೇರಿಗೆ ಪ್ರಮಾಣಪತ್ರ ಪಡೆಯಲು ಅನೇಕರು ತಿಂಗಳುಗಳಿಂದ ಅಲೆದರೂ ಪ್ರಯೋಜನವಾಗುತ್ತಿಲ್ಲ.

ಎಸ್‌ಐಆರ್ ಪ್ರಕ್ರಿಯೆಗೆ ಪಾಲಿಕೆ ಸಿಬ್ಬಂದಿಯನ್ನು ನಿಯೋಜನೆ ಮಾಡಿರುವುದರಿಂದ ಕಚೇರಿಯ ಕೆಲಸಗಳು ವಿಳಂಬವಾಗುತ್ತಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಇದಲ್ಲದೆ, ಕಂಪ್ಯೂಟರ್ ಆಪರೇಟರ್ ಒಬ್ಬರು ಅನಾರೋಗ್ಯದಿಂದ ರಜೆಯ ಮೇಲೆ ತೆರಳಿದ್ದು, ಅವರ ಬದಲಿಗೆ ಬಂದವರು ಕಚೇರಿಯಲ್ಲಿ ಹೆಚ್ಚು ದಿನ ಕೆಲಸ ಮಾಡಲು ಆಗಿಲ್ಲ. ಕೆಲಸದ ಒತ್ತಡ ಇದಕ್ಕೆ ಕಾರಣ ಎನ್ನಲಾಗಿದೆ.

ಪ್ರಮಾಣ ಪತ್ರಗಳನ್ನು ಅರ್ಜಿ ಸಲ್ಲಿಸಿದ ೨೧ ದಿನಗಳ ಒಳಗೆ ಒದಗಿಸಬೇಕು ಎಂದು ಸಕಾಲ ನಿಯಮ ಹೇಳುತ್ತದೆ. ಆದರೆ, ಇಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ನಿಯಮ ಪಾಲನೆ ಕಷ್ಟಕರವಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಕಾಣುತ್ತಿದೆ.

ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಲು ಮಾತ್ರವಲ್ಲದೆ, ನಿವೇಶನಗಳಿಗಾಗಿ ಅರ್ಜಿ ಸಲ್ಲಿಸಲು ಸಾರ್ವಜನಿಕರಿಗೆ ಜಾತಿ-ಆದಾಯ ಪ್ರಮಾಣಪತ್ರದ ಅವಶ್ಯಕತೆ ಇದೆ. ಇದಲ್ಲದೆ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಪ್ರವೇಶ ಪಡೆದುಕೊಳ್ಳಲು, ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಜಾತಿ-ಆದಾಯ ಪ್ರಮಾಣಪತ್ರದ ಅವಶ್ಯವಿದೆ. ಇದಕ್ಕಾಗಿ ಪ್ರತಿ ನಿತ್ಯವೂ ಸಾರ್ವಜನಿಕರು, ವಿದ್ಯಾರ್ಥಿಗಳು ಕಚೇರಿಗೆ ಅಲೆದಾಡುತ್ತಿದ್ದಾರೆ. ಸಿಬ್ಬಂದಿಗಳ ಕೊರತೆಯಿಂದ ವಿಳಂಬವಾಗುತ್ತಿರುವುದು ಸಾರ್ವಜನಿಕರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

” ನಮ್ಮ ಕುಟುಂಬದಲ್ಲಿ ಐದು ಜನ ಇದ್ದೇವೆ. ವಿವಿಧ ಉದ್ದೇಶಗಳಿಗಾಗಿ ನಮಗೆ ಜಾತಿ-ಆದಾಯ ಪ್ರಮಾಣಪತ್ರದ ಅವಶ್ಯವಿದೆ. ಅದರಲ್ಲೂ ನಮ್ಮ ಮಕ್ಕಳು ಅರಣ್ಯ ಇಲಾಖೆಯ ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಬೇಕಿದೆ.ಕಳೆದ ೧೦ ದಿನಗಳಿಂದ ಪ್ರಮಾಣಪತ್ರಕ್ಕೆಅಲೆದಾಡುತ್ತಿದ್ದೇವೆ. ಆದರೆ, ವಿವಿಧ ಕಾರಣನೀಡಿ, ಪ್ರಮಾಣಪತ್ರ ವಿತರಿಸಲು ವಿಳಂಬ ಮಾಡುತ್ತಿದ್ದಾರೆ. ಇದರಿಂದಾಗಿ ನಾವು ಏನು ಮಾಡಬೇಕೆಂಬುದು ತಿಳಿಯುತ್ತಿಲ್ಲ.”

ಜೆ.ಎಸ್.ಹೋಮದೇವ್, ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಚುಟುಕು ಸಾಹಿತ್ಯ ಪ್ರಶಸ್ತಿ ಸೇರ್ಪಡೆ ಸ್ವಾಗತಾರ್ಹ

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…

2 hours ago

ವೈಚಾರಿಕ ಕ್ರಾಂತಿಯ ವಚನಕಾರ ಹಡಪದ ಅಪ್ಪಣ್ಣ

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…

2 hours ago

ಹವಾಮಾನ ಬದಲಾವಣೆ; ಹುಲಿಗಳಿಗೆ ಹೊಸ ಅಪಾಯ?

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…

2 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಗೌರವ್ ಶುಕ್ಲಾ ಎಂಬ ‘ಸಮವಸ್ತ್ರವಿಲ್ಲದ ಸೈನಿಕ’

‘ಸಪೋರ‍್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ  ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…

2 hours ago

ಮಲ್ಲಳ್ಳಿ ಜಲಪಾತದ ರೋಪ್‌ವೇ ಯೋಜನೆಗೆ ವೇಗ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್‌ವೇ ಯೋಜನೆಗೆ ವೇಗ ದೊರೆತಿದೆ.…

2 hours ago

ಮೀನುಗಾರಿಕೆ ಉತ್ತೇಜನಕ್ಕೆ ಸಂಚಾರ ಮತ್ಸ್ಯ ವಾಹಿನಿ

ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…

2 hours ago