Andolana originals

ಮಾರ್ಗಸೂಚಿ ಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆಗೆ ಆಗ್ರಹ

ಮೈಸೂರು: ನಾಡಹಬ್ಬ ದಸರೆಯಲ್ಲಿ ಹೊಸದಾಗಿ ಅಳವಡಿಸಿರುವ ಮಾರ್ಗಸೂಚಿ ಫಲಕಗಳಲ್ಲಿ ಇಂಗ್ಲಿಷ್ ಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿದ ಕನ್ನಡ ಪರ ಹೋರಾಟಗಾರರು, ಹಲವೆಡೆ ‘ಕನ್ನಡ ಮೊದಲು’ ಎಂಬುದಾಗಿ ಕಪ್ಪು ಬಣ್ಣದಲ್ಲಿ ಬರೆಯುವ ಮೂಲಕ ಪ್ರತಿಭಟಿಸಿದರು.

ಸೋಮವಾರದವರೆಗೂ ಕನ್ನಡ ಭಾಷೆಯುಳ್ಳ ಮಾರ್ಗ ಸೂಚಿ ಫಲಕಗಳನ್ನು ಹಾಕಿದ್ದ ಪೊಲೀಸರು, ದಿಢೀರ್ ‘ನೋ ಪಾರ್ಕಿಂಗ್’ ಎಂಬ ಇಂಗ್ಲಿಷ್ ಪ್ರಧಾನವಾದ ನೂರಾರು ಫಲಕ ಗಳನ್ನು ಹಾಕಿರುವುದು ಖಂಡನೀಯ ಎಂದು ಕನ್ನಡ ಪರ ಹೋರಾಟಗಾರರಾದ ಸ. ರ. ಸುದರ್ಶನ ಮತ್ತು ಅರವಿಂದ ಶರ್ಮ ಆಕ್ರೋಶ ವ್ಯಕ್ತಪಡಿಸಿದರು.

ಹಾಗೆಯೇ ಆಹಾರಮೇಳದಲ್ಲಿ ಮಳಿಗೆದಾರರು ತಮ್ಮ ನಾಮಫಲಕಗಳನ್ನು ಕೋಕಾ ಕೋಲಾ ಮತ್ತು ಹ್ಯಾಂಗ್ಯೋ ಸಂಸ್ಥೆಗಳಿಗೆ ಪ್ರಾಯೋಜಿಸಲು ಅವಕಾಶಕೊಟ್ಟು, ಅವು ತಮ್ಮ ಲಾಂಛನಗಳನ್ನು ನಾಮಫಲಕದ ಪ್ರಾರಂಭ ದಲ್ಲೇ ಇಂಗ್ಲಿಷ್‌ನಲ್ಲಿ ಬರೆಯಲು ಸಮ್ಮತಿಸಿರುವುದು ವಿಷಾದನೀಯ ಎಂದು ಕಿಡಿಕಾರಿದ ಅವರು, ಆಹಾರ ಮೇಳದಲ್ಲಿ ಇಂಗ್ಲಿಷ್ ಮೆರೆಸಿದ್ದ ಕೋಕಾ ಕೋಲಾ, ಹ್ಯಾಂಗ್ಯೋ, ಕ್ವಾಲಿಟಿ ಮುಂತಾದ ಕಂಪೆನಿಗಳ ಫಲಕ ಗಳಿಗೂ ಕಪ್ಪು ಬಣ್ಣ ಬಳಿದರು. ಪೊಲೀಸರು ಪ್ರದರ್ಶಿಸಲು ಹಾಕಿ ಕೊಂಡಿರುವ ಗುರುತಿನ ಚೀಟಿಯಲ್ಲೂ ಕನ್ನಡ ಕಾಣೆಯಾಗಿದೆ. ಪೊಲೀಸ್ ಇಲಾಖೆಯು ಸರ್ಕಾರದ ಒಂದು ಭಾಗವಾಗಿದ್ದರೂ ಇಂಗ್ಲಿಷ್ ಆದ್ಯ ತೆಗೆ ಅವಕಾಶ ಕಲ್ಪಿಸಿರುವುದು ನಿಯಮ ಉಲ್ಲಂಘನೆಯಾಗಿದೆ. ಈ ಲೋಪಕ್ಕೆ ಕಾರಣರಾದ ಅಽಕಾರಿಗಳ ಮೇಲೆ ಕ್ರಮಕೈಗೊಳ್ಳಲು ಕನ್ನಡ ಅಭಿವೃದ್ಧಿ ಪ್ರಾಽಕಾರವು ಶಿಫಾರಸ್ಸು ಮಾಡಬೇಕು ಎಂದು ಅವರು ಆಗ್ರಹಿಸಿದರು.

ಜಂಬೂಸವಾರಿಯಂದು ಶೇ. ೬೦ ಕನ್ನಡ ಕಾಣಲೇಬೇಕು: ವಿಜಯದಶಮಿಯ ದಿನ ಜಂಬೂಸವಾರಿ ಮೆರವಣಿಗೆಯ ಸಂದರ್ಭದಲ್ಲಿ ಪ್ರಾಯೋಜಕರು ಶೇ. ೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯ ಕೊಟ್ಟು ತಮ್ಮ ಪ್ರಚಾರ ಫಲಕಗಳನ್ನು ಹಾಕಬೇಕು. ಇಲ್ಲದಿದ್ದರೆ. ‘ನಮ್ಮನ್ನು ಬಂಽಸಿದರೂ ಸರಿಯೇ’ ನಾವು ಮಸಿ ಬೆಳೆಯುತ್ತೇವೆ ಎಂದು ಸ. ರ. ಸುದರ್ಶನ ಮತ್ತು ಅರವಿಂದ ಶರ್ಮ ಹೇಳಿದರು.

 

 

andolana

Recent Posts

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

12 mins ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

21 mins ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

25 mins ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

30 mins ago

ಋತುಚಕ್ರದ ರಜೆ : ತನ್ನದೆ ತಡೆಯಾಜ್ಞೆ ಹಿಂಪಡೆದ ನ್ಯಾಯಮೂರ್ತಿ…!

ಬೆಂಗಳೂರು : ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ತಿಂಗಳಲ್ಲಿ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸುವಂತೆ…

34 mins ago

ಜಪಾನ್‌ನಲ್ಲಿ ಪ್ರಬಲ ಭೂಕಂಪ : ಸುನಾಮಿ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಟೋಕಿಯೋ : ಜಪಾನ್‌ನ ಪೂರ್ವ ಮತ್ತು ಉತ್ತರ ಕರಾವಳಿ ತೀರದಲ್ಲಿ ೭.೬ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಡೀ ಪ್ರದೇಶವನ್ನೇ…

37 mins ago