ಮೈಸೂರು: ನಾಡಹಬ್ಬ ದಸರೆಯಲ್ಲಿ ಹೊಸದಾಗಿ ಅಳವಡಿಸಿರುವ ಮಾರ್ಗಸೂಚಿ ಫಲಕಗಳಲ್ಲಿ ಇಂಗ್ಲಿಷ್ ಭಾಷೆಗೆ ಆದ್ಯತೆ ನೀಡಲಾಗಿದೆ ಎಂದು ಆರೋಪಿಸಿದ ಕನ್ನಡ ಪರ ಹೋರಾಟಗಾರರು, ಹಲವೆಡೆ ‘ಕನ್ನಡ ಮೊದಲು’ ಎಂಬುದಾಗಿ ಕಪ್ಪು ಬಣ್ಣದಲ್ಲಿ ಬರೆಯುವ ಮೂಲಕ ಪ್ರತಿಭಟಿಸಿದರು.
ಸೋಮವಾರದವರೆಗೂ ಕನ್ನಡ ಭಾಷೆಯುಳ್ಳ ಮಾರ್ಗ ಸೂಚಿ ಫಲಕಗಳನ್ನು ಹಾಕಿದ್ದ ಪೊಲೀಸರು, ದಿಢೀರ್ ‘ನೋ ಪಾರ್ಕಿಂಗ್’ ಎಂಬ ಇಂಗ್ಲಿಷ್ ಪ್ರಧಾನವಾದ ನೂರಾರು ಫಲಕ ಗಳನ್ನು ಹಾಕಿರುವುದು ಖಂಡನೀಯ ಎಂದು ಕನ್ನಡ ಪರ ಹೋರಾಟಗಾರರಾದ ಸ. ರ. ಸುದರ್ಶನ ಮತ್ತು ಅರವಿಂದ ಶರ್ಮ ಆಕ್ರೋಶ ವ್ಯಕ್ತಪಡಿಸಿದರು.
ಹಾಗೆಯೇ ಆಹಾರಮೇಳದಲ್ಲಿ ಮಳಿಗೆದಾರರು ತಮ್ಮ ನಾಮಫಲಕಗಳನ್ನು ಕೋಕಾ ಕೋಲಾ ಮತ್ತು ಹ್ಯಾಂಗ್ಯೋ ಸಂಸ್ಥೆಗಳಿಗೆ ಪ್ರಾಯೋಜಿಸಲು ಅವಕಾಶಕೊಟ್ಟು, ಅವು ತಮ್ಮ ಲಾಂಛನಗಳನ್ನು ನಾಮಫಲಕದ ಪ್ರಾರಂಭ ದಲ್ಲೇ ಇಂಗ್ಲಿಷ್ನಲ್ಲಿ ಬರೆಯಲು ಸಮ್ಮತಿಸಿರುವುದು ವಿಷಾದನೀಯ ಎಂದು ಕಿಡಿಕಾರಿದ ಅವರು, ಆಹಾರ ಮೇಳದಲ್ಲಿ ಇಂಗ್ಲಿಷ್ ಮೆರೆಸಿದ್ದ ಕೋಕಾ ಕೋಲಾ, ಹ್ಯಾಂಗ್ಯೋ, ಕ್ವಾಲಿಟಿ ಮುಂತಾದ ಕಂಪೆನಿಗಳ ಫಲಕ ಗಳಿಗೂ ಕಪ್ಪು ಬಣ್ಣ ಬಳಿದರು. ಪೊಲೀಸರು ಪ್ರದರ್ಶಿಸಲು ಹಾಕಿ ಕೊಂಡಿರುವ ಗುರುತಿನ ಚೀಟಿಯಲ್ಲೂ ಕನ್ನಡ ಕಾಣೆಯಾಗಿದೆ. ಪೊಲೀಸ್ ಇಲಾಖೆಯು ಸರ್ಕಾರದ ಒಂದು ಭಾಗವಾಗಿದ್ದರೂ ಇಂಗ್ಲಿಷ್ ಆದ್ಯ ತೆಗೆ ಅವಕಾಶ ಕಲ್ಪಿಸಿರುವುದು ನಿಯಮ ಉಲ್ಲಂಘನೆಯಾಗಿದೆ. ಈ ಲೋಪಕ್ಕೆ ಕಾರಣರಾದ ಅಽಕಾರಿಗಳ ಮೇಲೆ ಕ್ರಮಕೈಗೊಳ್ಳಲು ಕನ್ನಡ ಅಭಿವೃದ್ಧಿ ಪ್ರಾಽಕಾರವು ಶಿಫಾರಸ್ಸು ಮಾಡಬೇಕು ಎಂದು ಅವರು ಆಗ್ರಹಿಸಿದರು.
ಜಂಬೂಸವಾರಿಯಂದು ಶೇ. ೬೦ ಕನ್ನಡ ಕಾಣಲೇಬೇಕು: ವಿಜಯದಶಮಿಯ ದಿನ ಜಂಬೂಸವಾರಿ ಮೆರವಣಿಗೆಯ ಸಂದರ್ಭದಲ್ಲಿ ಪ್ರಾಯೋಜಕರು ಶೇ. ೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯ ಕೊಟ್ಟು ತಮ್ಮ ಪ್ರಚಾರ ಫಲಕಗಳನ್ನು ಹಾಕಬೇಕು. ಇಲ್ಲದಿದ್ದರೆ. ‘ನಮ್ಮನ್ನು ಬಂಽಸಿದರೂ ಸರಿಯೇ’ ನಾವು ಮಸಿ ಬೆಳೆಯುತ್ತೇವೆ ಎಂದು ಸ. ರ. ಸುದರ್ಶನ ಮತ್ತು ಅರವಿಂದ ಶರ್ಮ ಹೇಳಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…